ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ; ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

Date:

  • ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ
  • ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿದ್ದು, ಚುನಾವಣಾ ತಯಾರಿಯಲ್ಲಿರುವ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಜೆಡಿಎಸ್‌ ರಾಜ್ಯದ ಮತದಾರರಿಗೆ ಅನೇಕ ಭರವಸೆಗಳನ್ನು ನೀಡಿದ್ದು, ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುವುದಾಗಿ ಜೆಡಿಎಸ್‌ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಜೆಡಿಎಸ್ ಒಟ್ಟು 9 ವಿಭಾಗಗಳಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಂಚರತ್ನ ಯೋಜನೆ, ಸಾಮಾಜಿಕ ಭದ್ರತೆಗಳು, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ- ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಂತೂ-ಇಂತೂ ಪಿಯುಸಿ ‘ಪಾಸು’ ಮಾಡಿದ ಮಾಜಿ ಶಾಸಕರು

ಜೆಡಿಎಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳು

  • ಗರ್ಭಿಣಿ ತಾಯಂದಿರಿಗೆ 6 ತಿಂಗಳ ಕಾಲ ₹6,000 ಭತ್ಯೆ
  • ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ
  • ರೈತ ಯುವಕರನ್ನು ಮದುವೆ ಆಗುವ ಯುವತಿಯರಿಗೆ ₹2 ಲಕ್ಷ ಪ್ರೋತ್ಸಾಹ ಧನ
  • ವಿಧವಾ ವೇತನ ₹900 ರಿಂದ ₹2,500 ಹೆಚ್ಚಳ
  • ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ
  • ಹಿರಿಯ ನಾಗರಿಕರ ಮಾಸಾಶನವನ್ನು ₹1,200 ದಿಂದ ₹5000 ಗಳಿಗೆ ಏರಿಕೆ
  • ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ
  • ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಪ್ರತಿ ಎಕರೆಗೆ ₹10,000 ಸಹಾಯ ಧನ
  • ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ
  • ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ
  • ನೋಂದಾಯಿತ ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಮಾಸಿಕ ₹2 ಸಾವಿರ ಸಹಾಯಧನ
  • ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹5000ವರೆಗೆ ಹೆಚ್ಚಿನ ವೇತನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...