ಸಂಸದ ಪ್ರತಾಪ್ ಸಿಂಹಗೆ `ಮಂಗಳಾರತಿ’ ಮಾಡಿದ ವರುಣ ಮತದಾರರು

Date:

  • ‘ನಮ್ಮ ಸಂಸದರು ಈವರೆಗೂ ಕ್ಷೇತ್ರಕ್ಕೆ ಬಂದೇ ಇಲ್ಲ’
  • ಮತದಾರರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪ್ರತಾಪ್ ಸಿಂಹ

ವರುಣ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹೋದ ಕಡೆಗಳಲ್ಲೆಲ್ಲ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಯುವಕರು ಸಚಿವ ಸೋಮಣ್ಣ ಅವರಿಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಸಂಸದ ಪ್ರತಾಪ್ ಸಿಂಹ ಅವರಿಗೆ ಕ್ಷೇತ್ರದ ಜನತೆ ‘ಮಂಗಳಾರತಿ’ ಮಾಡಿದೆ.

ಹೌದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಿ ಸೋಮಣ್ಣ ಅವರನ್ನು ಅಖಾಡಕ್ಕಿಳಿಸಿದೆ. ಪ್ರತಾಪ್ ಸಿಂಹ ಜೊತೆಗೂಡಿದ ನಾಯಕರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಪ್ರಚಾರದ ವೇಳೆ ಬಿಜೆಪಿ ನಾಯಕರು ಸ್ಥಳೀಯರಿಂದ ಪ್ರಶ್ನೆಗಳನ್ನು ಎದುರಿಸುತ್ತಿದ್ದಾರೆ, ಮುಖಭಂಗ ಅನುಭವಿಸುತ್ತಿದ್ದಾರೆ.

ಸೋಮಣ್ಣ ಪರ ಮತಯಾಚನೆಗೆ ತೆರಳಿದ್ದ ಪ್ರತಾಪ್ ಸಿಂಹ ಅವರಿಗೆ ಕ್ಷೇತ್ರದ ಗ್ರಾಮವೊಂದರ ಜನರು ‘ಫುಲ್ ಕ್ಲಾಸ್‌’ ತೆಗೆದುಕೊಂಡಿದ್ದಾರೆ. “ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಏನು ಅಂತೀರಲ್ವಾ..? ಸಿದ್ದರಾಮಯ್ಯ ಹತ್ರ ಕುಳಿತುಕೊಳ್ಳಿ ಆಗ ನಿಮಗೆ ತಿಳಿಯುತ್ತೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರುಣ ಜನರ ಪ್ರಶ್ನೆಗೆ ಪ್ರತಾಪ್ ಸಿಂಹ ಕಕ್ಕಾಬಿಕ್ಕಿಯಾಗಿದ್ದಾರೆ. ಎಲ್ಲರಿಗೂ ಸಮಜಾಯಿಷಿ ಕೊಡಲು ಪ್ರತಾಪ್ ಸಿಂಹ ವರುಣ ಜನರ ಮುಂದೆ ಪರದಾಡಿದ್ದಾರೆ.

“ಅಕ್ಕಿ ನಮ್ಮದು ಚೀಲ ಮಾತ್ರ ಸಿದ್ದರಾಮಯ್ಯ ಅವ್ರದ್ದು ಅಂತೀರಾ. ಈಗ ಯಾಕೆ ಅಕ್ಕಿ ಕಡಿಮೆ ಕೊಡ್ತಿದ್ದೀರಾ. ಸಂಸದ ಶ್ರೀನಿವಾಸ್ ಪ್ರಸಾದ್ ಇದುವರೆಗೂ ಕ್ಷೇತ್ರಕ್ಕೆ ಬಂದೇ ಇಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

“ಮಹದೇವಪ್ಪ ವಿರುದ್ಧ ಮಾತಾಡ್ತೀರಾ. ರಸ್ತೆಗಳ ರಾಜ ಅಂತೀರಾ..ಬರೀ ಸುಳ್ಳು ಹೇಳ್ತೀರಾ ನಿಮ್ಮ ಕೊಡುಗೆ ಏನ್ರಿ?” ಎಂದು ಮತದಾರರು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರುಣಾದಲ್ಲಿ ಸೋಮಣ್ಣಗೆ ಬಿಜೆಪಿ ಯುವಕರ ಕ್ಲಾಸ್‌; ಸಂಧಾನಕ್ಕೆ ನಿಂತ ಪ್ರತಾಪ್‌ ಸಿಂಹಗೂ ತರಾಟೆ

ಈ ಮೊದಲೂ ಛೀಮಾರಿ ಹಾಕಿಸಿಕೊಂಡಿದ್ದ ಪ್ರತಾಪ್ ಸಿಂಹ

ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು ಅಡ್ಡಗಟ್ಟಿದ ಸ್ಥಳೀಯ ಬಿಜೆಪಿ ಯುವಕರ ಗುಂಪೊಂದು ಮೂಲಸೌಕರ್ಯದ ಬೇಡಿಕೆ ಇಟ್ಟು ಮುಜುಗರಕ್ಕೀಡು ಮಾಡಿತ್ತು.

ಯುವಕರ ಮಾತಿನಿಂದ ಸಚಿವರು ಕಸಿವಿಸಿಗೊಂಡ ವೇಳೆ ಮಧ್ಯೆ ಪ್ರವೇಶಿಸಿದ ಸಂಸದ ಪ್ರತಾಪ್ ಸಿಂಹ ಇವೆಲ್ಲದರ ಬಗ್ಗೆ ಮಾತನಾಡೋಣ ಎಂದು ಹೇಳುವ ವೇಳೆ ಮತ್ತೆ ಅವರನ್ನೂ ಪ್ರಶ್ನಿಸಿದ ಯುವಕರು ನಮ್ಮ ಸಂಸದರು ಎನಿಸಿಕೊಂಡ ನೀವು ನಮಗೆ ಮಾಡಿಕೊಟ್ಟಿರುವ ಸಾಧನೆಗಳೇನು ಅನ್ನೋದನ್ನ ಹೇಳ್ತಿರಾ ಎಂದು ಕೇಳಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...