ಕನ್ನಡ ದ್ರೋಹಿ ಬಿಜೆಪಿ ಸರ್ಕಾರಕ್ಕೆ ಕನ್ನಡಿಗರು ತೆರಿಗೆ ಕಟ್ಟಲ್ಲ ಅಂದರೆ ಏನು ಮಾಡ್ತೀರಿ: ಪ್ರಕಾಶ್ ರಾಥೋಡ್ ಪ್ರಶ್ನೆ

Date:

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಖಂಡಿಸಿದ ಪ್ರಕಾಶ್ ರಾಥೋಡ್
  • ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ಕರ್ನಾಟಕ ವಜ್ರದಷ್ಟು ಗಟ್ಟಿಯಾಗಿದೆ

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆ ನಿಮಗೆ ಇದೆಯೇ? ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, `ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು’ ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ” ಎಂದು ಪ್ರಕಾಶ್ ರಾಥೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ. ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಅರ್ಜಿ ವಜಾ ಮಾಡಿದ ಹೈಕೋರ್ಟ್

“ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರು ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...