ಶಿವಣ್ಣನ ಅಭಿಮಾನಿಗಳಿಂದ ತರಾಟೆ : ಕ್ಷಮೆ ಕೇಳಿದ ಪ್ರಶಾಂತ್‌ ಸಂಬರಗಿ

Date:

ಕಾಂಗ್ರೆಸ್‌ ಪರ ಪ್ರಚಾರಕ್ಕೆ ಶಿವಣ್ಣ ಹಣ ಪಡೆದಿದ್ದಾರೆ ಎಂದಿದ್ದ ಸಂಬರಗಿ

ವಿರೋಧ ವ್ಯಕ್ತವಾಗುತ್ತಲೇ ಕ್ಷಮೆ ಯಾಚಿಸಿದ ಬಿಜೆಪಿ ಬೆಂಬಲಿಗ

ನಟ ಶಿವರಾಜ್‌ ಕುಮಾರ್‌ ಹಣ ಪಡೆದು ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ಬೆಂಬಲಿಗ ಪ್ರಶಾಂತ್‌ ಸಂಬರಗಿ ರಾಜ್‌ ಕುಟುಂಬದ ಅಭಿಮಾನಿಗಳಿಂದ ಭಾರೀ ಪ್ರತಿರೋಧ ವ್ಯಕ್ತವಾಗುತ್ತಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸ್ಪಷ್ಟನೆ ನೀಡಿ ತಮ್ಮ ಫೆಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಪ್ರಶಾಂತ್‌ ಸಂಬರಗಿ, “ಶಿವಣ್ಣ ಮತ್ತು ಇನೊಬ್ಬ ನಮ್ಮ ಆಪ್ತ ಮಿತ್ರನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರು ಎಲ್ಲ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರ ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದಾರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ” ಎಂದಿದ್ದಾರೆ.

ಶಿವಣ್ಣ ಕಾಂಗ್ರೆಸ್‌ ಪಕ್ಷದಲ್ಲಿರುವ ತಮ್ಮ ಆಪ್ತರ ಪರ ಪ್ರಚಾರ ಮಾಡುತ್ತಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಶಾಂತ್‌ ಸಂಬರಗಿ, “ಶಿವಣ್ಣ ಯಾವತ್ತೂ ʼಸ್ಕ್ರಿಪ್ಟ್‌ʼ ಕೇಳುವುದೇ ಇಲ್ಲ. ಆದರೆ, ಪೇಮೆಂಟ್‌ ತುಂಬಾನೇ ಮುಖ್ಯ, ಒಪ್ಪಿಕೊಂಡಿದ್ದ ಸಿನಿಮಾ ಮಾಡುತ್ತಾರೆ. ತುಂಬಾ ಎಮೋಶನಲ್‌ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್‌ ಆದರೂ ಅವರು ಕೇರ್‌ ಮಾಡಲ್ಲ. ಮತ್ತೆ ಪೇಮೆಂಟ್‌ ತೆಗೆದುಕೊಂಡು ಇನ್ನೊಂದು ಫಿಲಂ ಸೈನ್‌ ಮಾಡಿಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್‌ ಗೆದ್ದರೇನು, ಸೋತರೇನು ಎಲ್ಲ ಒಂದೇ. ಬಂತಾ ಪ್ಯಾಕೇಟ್‌ ಸರಿ. ಆಲ್‌ ರೈಟ್‌ ಮುಂದೆ ಹೋಗೋಣ” ಎಂದು ಗಂಭೀರ ಆರೋಪ ಮಾಡಿದ್ದರು. ಶಿವಣ್ಣನ ವಿರುದ್ಧ ಅಶ್ಲೀಲ ಪದಗಳನ್ನು ಕೂಡ ಪ್ರಯೋಗಿಸಿದ್ದರು. ಈ ಫೇಸ್‌ಬುಕ್‌ ಪೋಸ್ಟ್‌ಗೆ ಶಿವಣ್ಣನ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಲೇ ಎಚ್ಚೆತ್ತ ಪ್ರಶಾಂತ್‌ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಅಪ್ಪು ಹೆಸರು ಎಳೆದು ತಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಶಿವಣ್ಣ

ಪ್ರಶಾಂತ್‌ ಸಂಬರಗಿ ಫೇಸ್‌ಬುಕ್‌ ಪೋಸ್ಟ್‌ ಬಗ್ಗೆ ಮಾಧ್ಯಮದವರಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸಿದ್ದ ಶಿವಣ್ಣ, “ನಮಗೆ ಹಣ ಮುಖ್ಯವಂತಾ? ಹಾಗಿದ್ದರೆ ನಮ್ಮ ಬಳಿ ದುಡ್ಡಿಲ್ಲವಾ? ದಯವಿಟ್ಟು ಈ ಹೇಳಿಕೆಯನ್ನು ವಾಪಾಸ್‌ ಪಡೆಯಿರಿ. ನಾನು ಹಣ ಪಡೆದುಕೊಂಡು ಯಾರ ಪರವೂ ಪ್ರಚಾರ ಮಾಡಲು ಬಂದಿಲ್ಲ. ಮನಸ್ಸಿನಿಂದ ಬಂದಿದ್ದೇನೆ. ಒಬ್ಬ ಮನುಷ್ಯನಾಗಿ ಬಂದಿದ್ದೇನೆಯೇ ಹೊರತು, ವ್ಯಾಪಾರಕ್ಕಾಗಿ ಅಲ್ಲ. ಬೇರೆ ಯಾರನ್ನೂ ಟೀಕಿಸುವುದಕ್ಕಾಗಿ ಕೂಡ ನಾನು ಬಂದಿಲ್ಲ. ನಾನು ಬೆಂಬಲಿಸುತ್ತಿರುವ ವ್ಯಕ್ತಿಗಳ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಬೇರೆ ಯಾರ ಬಗ್ಗೆಯೂ ಮಾತನಾಡಿಲ್ಲ” ಎಂದಿದ್ದರು. ಇದಾದ ಬೆನ್ನಲ್ಲೇ ಸಂಬರಗಿ, ಶಿವಣ್ಣ ಮತ್ತು ಅವರ ಅಭಿಮಾನಿಗಳ ಕ್ಷಮೆ ಯಾಚಿಸಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...