ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

Date:

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಿಲ್ಲದೆ ಕಾಂಗ್ರೆಸ್‌ ಪ್ರಚಾರ ನಡೆಸುತ್ತಿದೆ. ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಕಾಂಗ್ರೆಸ್‌ ಮತ್ತೆ ಟಿಕೆಟ್ ನೀಡಿದೆ. ಆದರೆ, ವಿನಯ್ ಅವರಿಗೆ ಧಾರವಾಡ ಪ್ರವೇಶಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ಬಂಧ ಹೇರಿದ್ದು, ವಿನಯ್ ಪರವಾಗಿ ಅವರು ಪತ್ನಿ ಪ್ರಚಾರ ನಡೆಸುತ್ತಿದ್ದಾರೆ.

ವಿಶೇಷ ನ್ಯಾಯಾಲಯದ ಆದೆಶವನ್ನು ಪ್ರಶ್ನಿಸಿ ವಿಜಯ್ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ ಕೂಡ ಅನುಮತಿ ನೀಡಲು ಶುಕ್ರವಾರ ನಿರಾಕರಿಸಿದೆ. ಈ ನಡುವೆ, ವಿನಯ್‌ ಪರವಾಗಿ ಅವರ ಪತ್ನಿ ಶಿವಲೀಲಾ ಅವರೇ ನಾಮಪತ್ರ ಸಲ್ಲಿಸಿದ್ದರು. ಇದೀಗ, ಕ್ಷೇತ್ರದಲ್ಲಿ ಪ್ರಚಾರದ ಹೊಣೆಹೊತ್ತಿದ್ದಾರೆ. ಅವರೊಂದಿಗೆ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷರು ಸಾಥ್‌ ನೀಡುತ್ತಿದ್ದಾರೆ. ಅವರು ಪಕ್ಷದ ಸ್ಥಳೀಯ ಕಾರ್ಯಕರ್ತರೊಂದಿಗೆ ಪ್ರತಿ ಹಳ್ಳಿಗೆ ಭೇಟಿ ನೀಡಿ ಮತದಾರರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ.

“ಪ್ರಚಾರ ಚಟುವಟಿಕೆಗಳ ಕುರಿತು ಯೋಜಿಸಲು ಮತ್ತು ದಿನಚರಿ ಪಾಲಿಸಲು ಹಿರಿಯರ ಸಹಾಯ ಪಡೆಯುತ್ತಿದ್ದೇನೆ. ನಮ್ಮ ಕ್ಷೇತ್ರದ ಎಲ್ಲ ಗ್ರಾಮಗಳ ಜನರೊಂದಿಗೆ ಸಭೆ ನಡೆಸುತ್ತೇನೆ. ಗ್ರಾಮೀಣ ಭಾಗದ ರೈತರು ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವ ಕಾರಣ ಜನರು ನೀಡಿದ ಸಮಯಕ್ಕೆ ನಾವು ಭೇಟಿ ನೀಡುತ್ತೇವೆ. ಮಹಿಳೆಯರು ಸೇರಿದಂತೆ ಮತದಾರರು ಬೆಂಬಲ ಸೂಚಿಸುತ್ತಿದ್ದಾರೆ. ವಿನಯ್ ಅವರನ್ನು ಗೆಲ್ಲಿಸಬೇಕು. ಆ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸಬೇಕು,” ಎಂದು ಶಿವಲೀಲಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿನಯ್ ಅವರು ಸಚಿವ ಮತ್ತು ಶಾಸಕರಾಗಿದ್ದ ಅವಧಿಯಲ್ಲಿ ಕೈಗೊಂಡ ಗ್ರಾಮಗಳಲ್ಲಿ ರಸ್ತೆ, ಕೆರೆಗಳ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಎತ್ತಿ ತೋರಿಸುತ್ತೇನೆ. ಪ್ರಚಾರವನ್ನು ಮುನ್ನಡೆಸುವುದು ನನಗೆ ದೊಡ್ಡ ಸವಾಲಾಗಿದೆ. ಆದರೆ, ಎಲ್ಲ ಮತದಾರರನ್ನು ತಲುಪಲು ನಾನು ನನ್ನ ಪ್ರಯತ್ನ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಅವರಿಗೆ ಕೆಲವು ಷರತ್ತುಗಳನ್ನು ವಿಧಿಸಿ, ವಿಶೇಷ ನ್ಯಾಯಾಲಯವು ಜಾಮೀನು ನೀಡಿತ್ತು. ಅದರಲ್ಲಿ, ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರವಾಡಕ್ಕೆ ಪ್ರವೇಶಿಸಬಾರದೆಂದು ತಾಕೀತು ಮಾಡಿತ್ತು. ತನ್ನ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸಿ, ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ವಿನಯ್ ಅರ್ಜಿ ಸಲ್ಲಿಸಿದ್ದರು.

ಆದರೆ, ಅನುಮತಿ ನೀಡಲು ನಿರಾಕರಿಸಿದ್ದ ಕೋರ್ಟ್‌, ಅರ್ಜಿಯನ್ನ ವಜಾಗೊಳಿಸಿತ್ತು. ಇದೀಗ, ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ವಿನಯ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...