ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ ಮೊಮ್ಮಗ : ಮೈಸೂರಿನ ಜನ ಹೇಳಿದ್ದೇನು ಗೊತ್ತೇ?

Date:

  • ತಾತನೊಂದಿಗೆ ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ಮೊಮ್ಮಗ
  • ಮೈಸೂರು ಪ್ರಚಾರ ಕ್ಷೇತ್ರದಲ್ಲಿ ರಾಕೇಶ್ ಪುತ್ರ ಧವನ್ ಉಪಸ್ಥಿತಿ

ಮೂರನೇ ತಲೆಮಾರಿನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬ ಸಿದ್ಧವಾಗುತ್ತಿದೆಯೇ? ಇಂತಹದ್ದೊಂದು ಪ್ರಶ್ನೆ ಈಗ ಸಿದ್ದರಾಮಯ್ಯ ಅಭಿಮಾನಿಗಳನ್ನು ಕಾಡಲಾರಂಭಿಸಿದೆ.

ಇದಕ್ಕೆ ಪೂರಕವೆನ್ನುವಂತೆ ಅವರ ಮೊಮ್ಮಗ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುತ್ರ ಧವನ್ ತಾತ ಸಿದ್ದರಾಮಯ್ಯ ಜೊತೆ ಪ್ರಚಾರ ಕಣದಲ್ಲಿ ಕಾಣಿಸಿಕೊಂಡಿದ್ದಾನೆ.

ಮೈಸೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಿದ್ದರಾಮಯ್ಯ ಜೊತೆ ಧವನ್ ಕೂಡ ಓಡಾಟ ಆರಂಭಿಸಿದ್ದಾನೆ. ಈತನಿಗೆ ಚಿಕ್ಕಪ್ಪ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾರ್ಗದರ್ಶಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾತ ಹಾಗೂ ಚಿಕ್ಕಪ್ಪನ ಜೊತೆ ಚುನಾವಣಾ ಕಣದೊಳಗೆ ತಿರುಗುತ್ತಿರುವ ಧವನ್ ಗೆ ಎಲೆಕ್ಷನ್ ವಿಚಾರದ ಬಗ್ಗೆ ಬಹಳ ಕುತೂಹಲವಂತೆ.

ಚುನಾವಣೆ ಎಂದರೇನು? ಅದು ಹೇಗಿರುತ್ತೆ? ಪ್ರಚಾರ ಶೈಲಿ ಮತ್ತು ಕಾರ್ಯ, ಜನರ ಒಡನಾಟ ಇವುಗಳೆಲ್ಲವನ್ನೂ ಹತ್ತಿರದಿಂದ ನೋಡಿ ತಿಳಿದುಕೊಳ್ಳುವ ಕುತೂಹಲ ಆತನದ್ದು.ಹೀಗಾಗಿ ಬಿರು ಬೇಸಿಗೆಯಲ್ಲೂ ಆತ ಪ್ರಚಾರ ಕಾರ್ಯದ ವೇಳೆ ಮನೆಯ ಹಿರಿಯರೊಂದಿಗೆ ಉಪಸ್ಥಿತನಿದ್ದಾನೆ.

ಧವನ್‌ಗೆ ಅವರ ಅಪ್ಪನಂತೆ ರಾಜಕೀಯದಲ್ಲಿ ಕೊಂಚ ಆಸಕ್ತಿ ಜಾಸ್ತಿ ಹಾಗಾಗಿ ನಮ್ಮ ಜೊತೆ ಬಂದಿದ್ದಾನೆ. ಹುಡುಗ ನೋಡಿ ತಿಳ್ಕೋತೀನಿ ಅಂದ ಅದಕ್ಕೆ ನಾವೂ ಕರ್ಕೊಂಡು ಬಂದಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರೂ ಮೊಮ್ಮಗನ ಉಪಸ್ಥಿತಿ ಬಗ್ಗೆ ಹೆಮ್ಮೆಯಿಂದ ಮಾಧ್ಯಮದವರಿಗೆ ಹೇಳಿಕೊಂಡರು.

ಅಂದ ಹಾಗೆ ಧವನ್ ಈಗ ಪದವಿಪೂರ್ವ ವಿಭಾಗದಲ್ಲಿ ಓದುತ್ತಿರುವ ವಿಧ್ಯಾರ್ಥಿ. ರಜೆ ಕಾಲವಾಗಿರುವುದರಿಂದ ಮನೆಯವರೊಂದಿಗೆ ಚುನಾವಣಾ ಕಾರ್ಯಗಳಲ್ಲಿ ಆತ ಭಾಗಿಯಾಗುತ್ತಿದ್ದಾನೆ.ಮೊಮ್ಮಗ

ಮೈಸೂರು ಜನ ಏನಂತಾರೆ?

ಸಿದ್ದರಾಮಯ್ಯನವರ ಮೊಮ್ಮಗನನ್ನು ಪ್ರಚಾರ ಕಣದಲ್ಲಿ ನೋಡಿರುವ ಸಿದ್ದರಾಮಯ್ಯ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಈದಿನ.ಕಾಮ್‌ನೊಂದಿಗೆ ಮಾತನಾಡಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶಿವಪ್ರಸಾದ್, ನಮ್ಮ ಸಾಹೇಬರ ಮೊಮ್ಮಗನನ್ನ ನೋಡಿದರೆ ನಮ್ಮ ರಾಕೇಶ್ ಅಣ್ಣನನ್ನ ನೋಡಿದಂಗೆ ಆಗತ್ತೆ.

ಅಪ್ಪನ ಥರಾನೇ ಹುಡುಗ ಎಲ್ಲರನ್ನೂ ವಿಶ್ವಾಸದಿಂದಲೇ ಮಾತನಾಡಿಸುತ್ತಾನೆ. ಮುಕ್ತವಾಗಿ ಬೆರೆಯುತ್ತಾನೆ. ಹೀಗೆ ಮುಂದುವರೆದರೆ ಅವರಿಗೂ ರಾಜಕೀಯ ಭವಿಷ್ಯ ಸಿಗೋದ್ರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.

ಮೂರನೇ ತಲೆಮಾರಿಗೆ ತಯಾರಿಯೇ?

ಮೊಮ್ಮಗ ಧವನ್ ತನ್ನಿಚ್ಛೆಯಂತೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಎನ್ನುವುದು ಸಿದ್ದರಾಮಯ್ಯನವರ ಹೇಳಿಕೆ.

ಆದರೆ ರಾಜಕೀಯದ ಒಳಗಣ್ಣಿನ ಲೆಕ್ಕಾಚಾರದ ಮೂಲಕ ನೋಡುವುದಾದರೆ ಸಿದ್ದರಾಮಯ್ಯ ತಮ್ಮ ಕುಟುಂಬದ ಮೂರನೇ ತಲೆಮಾರಿಗೆ ರಾಜಕೀಯದ ಪಾಠ ಹೇಳಿಕೊಡುತ್ತಿದ್ದಾರೆನ್ನುವುದು ಘೋಷಿತ.

ಸಿದ್ದರಾಮಯ್ಯ ಬಲ್ಲವರ ಪ್ರಕಾರ ತಮ್ಮ ಉತ್ತರಾಧಿಕಾರಿಯನ್ನಾಗಿ ರಾಕೇಶ್ ಅವರನ್ನೇ ಮಾಡಬೇಕೆನ್ನುವುದು ಅವರ ಇಂಗಿತವಾಗಿತ್ತು. ಆದರೆ ಅವರ ಅಕಾಲಿಕ ಮೃತ್ಯುವಿನ ಕಾರಣ, ತಮ್ಮಎರಡನೇ ಮಗ ಯತೀಂದ್ರರನ್ನು ಅನಿವಾರ್ಯವಾಗಿ ಅವರು ರಾಜಕಾರಣಕ್ಕೆ ತರಬೇಕಾಯ್ತು.

ಇದ್ದುದರಲ್ಲಿ ಒಳ್ಳೇ ಹೆಸರನ್ನುಳಿಸಿಕೊಂಡಿರುವ ಯತೀಂದ್ರ ರಾಜಕಾರಣಕ್ಕಿಂತ ನೇರ ಸಮಾಜಸೇವೆ ಹಾಗೂ ಡಾಕ್ಟರ್ ಆಗಿರುವುದನ್ನೇ ಹೆಚ್ಚು ಬಯಸುವ ಕಾರಣ ಸಿದ್ದರಾಮಯ್ಯ, ಅವರಿಗೆ ಹೆಚ್ಚಿನ ರಾಜಕೀಯ ಹೊರೆ ಹೊರಿಸದೆ ಮುಂದಿನ ನಿರ್ಧಾರವನ್ನು ಅವರಿಗೇ ಬಿಟ್ಟಿದರು.

ಈ ಸುದ್ದಿ ಓದಿದ್ದೀರಾ? : ತುಮಕೂರಿನಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಸ್ವತಂತ್ರ ಅಭ್ಯರ್ಥಿಯಾದ…

ಈ ಬಾರಿ ತಮ್ಮದು ಕೊನೆಯ ಚುನಾವಣಾ ರಾಜಕಾರಣ ಎಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ, ಕುಟುಂಬ ರಾಜಕಾರಣ ಬೇಡ ಎನ್ನುವವರು. ಆದರೆ ರಾಜಕಾರಣ ಪ್ರವೇಶ ಅವರವರ ಇಷ್ಟ ಅದಕ್ಕೆ ಯಾರ ಅಡ್ಡಿಯೂ ಇಲ್ಲ. ವೈಯಕ್ತಿಕವಾಗಿ ನನ್ನ ಕುಟಂಬದವರು ರಾಜಕಾರಣದಲ್ಲಿರುವುದು ನನಗೆ ಇಷ್ಟ ಇಲ್ಲ ಎಂದು ಹೇಳಿಕೊಂಡಿದ್ದರು.

ಆದರೆ ಅವರವರ ಬದುಕನ್ನು ಅವರೇ ರೂಪಿಸಿಕೊಳ್ಳಬೇಕು. ಅವರ ಆಸಕ್ತಿಗಳಿಗೆ ನಾನು ಅಡ್ಡಿಯಾಗಲಾರೆ. ಬೇಕು ಎಂದವರಿಗೆ ರಾಜಕೀಯ ಮಾರ್ಗದರ್ಶನ ಮಾಡುವೆ ಎಂದೂ ಹೇಳಿದ್ದರು. ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಈ ಹೇಳೀಕೆಯೀಗ ಧವನ್ ವಿಚಾರದಲ್ಲಿ ನಿಜವೇನೋ ಎನಿಸುವಂತಿದೆ.

ಹುಡುಗ ಇಷ್ಟಪಟ್ಟಿದ್ದಕ್ಕೆ ಕರೆದುಕೊಂಡು ಬಂದೆ ಎನ್ನುವ ಮೂಲಕ ರಾಜಕೀಯ ಅಖಾಡಕ್ಕೆ ಮೊಮ್ಮಗನ ಮೊದಲ ಎಂಟ್ರಿಯನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿಸಿದ್ದಾರೆ. ಮುಂದಿನದ್ದನ್ನು ಭವಿಷ್ಯದಲ್ಲಿ ಮೊಮ್ಮಗ ಧವನ್ ನಿರ್ಧರಿಸಿಕೊಳ್ಳಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...