ಚುನಾವಣೆ 2023 | ರಾತ್ರೋರಾತ್ರಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

Date:

ನಿನ್ನೆಯಷ್ಟೇ(ಏ.11) ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬಿಡುಗಡೆ ಮಾಡಿದ್ದು, ಅಚ್ಚರಿ ಮೂಡಿಸಿದೆ.

ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ಹೆಸರು ಘೋಷಣೆಯಾಗಿಲ್ಲ.

ಈ ಎರಡನೇ ಪಟ್ಟಿಯಲ್ಲಿ ಬಿಜೆಪಿಯ ಏಳು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗಿದ್ದು, ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಹೆಚ್ಚಳವಾಗುವ ಸಾಧ್ಯತೆ ಇದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು, ನಾಳೆ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ತೊರೆದಿದ್ದ ನಾಗರಾಜ್ ಛಬ್ಬಿಗೆ ಕಲಘಟಗಿಯಿಂದ ಟಿಕೆಟ್ ದೊರಕಿದ್ದು, ಮೂಡಿಗೆರೆಯ ಶಾಸಕ ಕುಮಾರಸ್ವಾಮಿಯವರ ಸ್ಥಾನಕ್ಕೆ ದೀಪಕ್ ದೊಡ್ಡಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಳಿಕ ರಾಜ್ಯದಲ್ಲಿ ಉಂಟಾಗಿರುವ ಭಿನ್ನಮತದ ಹಿನ್ನೆಲೆಯಲ್ಲಿ ಶಮನಗೊಳಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ ನೀಡಿದೆ. ಈ ಬೆಳವಣಿಗೆಯಿಂದ ಪಕ್ಷದ ಕಾರ್ಯಕರ್ತರು ಖುಷಿಯಾಗಿದ್ದಾರೆ. ಭಿನ್ನಮತಗಳನ್ನು ಸರಿಪಡಿಸಲಿದ್ದೇವೆ” ಎಂದು ಹೇಳಿ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...