ಪ್ರಶಾಂತ್‌ ಸಂಬರಗಿಗೆ ನಗುತ್ತಲೇ ತಿರುಗೇಟು ನೀಡಿದ ಶಿವಣ್ಣ

Date:

ಶಿವಣ್ಣ ಪ್ರಚಾರಕ್ಕೆ ಹಣ ಪಡೆದಿರುವುದಾಗಿ ಆರೋಪಿಸಿದ್ದ ಸಂಬರಗಿ

ವಿವಾದಾತ್ಮಕ ಹೇಳಿಕೆ ಹಿಂಪಡೆಯುವಂತೆ ಆಗ್ರಹಿಸಿದ ಹಿರಿಯ ನಟ

ಶಿವರಾಜ್‌ ಕುಮಾರ್‌, ಹಣ ಪಡೆದು ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂಬ ಪ್ರಶಾಂತ್‌ ಸಂಬರಗಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಣ್ಣ ನನ್ನ ಬಳಿ ಹಣ ಇಲ್ಲವೇ? ನಿಮ್ಮ ಹೇಳಿಕೆಯನ್ನು ಮೊದಲು ಹಿಂಪಡೆಯಿರಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಪರ ಭರ್ಜರಿ ಪ್ರಚಾರ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ತಮ್ಮ ಬಗ್ಗೆ ಪ್ರಶಾಂತ್‌ ಸಂಬರಗಿ ಮಾಡಿದ ʼಫೇಸ್‌ಬುಕ್‌ ಪೋಸ್ಟ್‌ʼ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಹಣಕ್ಕಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳುತ್ತಲೇ ಆಶ್ಚರ್ಯ ವ್ಯಕ್ತಪಡಿಸಿರುವ ಅವರು, “ನಮಗೆ ಹಣ ಮುಖ್ಯವಂತಾ? ಹಾಗಿದ್ದರೆ ನಮ್ಮ ಬಳಿ ದುಡ್ಡಿಲ್ಲವಾ? ದಯವಿಟ್ಟು ಈ ಹೇಳಿಕೆಯನ್ನು ವಾಪಾಸ್‌ ಪಡೆಯಿರಿ. ನಾನು ಹೆಚ್ಚು ಸಿನಿಮಾಗಳನ್ನು ಮಾಡುತ್ತೇನೆ ಎಂಬ ಕಾರಣಕ್ಕೆ ಈ ರೀತಿ ಮಾತನಾಡುವುದು ತಪ್ಪು. ನಾನು ಹಣ ಪಡೆದುಕೊಂಡು ಯಾರ ಪರವೂ ಪ್ರಚಾರ ಮಾಡಲು ಬಂದಿಲ್ಲ. ಮನಸ್ಸಿನಿಂದ ಬಂದಿದ್ದೇನೆ. ಒಬ್ಬ ಮನುಷ್ಯನಾಗಿ ಬಂದಿದ್ದೇನೆಯೇ ಹೊರತು, ವ್ಯಾಪಾರಕ್ಕಾಗಿ ಅಲ್ಲ. ಬೇರೆ ಯಾರನ್ನೂ ಟೀಕಿಸುವುದಕ್ಕಾಗಿ ಕೂಡ ನಾನು ಬಂದಿಲ್ಲ. ನಾನು ಬೆಂಬಲಿಸುತ್ತಿರುವ ವ್ಯಕ್ತಿಗಳ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಬೇರೆ ಯಾರ ಬಗ್ಗೆಯೂ ಮಾತನಾಡಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಪರ ಶಿವರಾಜ್‌ ಕುಮಾರ್‌ ಪ್ರಚಾರ : ನಾಲಿಗೆ ಹರಿಬಿಟ್ಟ ಪ್ರಶಾಂತ್‌ ಸಂಬರಗಿ

ಫೇಸ್‌ಬುಕ್‌ನಲ್ಲಿ ಶಿವರಾಜ್‌ ಕುಮಾರ್‌ ಬಗ್ಗೆ ವಿವಾದಾತ್ಮಕ ಬರಹ ಹಂಚಿಕೊಂಡಿದ್ದ ಪ್ರಶಾಂತ್‌ ಸಂಬರಗಿ, “ಶಿವಣ್ಣ ಯಾವತ್ತೂ ʼಸ್ಕ್ರಿಪ್ಟ್‌ʼ ಕೇಳುವುದೇ ಇಲ್ಲ. ಆದರೆ, ಪೇಮೆಂಟ್‌ ತುಂಬಾನೇ ಮುಖ್ಯ, ಒಪ್ಪಿಕೊಂಡಿದ್ದ ಸಿನಿಮಾ ಮಾಡುತ್ತಾರೆ. ತುಂಬಾ ಎಮೋಶನಲ್‌ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್‌ ಆದರೂ ಅವರು ಕೇರ್‌ ಮಾಡಲ್ಲ. ಮತ್ತೆ ಪೇಮೆಂಟ್‌ ತೆಗೆದುಕೊಂಡು ಇನ್ನೊಂದು ಫಿಲಂ ಸೈನ್‌ ಮಾಡಿಬಿಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್‌ ಗೆದ್ದರೇನು, ಸೋತರೇನು ಎಲ್ಲ ಒಂದೇ. ಬಂತಾ ಪ್ಯಾಕೇಟ್‌ ಸರಿ. ಆಲ್‌ ರೈಟ್‌ ಮುಂದೆ ಹೋಗೋಣ” ಎಂದು ಗಂಭೀರ ಆರೋಪ ಮಾಡಿದ್ದು, ಶಿವಣ್ಣನ ವಿರುದ್ಧ ಅಶ್ಲೀಲ ಪದ ಪ್ರಯೋಗವನ್ನು ಕೂಡ ಮಾಡಿದ್ದಾರೆ. ಈ ಫೇಸ್‌ಬುಕ್‌ ಪೋಸ್ಟ್‌ಗೆ ಶಿವಣ್ಣನ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಲೇ ಎಚ್ಚೆತ್ತ ಪ್ರಶಾಂತ್‌ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...