ಧಾರವಾಡ | ಮೋದಿ 5,000 ರೂ. ಕೊಡುತ್ತಾರೆಂಬ ವದಂತಿ; ಗ್ಯಾಸ್ ಕಚೇರಿ ಎದುರು ಜಮಾಯಿಸಿದ ಜನ

Date:

ಉಜ್ವಲ ಯೋಜನೆಯಡಿ ಪ್ರಧಾನಿ ಮೋದಿ ಅವರು 5,000 ರೂ. ಕೊಡುತ್ತಾರೆಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಮಾಹಿತಿಯನ್ನೇ ನಂಬಿಕೊಂಡ ಜನರು, ಕೆವೈಸಿ ಅಪ್‌ಡೇಟ್‌ ಮಾಡಿಸಲು ಗ್ಯಾಸ್‌ ಕಚೇರಿ ಎದುರು ಜಮಾಜಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಉಜ್ವಲ ಯೋಜನೆಯಡಿ ಗ್ಯಾಸ್‌ ಪಡೆಯುತ್ತಿರುವವರು ಆಧಾರ್, ಬ್ಯಾಂಕ್‌ ಬಾಸ್‌ ಬುಕ್ಅನ್ನು ಗ್ಯಾಸ್‌ ನೋಂದಣಿ ಜೊತೆಗೆ ಕೆವೈಸಿ ಅಪ್‌ಡೇಟ್ ಮಾಡಿಸಬೇಕು. ಹಾಗೆ ಮಾಡಿಸಿದರೆ ಕೇಂದ್ರ ಸರ್ಕಾರದಿಂದ 5,000 ರೂ. ನೀಡುತ್ತಾರೆ ಎಂಬ ವದಂತಿಯ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಹೀಗಾಗಿ, ಧಾರವಾಡ ಜಿಲ್ಲೆಯ ಕಲಘಟಗಿ ಸುತ್ತಮುತ್ತಲ ಹಳ್ಳಿಗಳ ಜನರು ಕೆವೈಸಿ ಅಪ್‌ಡೇಟ್‌ ಮಾಡಿಸಲು ಕಲಘಟಗಿಯ ಲೋಕಪೂಜ್ಯ ಗ್ಯಾಸ್‌ ಕಚೇರಿಗೆ ದೌಡಾಯಿಸಿದ್ದಾರೆ. ಅವರನ್ನು ನಿಯಂತ್ರಿಸಲು ಕಚೇರಿ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಕರಾವಳಿ ಭಾಗದಲ್ಲಿ ಇಂತದ್ದೇ ಪೋಸ್ಟ್‌ ವೈರಲ್‌ ಆಗಿತ್ತು. ಕೆವೈಸಿ ಅಪ್‌ಡೇಟ್‌ ಮಾಡಿಸಿದರೆ, 500 ರೂ.ಗೆ ಸಿಲಿಂಡರ್‌ ದೊರೆಯುತ್ತದೆ. ಅಪ್‌ಡೇಟ್‌ ಮಾಡಿಸದಿದ್ದರೆ ಅಡುಗೆ ಅನಿಲದ ಸಿಲಿಂಡರ್ ಕಮರ್ಷಿಯಲ್‌ ಆಗಿ ಬದಲಾಗುತ್ತದೆ. ಆ ಸಿಲಿಂಡರ್‌ಗೆ 1,400 ರೂ. ಕೊಡಬೇಕಾಗುತ್ತದೆ ಎಂದು ನಕಲಿ ಪೋಸ್ಟ್‌ ವೈರಲ್‌ ಆಗಿತ್ತು. ಅದು ಸುಳ್ಳೆಂಬುದು ಈಗಾಗಲೇ ಸಾಬೀತಾಗಿದೆ.

ಇದೀಗ, ಧಾರವಾಡ ಜಿಲ್ಲೆಯಲ್ಲಿ 5,000 ರೂ. ಕೊಡುತ್ತಾರೆಂಬ ಮತ್ತೊಂದು ನಕಲಿ ಸುದ್ದಿ ವೈರಲ್ ಆಗಿದೆ.

ಇಂತಹ ಪೋಸ್ಟ್‌ಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರಿನ ಇಂಡೇನ್ ಗ್ಯಾಸ್ ಸರಬರಾಜು ಮಾಡುವ ಕವಿತಾ ಎಂಟರ್‌ಪ್ರೈಸಸ್ ಗ್ಯಾಸ್ ಏಜೆನ್ಸಿಯ ನಿರ್ವಾಹಕ ವೆಂಕಟೇಶ್ ಅವರು “ಉಜ್ವಲ ಯೋಜನೆಯಡಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರು ಮಾತ್ರ ಡಿಸೆಂಬರ್ 31ರೊಳಗೆ KYC ಮಾಡಿಸಬೇಕು. ಉಳಿದ ಗ್ರಾಹಕರು ಕೆವೈಸಿ ಮಾಡಿಸಬೇಕಾದ ಅಗತ್ಯವಿಲ್ಲ. KYC ಮಾಡಿಸಿದಾಕ್ಷಣ 500 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗುತ್ತದೆ ಎಂಬುದು ಸುಳ್ಳು” ಅಂತ ಹೇಳಿದ್ದಾರೆ.

ಒಂದು ವೇಳೆ KYC ಮಾಡಿಸದಿದ್ದರೆ ಗೃಹ ಬಳಕೆ ಸಿಲಿಂಡರ್‌ ಕಮರ್ಷಿಯಲ್ ಆಗಿ ಬಿಡುತ್ತದೆ ಅನ್ನೋದು ಕೂಡ ಸುಳ್ಳು. ಹಾಗೇನೂ ಆಗುವುದಿಲ್ಲ. ಗೃಹ ಬಳಕೆಯ ಗ್ರಾಹಕರಾಗಿಯೇ ಮುಂದುವರಿಯುತ್ತಾರೆ. ಆದರೆ, ಉಜ್ವಲ ಯೋಜನೆಯಡಿ ಅವರಿಗೆ ಸಿಗುತ್ತಿದ್ದ ಸಣ್ಣ ಪುಟ್ಟ ಸಬ್ಸಿಡಿ ನಿಂತು ಹೋಗಬಹುದು. ಹಾಗಾಗಿ ಕೆವೈಸಿ ಮಾಡಿಸಬೇಕು” ಅಂತ ಅವರು ಹೇಳಿದ್ದಾರೆ.

ಇನ್ನು, ಉಜ್ವಲ ಯೋಜನೆಯ ನೋಡಲ್ ಅಧಿಕಾರಿ ರಾಹುಲ್ ಅವರು ಕೂಡ ವಾಟ್ಸಾಪ್‌ನಲ್ಲಿ ವೈರಲ್ ಸಂದೇಶ ಸುಳ್ಳು ಅಂತ ಹೇಳಿದ್ದಾರೆ. ಈ ಬಗ್ಗೆ ವರದಿಗಳೂ ಪ್ರಕಟವಾಗಿವೆ. “ಉಜ್ವಲ ಯೋಜನೆಯ ಗ್ರಾಹಕರಿಗೆ ಮಾತ್ರ ಸಬ್ಸಿಡಿ ನೀಡುತ್ತಿದ್ದು. ಅವರು ಮಾತ್ರ ಆಧಾರ ದೃಢೀಕರಿಸಬೇಕು” ಅಂತ ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...