ಮತ ಚಲಾಯಿಸಿ ಗಮನ ಸೆಳೆದ ಸ್ಯಾಂಡಲ್‌ವುಡ್‌ ತಾರೆಯರು

Date:

ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ದರ್ಶನ್‌

ಭ್ರಷ್ಟಾಚಾರಿಗಳ ವಿರುದ್ಧ ಮತ ಚಲಾಯಿಸಿದ್ದೇನೆ ಎಂದ ಪ್ರಕಾಶ್‌ ರಾಜ್‌

ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಹಿರಿಯ ನಟ ಶಿವರಾಜ್‌ ಕುಮಾರ್‌, ದರ್ಶನ್‌, ಗಣೇಶ್‌ ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವು ತಾರೆಯರು ತಮ್ಮ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ರಾಚೇನಹಳ್ಳಿಯಲ್ಲಿರುವ ಮತಗಟ್ಟೆಗೆ ಪತ್ನಿ ಗೀತಾ ಅವರೊಂದಿಗೆ ತೆರಳಿ ಶಿವರಾಜ್‌ ಕುಮಾರ್‌ ಮತ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, “ಅತಿ ಹೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡಿ, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ದರ್ಶನ್‌ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ಸಾಮಾನ್ಯರಂತೆ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಕೂಡ ಇಂದು ಬೆಳಗ್ಗೆಯೇ ಮತದಾನ ಮಾಡಿದ್ದು, ಟ್ವಿಟರ್‌ ಖಾತೆಯಲ್ಲಿ ತಾವು ಮತ ಚಲಾಯಿಸಿರುವ ಗುರುತಿಗಾಗಿ ಫೋಟೋ ಹಂಚಿಕೊಂಡು, “ನಮ್ಮ ಒಂದು ಕ್ಷಣದ ನಿರ್ಧಾರ ನಾಡಿನ ಭವಿಷ್ಯವನ್ನೇ ಬದಲಿಸಬಲ್ಲದು. ವಿವೇಚನೆಯಿಂದ ಮತ ಹಾಕೋಣ. ನಾನು ಮತ ಹಾಕಿ ಬಂದೆ. ನೀವು?” ಎಂದು ತಮ್ಮ ಅಭಿಮಾನಿಗಳಿಗೆ ಮತ ಚಲಾವಣೆಗೆ ಕರೆ ನೀಡಿದ್ದಾರೆ.

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಕೂಡ ಬೆಂಗಳೂರಿಗೆ ಆಗಮಿಸಿ ಶಾಂತಿನಗರದ ಮತಗಟ್ಟೆಯಲ್ಲಿ ಸಾಮಾನ್ಯರ ಜೊತೆಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ನಾವು ಕೋಮುವಾದಿ ರಾಜಕಾರಣದ ವಿರುದ್ಧ ಮತ ಚಲಾಯಿಸಬೇಕಿದೆ. ಇಂತಹ ಚುನಾವಣೆಯ ಸಂದರ್ಭದಲ್ಲೇ ಜನ ತಮ್ಮ ನಿರ್ಧಾರವನ್ನು ಪ್ರಕಟಿಸುವ ಹಕ್ಕನ್ನು ಹೊಂದಿರುತ್ತಾರೆ. ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂಬುದು ಮತದಾರರಿಗೆ ಚೆನ್ನಾಗಿ ಗೊತ್ತಿರುತ್ತದೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿ ಇರಬೇಕಿದೆ. ನಾವು ಸೌಹಾರ್ದತೆ‌ಯನ್ನು ಉಳಿಸಿಕೊಳ್ಳಬೇಕಿದೆ. ಕರ್ನಾಟಕದಿಂದ ಕೋಮುವಾದವನ್ನು ಕಿತ್ತೆಸೆಯಬೇಕಿದೆ” ಎಂದಿದ್ದಾರೆ.

ಖ್ಯಾತ ನಿರ್ದೇಶಕ ಮಂಸೋರೆ ಕೂಡ ತಮ್ಮ ಹುಟ್ಟೂರಿಗೆ ತೆರಳಿ ಮತ ಚಲಾಯಿಸಿದ್ದು, ಮತಗಟ್ಟೆಯ ಎದುರು ನಿಂತು ಮತದಾನದ ಗುರುತಿನ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ʼಕಾಂತಾರʼ ಖ್ಯಾತಿಯ ನಟಿ ಸಪ್ತಮಿ ಗೌಡ ಕೂಡ ಮತ ಚಲಾವಣೆ ಮಾಡಿದ್ದು, “ನಿಮ್ಮ ಮತ, ನಿಮ್ಮ ಹಕ್ಕು. ನೀವು ಮತ ಚಲಾಯಿಸಿ” ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...