ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

Date:

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ? ಎಂದು ಸಚಿವ ಆರ್ ಅಶೋಕ ಹೇಳಿದರು.

ʼಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆʼ ಎಂದು ಬಿಜೆಪಿ ನಾಯಕರು ಆಹ್ವಾನಿಸಿದ್ದಾರೆ ಎಂದು ಸ್ವತಃ ರಮ್ಯಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ರಮ್ಯಾ ಅವರ ಈ ಹೇಳಿಕೆಗೆ ಸಚಿವ ಆರ್ ಅಶೋಕ್ ಭಾನುವಾರ ತಿರುಗೇಟು ನೀಡಿದ್ದಾರೆ.

ಇಂಗ್ಲಿಷ್‌ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ್ದ ರಮ್ಯಾ, “ನಾನು ಕೆಲವು ಬಾರಿ ಕಾಂಗ್ರೆಸ್‌ ವಿರುದ್ಧ ಮಾತನಾಡಿದ್ದಾಗ ಬಿಜೆಪಿಯಿಂದ ಆಫರ್‌ ಬಂದಿತ್ತು. ಆದರೆ, ನಾನು ಯಾವುದೇ ಭಿನ್ನಭಿಪ್ರಾಯ ಕಾರಣಕ್ಕೆ ಬಿಜೆಪಿಗೆ ಹೋಗಲಿಲ್ಲ. ಹಾಗಂತ ನನಗೆ ಬಿಜೆಪಿ ಮೇಲೆ ದ್ವೇಷ ಇಲ್ಲ. ಆದರೆ, ಅವರ ಕೆಲವೊಂದು ಸಿದ್ಧಾಂತಗಳಿಗೆ ನನ್ನ ವಿರೋಧವಿದೆ” ಎಂದು ಹೇಳಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಆಕಸ್ಮಿಕವಾಗಿ ಭೇಟಿಯಾದಾಗ, ʼನೀವು ಏಕೆ ರಾಜಕೀಯವನ್ನು ಬಿಟ್ರಿ? ಮತ್ತೆ ರಾಜಕೀಯಕ್ಕೆ ಬನ್ನಿ, ನಿಮಗೆ ಸಾಮರ್ಥ್ಯವಿದೆ. ರಾಜಕೀಯ ಕ್ಷೇತ್ರವನ್ನು ಬಿಡಬೇಡಿʼ ಎಂದು ಸಲಹೆ ನೀಡಿದ್ದರು” ಎಂದು ರಮ್ಯಾ ಹೇಳಿದ್ದರು.

“ಕಾಂಗ್ರೆಸ್‌ ಈ ಬಾರಿ ಆರು ಕ್ಷೇತ್ರಗಳ ಟಿಕೆಟ್‌ ಅನ್ನು ನನಗೆ ಆಫರ್‌ ಮಾಡಿತ್ತು. ಆದರೆ, ನಾನು ಇನ್ನೂ ತಯಾರಾಗಿಲ್ಲ. ಚುನಾವಣೆಗೆ ನಿಲ್ಲಲು ಗ್ರೌಂಡ್‌ನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಸಂಪೂರ್ಣ ಸಮಯ ವಿನಿಯೋಗಿಸಬೇಕು. ಅದು ಈಗ ನನಗೆ ಸಾಧ್ಯವಿಲ್ಲ. ನಾನು ಸ್ಪರ್ಧಿಸದೇ ಪಕ್ಷಕ್ಕೆ ಬೆಂಬಲ ನೀಡುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ದೇನೆ ಎಂದು ರಮ್ಯಾ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...