ರಾಯಚೂರು | ಮೂಲಭೂತ ಸೌಕರ್ಯಗಳ ಕೊರತೆಗೆ ತರಗತಿ ಬಹಿಷ್ಕಾರ – ಕಾಲೇಜು ಮುಂಭಾಗ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು

Date:

ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಠಸ್ಥರಾದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಮತ್ತು ವರ್ಗೋಪಯೋಗಿ ಶಿಕ್ಷಕರ ಅಗತ್ಯ ಪೂರೈಕೆಯಾಗದೇ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಸ್ ಎಫ್ ಐ ನೇತೃತ್ವದಲ್ಲಿ ಪ್ರತಿಭಟನೆಯನ್ನು ಆರಂಭಿಸಿದರು.

ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ದೈನಂದಿನ ಶೈಕ್ಷಣಿಕ ಕ್ರಿಯೆಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಪ್ರತಿಭಟಿಸಿದರು.

ಕಾಲೇಜಿನಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಸಂಗಕ್ಕೆ ಅಗತ್ಯವಿರುವ ಟೀಚಿಂಗ್ ಎಯ್ಡ್, ಕುರ್ಚಿಗಳ ಕೊರತೆ ಹಾಗೂ ಇನ್ನೂ ಕೆಲವು ಕೋಣೆಗಳು ಕಳಪೆ ಸ್ಥಿತಿಯಲ್ಲಿದ್ದು, ಮಳೆ ಬಂದರೆ ಒಳಗೆ ನೀರು ಶೋಧಿಸುತ್ತಿದೆ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕಾಲೇಜು ವಿದ್ಯಾರ್ಥಿ ನರಸಮ್ಮ ಮಾತನಾಡಿ, ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಪೂರ್ತಿ ಶಿಥಿಲಗೊಂಡು ಗೋಡೆ ಕುಸಿದಿದೆ. ಶೌಚಾಲಯದಲ್ಲಿ ನೀರು ವ್ಯವಸ್ಥೆಯಿಲ್ಲದೆ ಕೆಲವೊಮ್ಮೆ ಅನಿವಾರ್ಯ ಕಾರಣಕ್ಕೆ ಬಯಲಿಗೆ ಹೋಗಬೇಕಾಗಿದೆ. ಇಲ್ಲದಿದ್ದರೆ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದೇನೆ. ಹಲವು ಬಾರಿ ಜನ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ಗಮನಕ್ಕೆ ತಂದರು ಸ್ಪಂದಿಸಿಲ್ಲ ಎಂದು ಅಳಲು ತೋಡಿಕೊಂಡರು.

ಒಂದು ಶಿಕ್ಷಕನು ಮೂರು ದಿನವಷ್ಟೇ ಈ ಕಾಲೇಜಿಗೆ ಬಂದು, ಉಳಿದ ಮೂರು ದಿನ ಇನ್ನೊಂದು ಕಾಲೇಜಿಗೆ ತೆರಳುವ ವ್ಯವಸ್ಥೆಯಿಂದಾಗಿ ಪಠ್ಯಕ್ರಮ ಮುಗಿಯದ ಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಮವಾರದಿಂದ ಬುಧವಾರದವರೆಗೂ ಮಾತ್ರ ಬರುವುದು. ಉಳಿದ ದಿನಗಳಲ್ಲಿ ನಾವು ಸ್ವಾಧ್ಯಯನದಲ್ಲಿಯೇ ನಂಬಿಕೆ ಇಟ್ಟುಕೊಳ್ಳಬೇಕು. ಪಠ್ಯಕ್ರಮ ಇನ್ನೂ ಅರ್ಧಕ್ಕಿಂತ ಹೆಚ್ಚು ಬಾಕಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ ಎಫ್ ಐ ಜಿಲ್ಲಾ ಮುಖಂಡ ರಮೇಶ್ ವೀರಾಪುರ ಮಾತನಾಡಿ, ಕಾಲೇಜು ಮೂಲಭೂತ ಸೌಲಭ್ಯಗಳಿಗಾಗಿ ಸಂಬಂಧಪಟ್ಟ ಇಲಾಖೆಗೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಮನವಿ ಸಲ್ಲಿಸಿದರು ತಮಗೆ ಸಂಬಂಧವಿಲ್ಲದಂತೆ ಇದ್ದಾರೆ. ಕಾಲೇಜು ಕೋಣೆಗಳು ಪೂರ್ತಿ ಶಿಥಿಲಗೊಂಡು ದಿನನಿತ್ಯ ಮೇಲ್ಛಾವಣಿ ಕುಸಿದು ಬೀಳುತ್ತಿವೆ. ಕಾಲೇಜ್ ಕೋಣೆಗಳ ಬೆಡ್ ತೆಗ್ಗ ಗುಂಡಿ,ಸಮತಟ್ಟವಾಗಿಲ್ಲ. ಮಕ್ಕಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

IMG 20250721 WA0026

ಕಾಲೇಜು ಉದ್ಘಾಟನೆ ,ಕಾರ್ಯಕ್ರಮಗಳಿಗೆ ಜನ ಪ್ರತಿನಿಧಿಗಳು ಬರುತ್ತಾರೆ. ಆದರೆ ಹೆಸರಿಗೆ ಮಾತ್ರ ಆಶ್ವಾಸನೆ ಯಾಗಿದೆ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ತರಗತಿ ಬಹಿಷ್ಕರಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಈ ವೇಳೆ ಕಟ್ಟಡ ಕಾರ್ಮಿಕ ಮುಖಂಡ ನಿಂಗಪ್ಪ ನಿಲೋಗಲ್ , ಶಂಸು, ಶಾಲಾ ಮಕ್ಕಳು ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...