ಬಿಜೆಪಿಯಲ್ಲಿ ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ : ಕಾಂಗ್ರೆಸ್

Date:

  • ‘ಪುತ್ತಿಲ ಮೇಲೆ ಕ್ರಮ ಕೈಗೊಳ್ಳಲು ಧೈರ್ಯ ಸಾಲದೇ?’
  • ‘ಬಿಜೆಪಿಯ ಲಿಂಗಾಯತರಲ್ಲಿ ಅಸ್ತಿತ್ವದ ಭಯ ಶುರು’

ಬಿಜೆಪಿ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಆರೋಪ ಚುನಾವಣೆ ಹೊತ್ತಲ್ಲಿ ವ್ಯಾಪಕವಾಗಿದೆ. ಈ ನಡುವೆ ಕಾಂಗ್ರೆಸ್, “ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ?” ಎಂದು ಬಿಜೆಪಿ ವಿರುದ್ಧ ಕುಟುಕಿದೆ.

ಬಿಜೆಪಿ ಲಿಂಗಾಯತ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ರಾಜಕೀಯವಾಗಿ ಮುಗಿಸಿ, ಬ್ರಾಹ್ಮಣ ನಾಯಕರಿಗೆ ವೇದಿಕೆ ಕಲ್ಪಿಸಿಕೊಡುತ್ತಿದೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ಜೋರಾಗಿದೆ.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದಿರುವುದು ಇದಕ್ಕೆ ಪುಷ್ಟಿ ನೀಡಿದೆ. ಈ ನಡುವೆ ಲಂಚ ಪ್ರಕರಣದ ಎ1 ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಲ್ಲಿಕಾರ್ಜುನ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿ ವಿರುದ್ಧ ಬಂಡಾಯವೆದ್ದ ಪಕ್ಷೇತರ ಸ್ಪರ್ಧಿ ಲಿಂಗಾಯತ ಮಾಡಾಳ್ ಮಲ್ಲಿಕಾರ್ಜುನರಿಗೆ 6 ವರ್ಷ ಪಕ್ಷದಿಂದ ಉಚ್ಛಾಟನೆ. ಅದೇ ಪುತ್ತೂರಿನ ಪಕ್ಷೇತರ ಸ್ಪರ್ಧಿ ಆರೆಸ್ಸೆಸ್ಸಿನ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಯಾವುದೇ ಕ್ರಮವಿಲ್ಲ” ಎಂದು ಕುಟುಕಿದೆ.

“ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ? ಪುತ್ತಿಲ ಮೇಲೆ ಕ್ರಮ ಕೈಗೊಳ್ಳಲು ಧೈರ್ಯ ಸಾಲದೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಹಮ್ಮಿಕೊಂಡಿರುವ ಲಿಂಗಾಯತ ಸಭೆಗಳ ಕುರಿತು ಟ್ವೀಟ್ ಮಾಡಿ, “ಬಿಜೆಪಿಯ ಲಿಂಗಾಯತರಲ್ಲಿ ಅಸ್ತಿತ್ವದ ಭಯ ಶುರುವಾಗಿದೆ, ಆ ಮಟ್ಟಿಗೆ ‘ಸಂತೋಷ ಕೂಟ’ದ ಆಟ ಜೋರಿದೆ” ಎಂದು ವ್ಯಂಗ್ಯವಾಡಿದೆ.

ಈ ಸುದ್ದಿ ಓದಿದ್ದೀರಾ? ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

“ಅದರ ಪರಿಣಾಮವೇ ನಿನ್ನೆ ರಾತ್ರೋರಾತ್ರಿ ಯಡಿಯೂರಪ್ಪ ಅವರ ಮನೆಯಲ್ಲಿನ ಬಿಜೆಪಿ ಲಿಂಗಾಯತರ ಸಭೆ. ಇನ್ನೊಂದೆಡೆ ಸಂತೋಷ ಕೂಟದ ಸಭೆ. ರಾಜ್ಯ ಬಿಜೆಪಿ ನಾಯಕರೇ, ನಿನ್ನೆ ಒಂದೇ ದಿನ ನಡೆದ ಗಡಿಬಿಡಿಯ ಬೆಳವಣಿಗೆ ಇದು. ಯಾರು ಯಾರನ್ನು ಮಣಿಸಲು ಈ ಸಭೆಗಳು” ಎಂದು ಕೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...