ಅಪ್ಪು ಹೆಸರು ಎಳೆದು ತಂದ ಬಿಜೆಪಿಗರಿಗೆ ತಿರುಗೇಟು ನೀಡಿದ ಶಿವಣ್ಣ

Date:

  • ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿಸಿದ್ದೇವೆ ಎಂದ ಪ್ರತಾಪ್‌ ಸಿಂಹ
  • ಮಾಡಿದ ಸಮಾಜ ಸೇವೆಯನ್ನು ಹೇಳಿಕೊಂಡು ತಿರುಗಬಾರದೆಂದ ಶಿವಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಮತ್ತು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ ಶಿವರಾಜ್‌ ಕುಮಾರ್‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಅಪ್ಪು ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ್ದೇವೆ ಎಂದು ಬಿಜೆಪಿಗರ ರಾಜಕೀಯ ಪ್ರೇರಿತ ಹೇಳಿಕೆ ನೀಡಿ ಟ್ವೀಟ್‌ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಿವಣ್ಣ, “ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಹಲವು ಸಮಾಜ ಸೇವೆಗಳನ್ನು ಮಾಡಿದ್ದಾರೆ. ಅದ್ಯಾವುದು ಮುನ್ನೆಲೆಗೆ ಬರುವುದಿಲ್ಲ. ರಾಯಚೂರು ಮೂಲದ ಸಾಧಿಕ್‌ ಖಾನ್‌ ಎಂಬುವವರು ಅಪ್ಪು ಬದುಕಿದ್ದಾಗಿನಿಂದ ಈವರೆಗೆ ಆತನ ಹೆಸರಿನಲ್ಲಿ ಚಿಕ್ಕದಾಗಿ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರ ಸೇವೆ ಚಿಕ್ಕದಿರಬಹುದು. ನಾಳೆ ಅದೇ ದೊಡ್ಡದಾಗಿ ಬೆಳೆಯುತ್ತದೆ. ಹೀಗೆ ಅಪ್ಪು ಹೆಸರಲ್ಲಿ ಸಮಾಜ ಸೇವೆ ಮಾಡಿದವರು ಯಾರೂ ಕೂಡ ಹೇಳಿಕೊಂಡು ತಿರುಗಾಡುವುದಿಲ್ಲ. ನಮಗೆ ಚಿಕ್ಕದೊಂದು ಸಂದೇಶ ಕಳುಹಿಸಿ ಸುಮ್ಮನಾಗುತ್ತಾರೆ. ಅವರು (ಬಿಜೆಪಿಗರು) ಕೂಡ ಅಪ್ಪುಗೆ ಗೌರವ ಸಲ್ಲಿಸಿದ್ದಾರೆ. ನಾವೇನು ಇಲ್ಲ ಎಂದು ಹೇಳುತ್ತಿಲ್ಲ. ಆ ವಿಚಾರವಾಗಿ ನಾವೇನು ಹೇಳಿಲ್ಲ. ನಾವೇನು ಮಾತನಾಡುತ್ತಿದ್ದೇವೆ ಎಂಬ ಬಗ್ಗೆ ಮೊದಲು ಯೋಚನೆ ಮಾಡಬೇಕು. ಎಲ್ಲರೂ ಅವರ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಾರೆ. ನನಗೆ ಮಾತನಾಡುವುದಕ್ಕೆ ಆಗುವುದಿಲ್ಲ ಅಂತಲ್ಲ. ನಾನು ಕೂಡ ಮಾತನಾಡಬಲ್ಲೆ” ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಪ್ಪು ಹೆಸರನ್ನು ರಾಜಕಾರಣಕ್ಕೆ ಬಳಸಬೇಡಿ : ಪ್ರತಾಪ್‌ ಸಿಂಹಗೆ ನೆಟ್ಟಿಗರ ತರಾಟೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾರೆ ಎಂಬುದು ನನಗೆ ನಿಜಕ್ಕೂ ಗೊತ್ತಿರಲಿಲ್ಲ. ನಾನು ಯಾರ ಪ್ರಚಾರಕ್ಕೆ ಹೋದರೂ ಪ್ರತಿಸ್ಪರ್ಧಿ ಯಾರೂ ಎಂಬುದನ್ನು ತಿಳಿಯುವ ಗೋಜಿಗೆ ಹೋಗುವುದೇ ಇಲ್ಲ. ಪ್ರಚಾರ ಮಾಡುತ್ತೇನಷ್ಟೇ. ಇದೇನು ಯುದ್ಧವಲ್ಲ, ಒಂದು ಸ್ಪರ್ಧೆಯಷ್ಟೇ. ಸುದೀಪ್‌ ಕೂಡ ಪ್ರಚಾರ ಮಾಡುತ್ತಿದ್ದಾರೆ. ಹಾಗಂತ ನಾಳೆಯ ದಿನ ನಾನು ಸುದೀಪ್‌ ಮಾತನಾಡದೆ ಇರುತ್ತೇವಾ? ಖಂಡಿತ ಮಾತನಾಡುತ್ತೇವೆ. ನಾನು ಸುದೀಪ್ ಇಬ್ಬರೂ ಸಹೋದರರ ಹಾಗಿದ್ದೇವೆ. ಗೀತಾ ಅವರ ಬಗ್ಗೆಯೂ ಸುದೀಪ್‌ ಬಹಳ ಗೌರವ ಇಟ್ಟುಕೊಂಡಿದ್ದಾರೆ. ನಮ್ಮಿಬ್ಬರ ನಿಲುವುಗಳು ಬೇರೆ. ಆದರೆ, ಪರಸ್ಪರರನ್ನು ಗೌರವಿಸುತ್ತೇವೆ” ಎನ್ನುವ ಮೂಲಕ ಅಪ್ಪು ಹೆಸರಲ್ಲಿ ರಾಜಕಾರಣ ಮಾಡಲು ಯತ್ನಿಸಿದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ಶಿವಣ್ಣ, ಸಿದ್ದರಾಮಯ್ಯ ಪರ ರೋಡ್‌ ಶೋದಲ್ಲಿ ಭಾಗಿಯಾಗಿರುವ ಸಂದರ್ಭದ ಫೋಟೋ ಮತ್ತು ಬೆಂಗಳೂರಿನಲ್ಲಿ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಕಟ್ಟಿಸಿದ ಸರ್ಕಾರಿ ಆಸ್ಪತ್ರೆಯ ಉದ್ಘಾಟನೆ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ಅವರು ಸಿದ್ದರಾಮಯ್ಯನವರ ಎದುರಾಳಿ, ಸೋಮಣ್ಣನವರನ್ನು ಹೋಗಳಿದ ಹಳೆಯ ವಿಡಿಯೋ ಎರಡನ್ನೂ ಹಂಚಿಕೊಂಡು, “ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ. ಅವರವ ಭಾವ ಭಕುತಿಗೆ” ಎಂದು ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿದ್ದರು. ಸಂಸದರ ಈ ಟ್ವೀಟ್‌ಗೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...