ವರುಣಾದಲ್ಲಿ ಸೋಮಣ್ಣಗೆ ಬಿಜೆಪಿ ಯುವಕರ ಕ್ಲಾಸ್‌; ಸಂಧಾನಕ್ಕೆ ನಿಂತ ಪ್ರತಾಪ್‌ ಸಿಂಹಗೂ ತರಾಟೆ

Date:

  • ವರುಣಾದಲ್ಲಿ ಸೋಮಣ್ಣ ವಿರುದ್ಧ ಸಿಡಿದ ಯುವಕರು
  • ಮೂಲಭೂತ ಸೌಕರ್ಯ ಒದಗಿಸಿಕೊಡದ ನಾಯಕನಿಗೆ ತರಾಟೆ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ಸೋಮಣ್ಣನವರಿಗೆ ಆರಂಭಿಕ ವಿಘ್ನ ಎದುರಾಗಿದೆ.

ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು ಅಡ್ಡಗಟ್ಟಿದ ಸ್ಥಳೀಯ ಬಿಜೆಪಿ ಯುವಕರ ಗುಂಪೊಂದು ಮೂಲಸೌಕರ್ಯದ ಬೇಡಿಕೆ ಇಟ್ಟು ಮುಜುಗರಕ್ಕೀಡು ಮಾಡಿದೆ.

ಎಂದಿನಂತೆ ಇಂದು( ಏಪ್ರಿಲ್ 19ರಂದು) ವಸತಿ ಸಚಿವರು ಹಾಗೂ ಸಂಸದ ಪ್ರತಾಪ್ ಸಿಂಹ ಅವರನ್ನೊಳಗೊಂಡ ತಂಡ ಪ್ರಚಾರ ಕಾರ್ಯಕ್ಕಾಗಿ ತೆರಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ವಸತಿ ಮಂತ್ರಿಗಳಿಗೆ ಎದುರಾದ ಯುವಕರ ಗುಂಪೊಂದು ಸಚಿವರಿಗೆ ಸ್ಥಳೀಯ ಅಗತ್ಯತೆಗೆ ಅನುಗುಣವಾಗಿ ಕೆಲ ಪ್ರಶ್ನೆಗಳನ್ನು ಕೇಳಿದೆ.

ವಸತಿ ಸಚಿವರಾಗಿರುವ ನೀವು ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಿರಿ. ಆಗಿನಿಂದಲೂ ನಿಮಗೆ ನಮ್ಮೂರಿಗೊಂದು ಸಮುದಾಯ ಭವನ ಹಾಗೂ ಕೆಲವರಿಗೆ ಮನೆ ಕಟ್ಟಿಸಿಕೊಡಲು ಕೇಳಿಕೊಂಡಿದ್ದೆವು. ಆಗ ಇದರ ಬಗ್ಗೆ ಏನೂ ಮಾತನಾಡದ ನೀವು ಈಗ ವೋಟು ಕೇಳಲು ಬಂದಿದ್ದೀರಾ ನಿಮಗೆ ನೈತಿಕತೆ ಇದೆಯೇ ಎಂದು ಕೇಳಿದ್ದಾರೆ.

ಯುವಕರ ಮಾತಿನಿಂದ ಸಚಿವರು ಕಸಿವಿಸಿಗೊಂಡ ವೇಳೆ ಮಧ್ಯೆ ಪ್ರವೇಶಿಸಿದ ಸಂಸದ ಪ್ರತಾಪ್ ಸಿಂಹ ಇವೆಲ್ಲದರ ಬಗ್ಗೆ ಮಾತನಾಡೋಣ ಎಂದು ಹೇಳುವ ವೇಳೆ ಮತ್ತೆ ಅವರನ್ನೂ ಪ್ರಶ್ನಿಸಿದ ಹುಡುಗರು ನಮ್ಮ ಸಂಸದರು ಎನಿಸಿಕೊಂಡ ನೀವು ನಮಗೆ ಮಾಡಿಕೊಟ್ಟಿರುವ ಸಾಧನೆಗಳೇನು ಅನ್ನೋದನ್ನ ಹೇಳ್ತಿರಾ ಎಂದು ಕೇಳಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಹೀಗೆ ಕೆಲ ಕಾಲ ವಾಗ್ವಾದ ನಡೆಸಿದ ಯುವಕರನ್ನು ಕಡೆಗೂ ಸಮಾಧಾನ ಮಾಡಿ ಕಳುಹಿಸುವಲ್ಲಿ ಸಂಸದ ಪ್ರತಾಪ್ ಸಿಂಹ ಯಶಸ್ವಿಯಾಗಿ, ಕ್ಷೇತ್ರದಲ್ಲಾದ ಮೊದಲ ಹಿನ್ನಡೆ ವಿಚಾರವನ್ನು ಮುಚ್ಚಿಟ್ಟುಕೊಂಡು ವಸತಿ ಸಚಿವರು ಪ್ರಚಾರಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...