ಮತ ಎಣಿಕೆ ಚನ್ನಪಟ್ಟಣದಲ್ಲಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಮೇ 10ರಂದು ನಡೆದ ಚುನಾವಣೆಯಲ್ಲಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣವೂ ಒಂದು. 2018ರ ವಿಧಾನಸಭಾ ಚುನಾವಣೆಯಲ್ಲಿ, ಎಚ್‌.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿ.ಪಿ ಯೋಗೇಶ್ವರ್ ಕಣಕ್ಕಿಳಿದಿದ್ದರು. ಚನ್ನಪಟ್ಟಣ ಕ್ಷೇತ್ರದಲ್ಲಿ 2,16,448 ಮತದಾರರಿದ್ದು, 85.23% ಮತದಾನವಾಗಿತ್ತು.

ಯೋಗೇಶ್ವರ್ ಅವರು 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಶಾಲಿಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯೋಗೇಶ್ವರ್, ಕುಮಾರಸ್ವಾಮಿ ವಿರುದ್ಧ ಸೋಲುಂಡಿದ್ದರು.

ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಭವಿಷ್ಯದ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿದೆ. ಅವರಿಗೂ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ಅವರನ್ನು ಸೋಲಿಸಲು ಪಣತೊಟ್ಟಿದ್ದ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಜೆಡಿಎಸ್‌ ಕೂಡ ಪಂಚರತ್ನ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರದ ಮತದಾರರು ಕುಮಾರಸ್ವಾಮಿ ಅವರ ಕೈ ಹಿಡಿಯುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. 2018ರ ಚುನಾವಣೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ 87,995 ಮತ ಪಡೆದಿದ್ದರು. ಬಿಜೆಪಿಯ ಸಿ.ಪಿ ಯೋಗೇಶ್ವರ್ 66,465 ಮತ್ತು ಕಾಂಗ್ರೆಸ್‌ನ ಎಚ್.ಎಂ ರೇವಣ್ಣ 30,208 ಮತ ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಎಚ್.ಎಂ ರೇವಣ್ಣರ ಬದಲಿಗೆ ಗಂಗಾಧರ್ ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...