ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

Date:

  • ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಸಮೀಕ್ಷೆ
  • ರಾಜ್ಯದ ಚುನಾವಣಾ ಇತಿಹಾಸದಲ್ಲಿ ಅತಿದೊಡ್ಡ ಸಮೀಕ್ಷೆ

ಜನರೇ ರೂಪಿಸಿಕೊಂಡಿರುವ ‘ಈ ದಿನ.ಕಾಮ್‌’ ಸುದ್ದಿ ಮಾಧ್ಯಮ ನಡೆಸಿರುವ ವೈಜ್ಞಾನಿಕ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಸಮೀಕ್ಷೆಯು ಕೋಮುವಾದ, ಹಿಂದುತ್ವದ ಮೇಲೆ ರಾಜಕಾರಣ ಮಾಡುತ್ತಾ ಭ್ರಷ್ಟಾಚಾರ, ಕಮಿಷನ್, ಅಸಮರ್ಥ ಆಡಳಿತದ ಆರೋಪ ಎದುರಿಸುತ್ತಿರುವ ಬಿಜೆಪಿಯ ನಿದ್ದೆಗೆಡಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಅತ್ಯಂತ ದೊಡ್ಡ ಸಮೀಕ್ಷೆಯನ್ನು ‘ಈ ದಿನ.ಕಾಮ್‌’ ನಡೆಸಿದೆ. ಸುಮಾರು 41 ಸಾವಿರಕ್ಕೂ ಅಧಿಕ ಜನರನ್ನು ಸಂಪರ್ಕಿಸಿ ಮೆಗಾ ಸಮೀಕ್ಷೆ ನಡೆಸಿದೆ.

ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ 132 ರಿಂದ 140 ಸೀಟುಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದ ಅಧಿಕಾರವನ್ನು ತನ್ನದಾಗಿಸಿಕೊಳ್ಳಲಿದೆ. ಆಡಳಿತಾರೂಢ ಬಿಜೆಪಿ 57-65 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಮೀಕ್ಷೆಯ ಅಂಕಿಅಂಶಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೆಗಾ ಸಮೀಕ್ಷಾ ವರದಿ ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಬಿತ್ತರವಾಗುತ್ತಿದೆ. ಸುದ್ದಿ ವಾಹಿನಿಗಳು ಸಮೀಕ್ಷೆಯ ಕುರಿತು ಚರ್ಚೆಗಳನ್ನು ನಡೆಸುತ್ತಿವೆ. ಈ ನಡುವೆ, ಮೊದಲೇ ಸೋಲಿನ ಭಯದಲ್ಲಿದ್ದ ಬಿಜೆಪಿಗೆ ಸಮೀಕ್ಷೆ ಮತ್ತಷ್ಟು ಭಯವುಂಟು ಮಾಡಿದೆ. ಬಿಜೆಪಿ ನಾಯಕರು ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ.

‘ಈ ದಿನ.ಕಾಮ್‌’ ಮೆಗಾ ಸಮೀಕ್ಷೆಯ ವಿಶ್ಲೇಷಣೆಯನ್ನು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಮೀಕ್ಷೆಯ ಅಂಕಿ ಅಂಶಗಳಿಂದ ನಿದ್ರೆಗೆಟ್ಟಿರುವ ಬಿಜೆಪಿ ಹೈಕಮಾಂಡ್ ನಾಯಕರು ಯೋಗೇಂದ್ರ ಯಾದವ್ ಅವರ ಮೇಲೆ ಮುಗಿಬಿದ್ದಿದ್ದಾರೆ.

ಸಮೀಕ್ಷೆಯ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಆಂದೋಲನ ಮತ್ತು ಪಾದಯಾತ್ರೆಗಳನ್ನು ನಡೆಸುವ ಯೋಗೇಂದ್ರ ಯಾದವ್ ತಮ್ಮ ಯಜಮಾನರನ್ನು ಮೆಚ್ಚಿಸಲು ಈ ಸಮೀಕ್ಷೆ ನಡೆಸಿದ್ದಾರೆ. ಇದು ಆಶ್ಚರ್ಯಕರ” ಎಂದು ಹೇಳಿದ್ದಾರೆ.

ಬಿ.ಎಲ್ ಸಂತೋಷ್ ಅವರಂತೆಯೇ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಯೋಗೇಂದ್ರ ಯಾದವ್ ಒಬ್ಬ ಬೋಗಸ್ ರಾಜಕಾರಣಿ, ಆತ ನಡೆಸಿದ ಸಮೀಕ್ಷೆ ಬೋಗಸ್ ಸಮೀಕ್ಷೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರಿಗೆ ತಿರುಗೇಟು ನೀಡಿರುವ ಯೋಗೇಂದ್ರ ಯಾದವ್, “ಯಶಸ್ವಿ ಉದ್ಯಮಿ. ಯಶಸ್ವಿ ರಾಜಕಾರಣಿಗೆ ‘ಇದು ನನ್ನ ಸಮೀಕ್ಷೆಯಲ್ಲ’ ಎಂಬುದನ್ನು ಗಮನಿಸಲು ಸಾಧ್ಯವಾಗಿಲ್ಲ. ಎಂತಹ ಜೆಂಟಲ್‌ಮನ್” ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ಸಿಗರ ಹರ್ಷ

ಸಮೀಕ್ಷೆಯ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಈದಿನ.ಕಾಮ್‌ ನಡೆಸಿರುವ ಅತಿದೊಡ್ಡ ಸಮೀಕ್ಷೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದಿದೆ. ಕಾಂಗ್ರೆಸ್ 140 ಸ್ಥಾನಗಳನ್ನು ಪಡೆಯುತ್ತಿದೆ. ಬಿಜೆಪಿ ಪತನವಾಗುತ್ತಿದೆ. ಜೆಡಿಎಸ್ ನಶಿಸುತ್ತಿದೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ‘ಈ ದಿನ’ ಸಮೀಕ್ಷಾ ವರದಿ ಹಂಚಿಕೊಂಡಿದ್ದು, “ಇದು ಬಿಜೆಪಿಯ ಹತಾಶೆಯನ್ನು ವಿವರಿಸುತ್ತದೆ” ಎಂದಿದ್ದಾರೆ.

ಸಮೀಕ್ಷೆಯಲ್ಲಿ ಏನಿದೆ?

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟವಾದ ಬಹುಮತ ಲಭ್ಯವಾಗಲಿದೆ ಎಂದು ಈದಿನ.ಕಾಮ್‌ನ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಕಾಂಗ್ರೆಸ್‌ ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ.ಸಮೀಕ್ಷೆ

ಈ ಹಿಂದೆ 2013 ಮತ್ತು 1999ರಲ್ಲಿ ರಾಜ್ಯ ವಿಧಾನಸಭೆಯಲ್ಲಿ ಇಂತಹ ಬಹುಮತವಿತ್ತು. ಈ ಬಾರಿ, ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯ ಅಂಕಿಅಂಶಗಳು ಹೇಳುತ್ತಿವೆ.

ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...