ಹುಬ್ಬಳ್ಳಿ ಭಾಷಣದಲ್ಲಿ ‘ಸಾರ್ವಭೌಮತ್ವ’ ಪದವನ್ನು ಸೋನಿಯಾ ಗಾಂಧಿ ಬಳಸಿಲ್ಲ; ಕಾಂಗ್ರೆಸ್‌ ಸ್ಪಷ್ಟನೆ

Date:

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ ‘ಸಾರ್ವಭೌಮತ್ವ’ ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ ಟ್ವೀಟ್ಅನ್ನು ಅಳಿಸಿದೆ.

“ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಅಖಂಡತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಸೋನಿಯಾ ಗಾಂಧಿ ಹೇಳಿದ್ದಾಗಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿತ್ತು. ಸಾರ್ವಭೌಮತೆ ಕುರಿತು ಮಾತನಾಡಿರುವ ಸೋನಿಯಾ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು.

ಸೋನಿಯಾ ಗಾಂಧಿ ಅವರ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗವು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು. ನೋಟಿಸ್‌ ಉತ್ತರಿಸಿರುವ ಕಾಂಗ್ರೆಸ್, ‘ಸೋನಿಯಾ ಗಾಂಧಿ ಅವರು ಸಾರ್ವಭೌಮತ್ವ ಪದ ಬಳಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇ 6ರಂದು ಹುಬ್ಬಳ್ಳಿಯಲ್ಲಿ ಭಾಷಣ ಮಾಡಿದ್ದ ಸೋನಿಯಾ ಗಾಂಧಿ ‘ಸಾರ್ವಭೌಮತ್ವ’ ಎಂಬ ಪದವನ್ನು ಎಂದಿಗೂ ಬಳಸಿಲ್ಲ. ಅವರ ಭಾಷಣವನ್ನು ತಪ್ಪಾಗಿ ವರದಿ ಮಾಡಲಾಗಿದ್ದರಿಂದ, ಅದನ್ನು ಅಳಿಸಲಾಗಿದೆ” ಕಾಂಗ್ರೆಸ್ ಬುಧವಾರ ಟ್ವೀಟ್ ಮಾಡಿದೆ. ಟ್ವೀಟ್‌ನಲ್ಲಿ ಸೋನಿಯಾ ಗಾಂಧಿ ಅವರ ಹಿಂದಿ ಭಾಷಣದ ಪ್ರತಿ ಮತ್ತು ಯೂಟ್ಯೂಬ್‌ ವಿಡಿಯೋ ಲಿಂಕ್‌ಅನ್ನು ಹಂಚಿಕೊಂಡಿದೆ.

ಸೋನಿಯಾ ಗಾಂಧಿ ಮತ್ತು ಅವರ ಪಕ್ಷದ ಮಾನ್ಯತೆಯ ವಿರುದ್ಧ ಎಫ್‌ಐಆರ್‌ಗೆ ಕೋರಿ ಚುನಾವಣಾ ಆಯೋಗಕ್ಕೆ ಸೋಮವಾರ ಬಿಜೆಪಿಯ ಟೀಕೆಗೆ ಸಂಬಂಧಿಸಿದಂತೆ ಗಲಾಟೆ ಸ್ಫೋಟಗೊಂಡಿದೆ. ಪಕ್ಷದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಸ್ಪಷ್ಟಪಡಿಸಲು ಮತ್ತು ಸರಿಪಡಿಸಲು ಚುನಾವಣಾ ಸಮಿತಿಯು ಕಾಂಗ್ರೆಸ್‌ಗೆ ಕೇಳಿದೆ.

ಈ ಸುದ್ದಿ ಓದಿದ್ದೀರಾ?: ಈಗೇನಿದ್ದರೂ `ಆಪರೇಷನ್’ದೇ ಮಾತುಕತೆ!

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ, “ಭಾರತದ ಒಕ್ಕೂಟದಲ್ಲಿ ಕರ್ನಾಟಕವು ಅತ್ಯಂತ ಪ್ರಮುಖ ಸದಸ್ಯ ರಾಜ್ಯವಾಗಿದೆ. ಭಾರತದ ಒಕ್ಕೂಟದ ಸದಸ್ಯ ರಾಜ್ಯದ ಸಾರ್ವಭೌಮತ್ವವನ್ನು ರಕ್ಷಿಸುವ ಯಾವುದೇ ಕರೆಯು ಪ್ರತ್ಯೇಕತೆಯ ಕರೆಗೆ ಸಮಾನವಾಗಿರುತ್ತದೆ. ಇದು ಅಪಾಯಕಾರಿ ಮತ್ತು ವಿನಾಶಕಾರಿಯಾಗಿದೆ. ಪ್ರಸ್ತುತ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಇಂತಹ ಮಾತುಗಳನ್ನು ಆಡಬಾರದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...