ಮಂಗಳವಾರ ಮೈಸೂರು ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಮೋಡಿ : ಕೈ ಅಭ್ಯರ್ಥಿಗಳ ಪರ ಪ್ರಚಾರ

Date:

  • ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಿಯಾಂಕಾ ಗಾಂಧಿ ರೋಡ್ ಶೋ
  • ಮೈಸೂರು ಭಾಗದಲ್ಲಿ ಬಿಜೆಪಿ-ಕಾಂಗ್ರೆಸ್ ಪ್ರಚಾರ ಪೈಪೋಟಿ

ಹಳೆ ಮೈಸೂರು ಭಾಗದ ರಾಜಕೀಯ ಅಖಾಡ ರಂಗೇರಿದ್ದು,ಮಂಗಳವಾರ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದರೊಂದಿಗೆ ಮೈಸೂರು ಪ್ರಾಂತ್ಯ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಡುವಿನ ಪ್ರಚಾರ ಪೈಪೋಟಿಯ ಕಣವಾಗಿ ಮಾರ್ಪಟ್ಟಿದೆ.

ಏಪ್ರಿಲ್ 24ರಂದು ಬಿಜೆಪಿ ವರಿಷ್ಠ ಅಮಿತ್ ಶಾ ಈ ಭಾಗದಲ್ಲಿ ಪ್ರಚಾರ ನಡೆಸಿ ತೆರಳಿದರೆ, ಏಪ್ರಿಲ್ 25ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ಲೋಕದ ಸ್ಟಾರ್ ನಾಯಕರುಗಳ ಪ್ರಚಾರಕ್ಕೆ ಸಾಕ್ಷಿಯಾಗಿರುವ ಈ ಭಾಗದಲ್ಲಿ ಕಾರ್ಯಕರ್ತರ ಹುಮ್ಮಸ್ಸು ಮುಗಿಲು ಮುಟ್ಟಿದೆ. ಏಪ್ರಿಲ್ 25ರಂದು ರಾಜ್ಯಕ್ಕೆ ಬರಲಿರುವ ಪ್ರಿಯಾಂಕಾ ಗಾಂಧಿ, ಅಂದು ಭಾಗವಹಿಸುವ ಕಾರ್ಯಕ್ರಮ ಪಟ್ಟಿ ಹೀಗಿದೆ.

25 ಏಪ್ರಿಲ್ 2023
ಮಧ್ಯಾಹ್ನ 12:00 – ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆ


• 3.00 PM- ಹನೂರಿನಲ್ಲಿ ಮಹಿಳಾ ಸಂವಾದ – ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ, ಹನೂರು ಟೌನ್


• 5:30 PM – ಕೃಷ್ಣರಾಜನಗರದಲ್ಲಿ ರೋಡ್ ಶೋ – ಅಂಬೇಡ್ಕರ್ ಪ್ರತಿಮೆಯ ವೃತ್ತದ ಮೂಲಕ ಪುರಸಭೆ ಕಚೇರಿ ತೋಪಮ್ಮ ದೇವಸ್ಥಾನ.

ಮಂಗಳವಾರ ಮಧ್ಯಾಹ್ನ 12ಕ್ಕೆ ಟಿ ನರಸೀಪುರ – ಯಾಳವಾರ ಹುಂಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಾಗೆಯೇ ಮಧ್ಯಾಹ್ನ 3 ಗಂಟೆಗೆ ಹನೂರು ಟೌನ್‌ನ ಗೌರಿಶಂಕರ್ ಕನ್ವೆನ್ಷನ್ ಹಾಲ್ ಹತ್ತಿರ ಪ್ರಿಯಾಂಕಾ ಗಾಂಧಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂಜೆ 5ಕ್ಕೆ ಕೆ ಆರ್ ನಗರಕ್ಕೆ ಬರಲಿರುವ ಅವರು ಅಲ್ಲಿನ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

ಈ ಎಲ್ಲ ಕಾರ್ಯಕ್ರಮಗಳಿಗಾಗಿನ ಅಗತ್ಯ ಸಿದ್ಧತೆಯನ್ನು ರಾಜ್ಯ ಕಾಂಗ್ರೆಸ್‌ ಮಾಡಿಕೊಂಡು ನಾಯಕಿಯ ಸ್ವಾಗತಕ್ಕಾಗಿ ಕಾದು ನಿಂತಿದೆ. ಪ್ರಿಯಾಂಕಾ ಪ್ರಚಾರದ ವೇಳೆ ಕಾಂಗ್ರೆಸ್‌ ರಾಜ್ಯ ಪ್ರಮುಖರು ಅವರೊಂದಿಗಿರಲಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಪೂರ್ಣ ಪ್ರಮಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣವನ್ನು ಹುಟ್ಟುಹಾಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...