40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್

Date:

  • ಪ್ರಧಾನಿ, ಗೃಹಸಚಿವರು ಎಷ್ಟೇ ಪ್ರಚಾರ ಮಾಡಲಿ, ಇದು ರಾಜ್ಯ ಚುನಾವಣೆ
  • ಮೇ 10ರಂದು ಹಸ್ತಕ್ಕೆ ಮತ ಹಾಕಿದರೆ ರಾಜ್ಯಕ್ಕೆ ಹಿತ ಎಂದ ಜೈರಾಮ್ ರಮೇಶ್

ಪ್ರಧಾನಿಗಳು, ಗೃಹಸಚಿವರು ಎಷ್ಟಾದರೂ ಚುನಾವಣೆ ಮಾಡಲಿ. ಇದು ಕೇಂದ್ರ ಚುನಾವಣೆಯಲ್ಲ, ರಾಜ್ಯ ಚುನಾವಣೆ. ಈ ರಾಜ್ಯದಲ್ಲಿ ಜನ 40% ಕಮಿಷನ್ ಸರ್ಕಾರದಿಂದ ಮುಕ್ತಿಪಡೆಯಲು ತೀರ್ಮಾನಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯರ ರೋಡ್ ಶೋ, ಸಮಾವೇಶ, ಚುನಾವಣಾ ಆಯೋಗಕ್ಕೆ ದೂರು ಎಲ್ಲ ನೋಡಿದರೆ ಅವರು ವಿಷಯಗಳ ಕೊರತೆ ಎದುರಿಸುತ್ತಿದ್ದಾರೆ” ಎಂದರು.

“ಮೇ 10ರಂದು ಹಸ್ತಕ್ಕೆ ಮತ ಹಾಕಿದರೆ ರಾಜ್ಯಕ್ಕೆ ಹಿತ. ಇದೇ ನಮ್ಮ ಪ್ರಚಾರ ಘೋಷವಾಕ್ಯ. ಇದು ಅತ್ಯಂತ ಮಹತ್ವಪೂರ್ಣ ಚುನಾವಣೆ. ಈ ರಾಜ್ಯದ ನಂತರ ಆರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಿಂದ ನಮ್ಮ ಸಂಘಟನೆಗೆ ಹೆಚ್ಚಿನ ಶಕ್ತಿ ಆತ್ಮವಿಶ್ವಾಸ ಸಿಗಲಿದೆ. 2024ರ ಬಗ್ಗೆ ನಾವು ವಿಚಾರ ಮಾಡುತ್ತಿಲ್ಲ. ನಮ್ಮ ಗಮನ ರಾಜ್ಯಗಳ ಚುನಾವಣೆ ಮೇಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಚುನಾವಣೆ ಸಿಂಗಲ್ ಇಂಜಿನ್ ಚುನಾವಣೆಯೇ ಹೊರತು, ಡಬಲ್ ಇಂಜಿನ್ ಚುನಾವಣೆ ಅಲ್ಲ. ಯಾವ ಪಕ್ಷ ಅಧಿಕಾರಕ್ಕೆ ಬಂದು ಯಾರು ಮುಖ್ಯಮಂತ್ರಿ ಆಗಿ ಆಡಳಿತ ನಡೆಸಲಿದ್ದಾರೆ ಎಂಬುದು ಈ ಚುನಾವಣೆಯ ವಿಚಾರ. ಪ್ರಧಾನಮಂತ್ರಿ, ಗೃಹ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮಾತೆತ್ತಿದರೆ ಡಬಲ್ ಇಂಜಿನ್ ಸರ್ಕಾರ ಎಂದು ಮಾತನಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ದೆಹಲಿ ಮೇಲೆ ಬೆಂಗಳೂರು ಅವಲಂಬಿತವಾಗಿಲ್ಲ. ಪ್ರಧಾನಮಂತ್ರಿಗಳು 40% ಕಮಿಷನ್ ಬಗ್ಗೆ ಯಾವುದೇ ಮಾತನಾಡುತ್ತಿಲ್ಲ. ಹೀಗಾಗಿ ಅವರು ಡಬಲ್ ಇಂಜಿನ್ ಎಂದು ಮಾತನಾಡುತ್ತಿದ್ದಾರೆ. ನಿಜವಾದ ಡಬಲ್ ಇಂಜಿನ್ ಎಂದರೆ ಒಂದು ಇಂಜಿನ್ ಆರ್ಥಿಕ ವಿಕಾಸಕ್ಕೆ ಇರಬೇಕು. ರೈತರು, ಮಹಿಳೆಯರು, ಯುವಕರಿಗೆ ನೆರವಾಗಬೇಕು. ಆಗ ನಿಜವಾದ ಡಬಲ್ ಇಂಜಿನ್ ಸರ್ಕಾರವಾಗಲಿದೆ. ಇದನ್ನು 80 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಬೇರೆ ಬೇರೆ ರಾಜ್ಯಗಳ ನೀಡುತ್ತಾ ಬಂದಿದೆ” ಎಂದು ಹೇಳಿದರು.

“ನಮ್ಮ ಚುನಾವಣೆ ವ್ಯವಸ್ಥೆಯಲ್ಲಿ ಪಕ್ಷ ಹಾಗೂ ಪಕ್ಷದ ಪ್ರಣಾಳಿಕೆ, ಕಾರ್ಯಕ್ರಮಕ್ಕೆ ಮತ ಹಾಕುತ್ತೇವೆ. ಹೀಗಾಗಿ ನಮಗೆ ಹೆಚ್ಚಿನ ವಿಶ್ವಾಸವಿದೆ. ಈ ಬಾರಿ ಮಲೆನಾಡು, ಕಲ್ಯಾಣ, ಕಿತ್ತೂರು ಕರ್ನಾಟಕ, ಕರಾವಳಿಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸವಿದೆ. ಬೇರೆ ಜಿಲ್ಲೆಗಳಲ್ಲಿ ಬೇರೆ ಪಕ್ಷಗಳಿಂದ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಹೀಗಾಗಿ ನಮ್ಮ ಭಾವನೆ ಸಕಾರಾತ್ಮಕವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...