ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ : ಮನೋಜ್ ಕುಮಾರ್​ ಮೀನಾ

Date:

  • ಈ ಬಾರಿ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರ; ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ
  • ನೀತಿ ಸಂಹಿತೆ ಜಾರಿ; ರಾಜಕಾರಣಿಗಳು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ: ಮನೋಜ್ ಕುಮಾರ್​ ಮೀನಾ

ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಮೇ 10ರಂದು 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್​ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್​ ಮೀನಾ ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ಮುಖ್ಯಚುನಾವಣಾಧಿಕಾರಿ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಈ ಕ್ಷಣದಿಂದಲೇ ರಾಜಕಾರಣಿಗಳು ಯಾವುದೇ ಸರ್ಕಾರಿ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಯಾವುದೇ ಅಧಿಕಾರಿಗಳ ಸಭೆ ನಡೆಸಲು ರಾಜಕಾರಣಿಗಳಿಗೆ ಅವಕಾಶವಿಲ್ಲ. ಯಾವುದೇ ಕಡತಕ್ಕೂ ಅವರು ಸಹಿ ಹಾಕುವಂತಿಲ್ಲ. ಹಾಗೆಯೇ ಹೊಸ ಕಾರ್ಯಕ್ರಮ ಅನುಷ್ಠಾನ ಮಾಡುವಂತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. ಹಾಗೆಯೇ 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೇ 10 ಬರೀ ಮತದಾನ ದಿನವಲ್ಲ; ಭ್ರಷ್ಟಾಚಾರ ನಿರ್ಮೂಲನಾ ದಿನ: ಡಿ ಕೆ ಶಿವಕುಮಾರ್‌

“ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗಿದೆ. ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿಯೇ ತೆರಳಲಿದ್ದಾರೆ. ಆ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಇರುತ್ತಾರೆ. ಆದರೆ, ಮತದಾನದ ಗೌಪ್ಯತೆ ಕಾಪಾಡಲಾಗುತ್ತೆ” ಎಂದು ವಿವರಿಸಿದರು.

ಹೊಸ ಇವಿಎಂ, ವಿವಿಪ್ಯಾಟ್

“ಹೈದ್ರಾಬಾದ್ ನಿಂದ ಹೊಸ ಇವಿಎಂ, ವಿವಿಪ್ಯಾಟ್ ಬಂದಿವೆ. ಯಾವ ಚುನಾವಣೆಯಲ್ಲೂ ಇವನ್ನು ಬಳಸಿಲ್ಲ. ಮೊದಲ ಬಾರಿಗೆ ಕರ್ನಾಟಕದಲ್ಲಿ ಇವುಗಳನ್ನು ಬಳಸಲಾಗುತ್ತಿದೆ. ಈ ಬಾರಿ ಇವಿಎಂ ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಎಂದಿನಂತೆ ಇರಲಿದೆ” ಎಂದು ತಿಳಿಸಿದರು.

“ಮತಗಟ್ಟೆಗಳಲ್ಲಿ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. 3 ಲಕ್ಷ ಸಿಬ್ಬಂದಿ ಚುನಾವಣೆ ಕಾರ್ಯ ನಿರ್ವಹಿಸಲಿದ್ದಾರೆ. ಅವರೆಲ್ಲರಿಗೂ ಈಗಾಗಲೇ ತರಬೇತಿ ಕೊಡಲಾಗಿದೆ. 89 ಸಾವಿರ ವಿವಿ ಪ್ಯಾಟ್ ಗಳು ಬಳಕೆಯಾಗುತ್ತಿವೆ. 1 ಲಕ್ಷ 834 ಸೆಕ್ಸ್ ವರ್ಕರ್ಸ್ ರಾಜ್ಯದಲ್ಲಿದ್ದಾರೆ. ಅವರನ್ನು ಮತ ಪಟ್ಟಿಗೆ ಸೇರಿಸಿದ್ದೇವೆ. ಬೆಂಗಳೂರು ದಕ್ಷಿಣ ಕ್ಷೇತ್ರ ದೊಡ್ಡ ಕ್ಷೇತ್ರ. 6 ಲಕ್ಷ 91 ಸಾವಿರ ಮತದಾರರು ಅಲ್ಲಿದ್ದಾರೆ. ಶೃಂಗೇರಿ ಅತಿ ಕಡಿಮೆ ಮತದಾರರಿರುವ ಕ್ಷೇತ್ರ. ಬೆಳಗಾವಿಯಲ್ಲಿ ಅತಿ ಹೆಚ್ಚು ಮತಗಟ್ಟೆಗಳಿವೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 ಅನಿವಾಸಿ ಭಾರತೀಯರ ಹೆಸರು ಸೇರ್ಪಡೆ ಮಾಡಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...