ಕೊಲೆ ಆರೋಪಿ, ರೌಡಿಶೀಟರ್ ವೇದಿಕೆ ಹಂಚಿಕೊಂಡ ಪ್ರಧಾನಿ; ಮೋದಿ ವಿರುದ್ಧ ಕಿಡಿ

Date:

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್‌ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಿಡಿಕಾರಿದ್ದು, ಟೀಕೆ ಮಾಡುತ್ತಿವೆ.

ಇತ್ತೀಚೆಗೆಷ್ಟೇ, ಮಂಡ್ಯದಲ್ಲಿ ಮೋದಿ ರೋಡ್‌ ಶೋ ನಡೆಸಿದ್ದಾಗ, ಪೈಟರ್‌ ರವಿಗೆ ಮೋದಿ ಕೈಮುಗಿದಿದ್ದರು. ಅವರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಟೀಕೆಗೂ ಗುರಿಯಾಗಿತ್ತು. ಇದೀಗ, ಭಾನುವಾರ ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಿದ್ದ ಮೋದಿ, ರೌಡಿಶೀಟರ್ ಮುದ್ದುಕೃಷ್ಣ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.

ಮೋದಿ ಮತ್ತು ಮುದ್ದುಕೃಷ್ಣ ವೇದಿಕೆಯಲ್ಲಿರುವ ಫೋಟೋವನ್ನು ಹಂಚಿಕೊಂಡಿರುವ ಜೆಡಿಎಸ್‌ ಪ್ರಧಾನಿ ವಿರುದ್ಧ ಕಿಡಿಕಾರಿದೆ. “ಈ ಹಿಂದೆ ರೌಡಿಶೀಟರ್‌ಗೆ ಕೈ ಮುಗಿದಿದ್ದ ;ಚುನಾವಣಾ ಜೀವಿ; ನರೇಂದ್ರ ಮೋದಿ, ಇದೀಗ ಮತ್ತೊಬ್ಬ ರೌಡಿಶೀಟರ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದಾರೆ. ಅವರು ಪ್ರಧಾನಿ ಹುದ್ದೆಯ ಎಲ್ಲ ಘನತೆಯನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಪ್ರಧಾನಿಯ ಗಮನಕ್ಕೆ ಬರದೆ ರೌಡಿಯೊಬ್ಬ ಇಷ್ಟೊಂದು ಹತ್ತಿರ ಸುಳಿಯಲು ಸಾಧ್ಯವೆ?” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ರೌಡಿ ಮೋರ್ಚಾದಿಂದ ರಾಜ್ಯಕ್ಕೆ ಏನು ಅಪಾಯ ಕಾದಿದಿಯೊ. ಕ್ರಿಮಿನಲ್‌ಗಳನ್ನು ಈ ರೀತಿಯಾಗಿ ಗುಡ್ಡೆ ಹಾಕುತ್ತಿರುವ ಬಿಜೆಪಿಯ ಬಗ್ಗೆ ಡಿಜಿಪಿ ಕರ್ನಾಟಕ ಪೊಲೀಸ್ ಎಚ್ಚರವಾಗಿರಲಿ. ಚುನಾವಣೆ ಗೆಲ್ಲಲು ಬಿಜೆಪಿ ಯಾವ ಮಟ್ಟಕ್ಕೆ ಇಳಿಯಲು ಹೇಸುವುದಿಲ್ಲ ಎಂಬುವುದು ಇಡೀ ಕರುನಾಡಿಗೆ ತಿಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ?: ಬೇಲೂರು | 20 ಸೀಟುಗಳಿಂದ ರಾಜ್ಯದ ಲೂಟಿಯಲ್ಲಿ ಪಾಲು ಬಯಸುತ್ತಿದೆ ಜೆಡಿಎಸ್‌: ಮೋದಿ

“ರೌಡಿಶೀಟರ್‌ಗಳು, ಕೊಲೆ ಆರೋಪಿಗಳು ಪ್ರಧಾನಿಯೊಂದಿಗೆ ವೇದಿಕೆ ಏರುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಇಲ್ಲಿ ಪ್ರಧಾನಿ ಮೋದಿಯವರಿಗೆ ಸನ್ಮಾನ ಮಾಡುತ್ತಿರುವುದು ರೌಡಿಶೀಟರ್, ಡಬಲ್ ಮರ್ಡರ್ ಆರೋಪಿ ಮುದ್ದು ಕೃಷ್ಣ ಅಲಿಯಾಸ್ ಮುದ್ದು. ಮೋದಿಯವರ ಕಿರೀಟಕ್ಕೆ ಬಿಜೆಪಿಯ ಮತ್ತೊಬ್ಬ ರೌಡಿಶೀಟರ್ ಗರಿ ಸೇರ್ಪಡೆ” ಎಂದು ಕಾಂಗ್ರೆಸ್ ಕೆಂಡಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...