ಚುನಾವಣೆ 2023 | ನಾಗ್ಪುರ್‌ ಪಡೆಯಿಂದ ಶೆಟ್ಟರ್‌ ಮೇಲೆ ಗೂಢಾಚಾರಿಕೆ

Date:

  • ಶೆಟ್ಟರ್‌ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
  • ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್‌ ನಿಗಾ

ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ತೊರೆದು, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ವಿರುದ್ಧ ಟಿಕೆಟ್‌ ತಪ್ಪಲು ಅವರೇ ಕಾರಣ ಎಂದು ಆರೋಪ ಮಾಡಿದ ನಂತರ, ಅದನ್ನು ಬಿಜೆಪಿ ಮತ್ತು ಸಂಘ ಪರಿವಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಜಗದೀಶ ಶೆಟ್ಟರ್ ಅವರನ್ನು ವಿಧಾನಸಭೆಗೆ ಆಯ್ಕೆಯಾಗದಂತೆ ನೋಡಿಕೊಳ್ಳಲು ಕ್ಷೇತ್ರದೊಳಗೆ ರಣತಂತ್ರ ಹೆಣೆಯುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಗಾದರೂ ಮಾಡಿ ಈ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಲು ಮತ್ತು ತಮ್ಮ ಮತಬ್ಯಾಂಕ್​ ಅನ್ನು​ ಮತ್ತಷ್ಟು ಭದ್ರಪಡಿಸಿಕೊಳ್ಳಲು ಆರ್​ಎಸ್​​ಎಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ.

ನಾಗ್ಪುರದಿಂದ ಸುಮಾರು 50 ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿ ವಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಮೂಲಕ ಬಿಜೆಪಿ ಹಲವು ತಂತ್ರಗಳನ್ನು ಜಗದೀಶ್‌ ಶೆಟ್ಟರ್‌ ಸುತ್ತ ಹೆಣೆದಿದೆ.

ಶೆಟ್ಟರ್‌ ಮೇಲೆ ಗೂಡಾಚಾರಿಕೆ

ನಾಗ್ಪುರದಿಂದ ಬಂದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಶೆಟ್ಟರ್‌ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ ಎನ್ನಲಾಗಿದೆ. ಶೆಟ್ಟರ್ ಅವರ ಪ್ರತಿಯೊಂದು ನಡೆಯನ್ನು ಅವರು ಸೂಕ್ಷ್ಮವಾಗಿ ಗಮನಿಸಲು ಈಗಾಗಲೇ ಆ ವಿಶೇಷ ಪಡೆ ಆರಂಭಿಸಿದ್ದು, ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೂ ನಿಗಾ ಇಟ್ಟಿದ್ದಾರೆ.

ಬಿ ಎಲ್ ಸಂತೋಷ್ ಅವರನ್ನು ಟೀಕಿಸಿದ್ದಕ್ಕೆ ಆರ್​ಎಸ್​​ಎಸ್ ಸಹ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಹೀಗಾಗಿ ಶೆಟ್ಟರ್ ಚಲನವಲನದ ಮೇಲೆ ರಹಸ್ಯವಾಗಿ ಕಣ್ಣಿಟ್ಟಿರುವ ಆರ್​​ಎಸ್​​ಎಸ್ ಕಾರ್ಯಕರ್ತರ ತಂಡ, ಈ ಬಾರಿ ಹೇಗಾದರೂ ಮಾಡಿ ಶೆಟ್ಟರ್‌ ಅವರನ್ನು ಮಣಿಸಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಪಣತೊಟ್ಟಿದೆ ಎನ್ನಲಾಗುತ್ತಿದೆ.

ಈ ನಡುವೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...