ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಸಂಗಣ್ಣ ಕರಡಿ

Date:

  • ಟಿಕೆಟ್ ವಿಚಾರವಾಗಿ ಬಂಡಾಯ ಸಾರಿದ ಸಂಗಣ್ಣ ಕರಡಿ
  • ಬೆಂಬಲಿಗರ ಸಭೆ ಬಳಿಕ ನಿರ್ಧಾರ ಪ್ರಕಟಿಸಲಿರುವ ಸಂಸದ

ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯ ಸಾರುವ ನಾಯಕರ ಸಂಖ್ಯೆ ಹೆಚ್ಚಾಗುತ್ತಿದೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬೆನ್ನಲ್ಲೇ ಮತ್ತೊಬ್ಬ ನಾಯಕ ಬಿಜೆಪಿಗೆ ‘ಗುಡ್‌ ಬೈ’ ಹೇಳಲು ಮುಂದಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆ ರಾಜ್ಯ ಬಿಜೆಪಿ ಬಂಡಾಯ ಬಿಸಿ ಎದುರಿಸುತ್ತಿದೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಪಕ್ಷದ ವಿರುದ್ಧ ಬಂಡಾಯ ಸಾರಿ, ಬೆಂಬಲಿಗರ ಸಭೆ ಕರೆದಿದ್ದಾರೆ.

ಸಂಗಣ್ಣ ಕರಡಿ ಅವರು ಕೊಪ್ಪಳ ಕ್ಷೇತ್ರದ ಟಿಕೆಟ್​ ಕೇಳಿದ್ದು, ವರಿಷ್ಠರು ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ. ಕೊನೆಗೆ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡಿ ಎಂದಿದ್ದು, ಪುತ್ರನಿಗು ಕೂಡಾ ಟಿಕೆಟ್ ನೀಡಲು ವರಿಷ್ಠರು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿರುವ ಸಂಗಣ್ಣ ಕರಡಿ ಅವರು ಬೆಂಬಲಿಗರ ಸಭೆ ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

ಈ ಕುರಿತು ಮಾತನಾಡಿದ ಅವರು, “ನನಗೆ ಟಿಕೆಟ್ ಕೊಡುವುದಾಗಿ ಈ ಮೊದಲು ರಾಜ್ಯ ನಾಯಕರು ಭರವಸೆ ನೀಡಿದ್ದರು. ಬಿ ಎಸ್ ಯಡಿಯೂರಪ್ಪ ಅವರು ಸಹ ನನ್ನ ಹೆಸರನ್ನು ಶಿಫಾರಸು ಮಾಡಿದ್ದರು. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು” ಎಂದು ಪಟ್ಟು ಹಿಡಿದಿದ್ದಾರೆ.

ಆದರೆ, ಬಿಜೆಪಿ ಹೈಕಮಾಂಡ್‌ ಕೊಪ್ಪಳ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಮಾಡುವುದನ್ನು ತಡೆ ಹಿಡಿದಿದೆ. ತಮಗೆ ಟಿಕೆಟ್ ಸಿಗದ ಸುಳಿವು ದೊರಕಿರುವ ಸಂಗಣ್ಣ ಕರಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಂತರ ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಸಂಗಣ್ಣ ಕರಡಿ ಅವರು ಮೊದಲ ಬಾರಿಗೆ 1994ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 2008ರಲ್ಲಿ ಜೆಡಿಯುನಿಂದ, 2011ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ, 2004 ಮತ್ತು 2013ರಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಸೋತಿದ್ದರು. 2014 ಮತ್ತು 2019ರಲ್ಲಿ ಸಂಸದರಾಗಿ ಆಯ್ಕೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...