ʼಶುಭ ಸೋಮವಾರʼಕ್ಕೆ ಭರ್ಜರಿ ಕ್ಯೂ; ನಾಮಪತ್ರ ಸಲ್ಲಿಸಿದ ಹಲವು ನಾಯಕರು

Date:

  • ಸೋಮವಾರ ನಾಮಪತ್ರ ಸಲ್ಲಿಸಿದ ಹಲವು ನಾಯಕರು
  • ನಾಮಪತ್ರ ಸಲ್ಲಿಕೆಗೆ ಹರಿದು ಬಂದ ಅಭಿಮಾನಿ ಜನಸಾಗರ

ನಾಮಪತ್ರ ಸಲ್ಲಿಕೆಗೆ ಕಡೆಯ ಮೂರುದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ.
‘ಶುಭ ಸೋಮವಾರ’ದ ಹೆಸರಿನಲ್ಲಿ ನಾಮಪತ್ರ ಸಲ್ಲಿಸಿರುವ ಹಲವು ನಾಯಕರು ಇಂದಿನಿಂದ ಅಧಿಕೃತ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಏಪ್ರಿಲ್ 17ರ ಸೋಮವಾರದಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಉಮೇದುವಾರಿಕೆ ಸಲ್ಲಿಸಿದರು.
ಹೊಳೆನರಸೀಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ರೇವಣ್ಣ ನಾಮಪತ್ರ ಸಲ್ಲಿಸಿದರು. ಈ ವೇಳೆ ಹೆಚ್.ಡಿ ರೇವಣ್ಣಗೆ ಪತ್ನಿ ಭವಾನಿ ರೇವಣ್ಣ, ಪುತ್ರ ಸೂರಜ್ ಜೊತೆಯಾದರು.

ಹಾಗೆಯೇ ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದರು. ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ಮೂಲಕ ಬಂದ ಡಿಕೆಶಿ, ಈ ವೇಳೆ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಇವರಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಜೊತೆಯಾಗಿದ್ದರು.

ಇದಕ್ಕೂ ಮುನ್ನ ರಾಮನಗರದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ಇನ್ನೊಂದೆಡೆ ಮಲ್ಲೇಶ್ವರಂನಲ್ಲಿ ಸಚಿವ ಅಶ್ವತ್ಥನಾರಾಯಣ್, ಚಿಕ್ಕಮಗಳೂರಿನಲ್ಲಿ ಶಾಸಕ ಸಿಟಿ ರವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? : ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

ಸೊರಬದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಉಮೇದುವಾರಿಕೆ ಸಲ್ಲಿಸಿದರು.

ಬೆಂಗಳೂರಿನ ಗಾಂಧಿ ನಗರದ ಅಭ್ಯರ್ಥಿ ದಿನೇಶ್ ಗುಂಡೂರಾವ್, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ, ಸಕಲೇಶಪುರದ ಜೆಡಿಎಸ್‌ನ ಎಚ್ ಕೆ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...