ರಾಯಚೂರು | ರಾಜ್ಯದಲ್ಲಿ ಬರ, ಬೆಳೆ ಉಳಿಸಲು ಟ್ಯಾಂಕರ್‌ಗಳ ಮೊರೆಹೋದ ರೈತರು

Date:

ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ ಮೊರೆಹೋಗಿದ್ದಾರೆ.

ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಮಾಡಿದ‌‌ ಬೆಳೆ ಒಣಗಿ ಹೋಗುತ್ತಿದ್ದರೆ, ಇತ್ತ ತುಂಗಭದ್ರಾ ಎಡದಂಡೆಯ ಕಾಲುವೆ ನೀರನ್ನು ನಂಬಿಕೊಂಡು ವ್ಯವಸಾಯ ಮಾಡಿಕೊಳ್ಳುತ್ತಿರುವ ರೈತರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಮೆಣಸಿನಕಾಯಿ ಬೆಳೆಗೆ ಹಾನಿಯಾಗುತ್ತಿರುವುದರಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳಲ್ಲಿ ನೀರನ್ನು ತಂದು ನೀರುಣಿಸುವ ಸಹಾಸಕ್ಕೆ ಮುಂದಾಗಿದ್ದಾರೆ.

ಒಂದೂವರೆ ಎಕರೆಯಲ್ಲಿ ಮೆಣಸಿನಕಾಯಿ ಬೆಳೆ ಹಾಕಿದ್ದೇನೆ. ಇದರ ಇಳುವರಿ ಕೂಡ ಉತ್ತಮವಾಗಿ ಬಂದಿದೆ. ಪಕ್ಕದಲ್ಲಿಯೇ ತುಂಗಭದ್ರಾ ಎಡದಂಡೆ ಕಾಲುವೆ ಹಾದು ಹೋಗಿದೆ. ಆದರೆ, ನೀರಿಲ್ಲ. ಹೀಗಾಗಿ, ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಆಶಾಪುರ ಗ್ರಾಮದ ರೈತ ವೀರೇಶ್‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಬೆಳೆದಿರುವ ಬೆಲೆಗೆ ಸಾಕಷ್ಟು ಹಣಹಾಕಿ ಬೆಳೆದಿದ್ದೇವೆ. ಒಂದು ಟ್ಯಂಕ್‌ ನೀರಿಗೆ ನಾಲ್ಕು ಸಾವಿರ ಖರ್ಚುಮಾಡಿ ಬೆಳೆ ಉಳಿಸಿಕೊಳ್ಳುತ್ತಿದ್ದೇವೆ. ನಮ್ಮ ಅಕ್ಕಪಕ್ಕದ ರೈತರು ಸಹ ಟ್ಯಾಂಕರ್ ಮೂಲಕ ನೀರು ತಂದು ಬೆಳೆಗಳಿಗೆ ಉಣಿಸಲು ಮುಂದಾಗಿದ್ದಾರೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಾರೆ.

ಇತ್ತ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಸಹ ಬೆಳೆ ಸಂರಕ್ಷಿಸಲು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಆದರೂ, ಬಂದಿರುವ ಬೆಳೇಯನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳನ್ನು ಬಾಡಿಗೆ ಪಡೆದು ನೀರು ಹಾಯಿಸುತ್ತಿದ್ದಾರೆ. ಬರದ ಹಿನ್ನೆಲೆಯಲ್ಲಿ ಏನೇ ಬೆಳೆ ಬಂದರೂ ಬೆಲೆ ಸಿಗುತ್ತದೆ ಎನ್ನುವ ಆತ್ಮವಿಶ್ವಾಸದಲ್ಲಿರುವ ರೈತರು, ಸದ್ಯಕ್ಕೆ ಉಳಿದಿರುವ ಈರುಳ್ಳಿ, ಮೆಣಸಿನಕಾಯಿಗೆ ನೀರುಣಿಸಿ ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...