ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

Date:

  • ಟಿಕೆಟ್‌ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ
  • ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ ಅಭ್ಯರ್ಥಿ ಶ್ರೀನಿವಾಸ್ ವಿರುದ್ಧ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ಮಾಜಿ ಶಾಸಕ ಎಸ್.ಎಂ ನಾಗರಾಜ್ ಅವರ ನಿವಾಸದಲ್ಲಿ ಮಾಜಿ ಶಾಸಕ ಟಿ.ಎಚ್‌ ಶಿವಶಂಕರಪ್ಪ, ಗೋಪಿಕೃಷ್ಣ ಹಾಗೂ 10 ಮಂದಿ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಸಭೆ ನಡೆಸಿದ್ದಾರೆ. ಎಚ್.ಐ ಗೋಪಿಕೃಷ್ಣ ಅವರನ್ನು ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 13 ಮಂದಿ ಅರ್ಜಿ ಹಾಕಿದ್ದರು. 13 ಆಕ್ಷಾಂಕಿಗಳಲ್ಲಿ ಅಂತಿಮವಾಗಿ ಮಾಜಿ ಶಾಸಕ ಶ್ರೀನಿವಾಸ್‌ಗೆ ಕಾಂಗ್ರೆಸ್‌ ಟಿಕೆಟ್ ನೀಡದ್ದು, ಉಳಿದ ಆಕ್ಷಾಂಕಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ 13 ಮಂದಿ ಆಕ್ಷಾಂಕಿಗಳಲ್ಲಿ 10 ಮಂದಿ ಆಕ್ಷಾಂಕಿಗಳು ಬಂಡಾಯದ ಸಭೆ ನಡೆಸಿ ಅಭ್ಯರ್ಥಿ ವಿರುದ್ದ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾಜಿ ಶಾಸಕ ಎಸ್.ಎಂ ನಾಗರಾಜ್ ಮಾತನಾಡಿ, “ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಕ್ಷೇತ್ರದಿಂದ 13 ಮಂದಿ ಅರ್ಜಿ ಸಲ್ಲಿಸಿದ್ದು, ಶ್ರೀನಿವಾಸ್ ಹೊರತುಪಡಿಸಿ ಯಾರಿಗಾದರೂ ಟಿಕೆಟ್ ಕೊಡುವಂತೆ ಹೇಳಿದ್ದೆವು. ಆದರೂ, ಹೈಕಮಾಂಡ್ ನಮ್ಮನ್ನು ಕಡೆಗಣಿಸಿ, ಅವರಿಗೆ ಟಿಕೆಟ್ ನೀಡಿರುವುದು ನಮ್ಮೆಲ್ಲರಿಗೂ ಬೇಸರ ತರಿಸಿದೆ” ಎಂದಿದ್ದಾರೆ.

“ಹಾಗಾಗಿ, ಗೋಪಿಕೃಷ್ಣ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ. ಎಲ್ಲರೂ ಬೆಂಬಲ ನೀಡಿ, ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದೇವೆ. ಪಕ್ಷ ಇದೀಗ ಟಿಕೆಟ್ ನೀಡಿರುವ  ಶ್ರೀನಿವಾಸ್ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ನನ್ನ ಹಾಗೂ ಪಕ್ಷದ ವಿರುದ್ಧ ಕೆಲಸ ಮಾಡಿದ್ದರು. ಆದರೂ, ಪಕ್ಷ ಅವರಿಗೆ ಅವಕಾಶ ಮಾಡಿಕೊಟ್ಟಿರುವುದು ಪಕ್ಷ ಕಟ್ಟಿ ಬೆಳೆಸಿದವರಿಗೆ ನೋವುಂಟ ಮಾಡಿದೆ. ಆದರಿಂದ, ಬಂಡಾಯ ಅಭ್ಯರ್ಥಿಯನ್ನು ಕಣಕ್ಕಳಿಸಲು ಎಲ್ಲ ಆಕಾಂಕ್ಷಿಗಳು ಒಟ್ಟಾಗಿ ನಿರ್ಧಾರ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಮಡಿವಾಳ ಸಮುದಾಯಕ್ಕೆ ತಪ್ಪಿದ ಟಿಕೆಟ್‌

ಗೋಪಿಕೃಷ್ಣ ಮಾತನಾಡಿ, “ಸಿದ್ದರಾಮಯ್ಯ ಅವರು ಎಲ್ಲ ವೇದಿಕೆಗಳಲ್ಲೂ ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುತ್ತೇನೆ ಎಂದು ಹೇಳಿಕೊಂಡು ಬರುದ ಮೂಲಕ ಆಸೆ ತೋರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಹ ನನಗೆ ಟಿಕೆಟ್ ನೀಡಲು ಸಾಕಷ್ಟು ಪ್ರಯತ್ನ ಪಟ್ಟರು. ಸಿದ್ದರಾಮಯ್ಯರಿಗೆ ನನಗೆ ಟಿಕೆಟ್ ನೀಡುವ ಮನಸ್ಸಿದರೂ ಬೈರತಿ ಸುರೇಶ್ ಮಾತಿಗೆ ಕಟ್ಟುಬಿದ್ದು, ಟಿಕೆಟ್ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...