ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

Date:

  • ಜನರ ಪ್ರಬಲ ದನಿಯಾಗಲು ಎಸ್.ಯು.ಸಿ.ಐ (ಸಿ) ಪಕ್ಷವನ್ನು ಬೆಂಬಲಿಸಿ
  • ಮೋದಿ ಅಧಿಕಾರಕ್ಕೆ ಬಂದು 9 ವರ್ಷ ಕಳೆದರೂ ಭ್ರಷ್ಟಾಚಾರ ಮಿತಿಮೀರಿದೆ

ಜನರ ಪರ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಮಧುಲತಾ ಗೌಡರ ಅವರು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ ಉಮಾ ಮನವಿ ಮಾಡಿದರು.

ಧಾರವಾಡ ವಿಧಾನಸಭಾ ಕ್ಷೇತ್ರದ ಹಳೇತೇಗೂರು ಗ್ರಾಮದಲ್ಲಿ ಎಸ್.ಯು.ಸಿ.ಐ (ಸಿ) ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ ಪರವಾಗಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಮಾಯಾಣದ ಕುಂಭಕರ್ಣನಂತೆ ಜನಪ್ರತಿನಿಧಿಗಳು ಐದು ವರ್ಷಕ್ಕೊಮ್ಮೆ ನಿಮ್ಮ ಮನೆಗೆ ಬರುತ್ತಾರೆ. ದುಡ್ಡು, ಜಾತಿ ಬಲಗಳೇ ಅಭ್ಯರ್ಥಿಗಳ ಆಯ್ಕೆಗೆ ಮಾನದಂಡವಾಗಿವೆ. ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲವಾಗಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನ ಖಾವೂಂಗಾ, ನ ಖಾನೆ ದೂಂಗಾ’ ಎಂದು ನರೇಂದ್ರ ಮೋದಿಯವರು ದೊಡ್ಡ ದೊಡ್ಡ  ಮಾತುಗಳನ್ನು ಆಡುತ್ತ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳು ಕಳೆದವು. ಆದರೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ಕೊಡುವ ಭರವಸೆ ನೀಡಿದ್ದರು. ಆದರೆ, ಅತಿ ಹೆಚ್ಚಿನ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇರುವ ಉದ್ಯೋಗಗಳನ್ನೆ ಕಡಿತ ಮಾಡಲಾಗುತ್ತಿದೆ. ಸಾವಿರಾರು ಕಾರ್ಖಾನೆಗಳನ್ನು ಮುಚ್ಚಿ ಕಾರ್ಮಿಕರನ್ನು ಮನೆಗೆ ಕಳಿಸಲಾಗಿದೆ ಎಂದು ಕಿಡಿಕಾರಿದರು.

ಸ್ವಿಸ್ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರುತ್ತೇವೆಂದು ನೋಟ್ ಬ್ಯಾನ್ ಮಾಡಿದರು. ಕಪ್ಪು ಹಣ ತಂದು ನಿಮ್ಮ ಖಾತೆಗಳಿಗೆ 15 ಲಕ್ಷ ರೂಪಾಯಿ ಹಾಕಿದ್ದರಾ? ಈ ಹಿಂದೆ ರಾಜ್ಯದಲ್ಲಿ ಆಳ್ವಿಕೆ ಮಾಡಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ನಂತರ ಜನಪರವಾದ ಸರ್ಕಾರ ನಡೆಸುವಲ್ಲಿ ವಿಪಲವಾಗಿ ರಾಜ್ಯದ ಜನರ ನಂಬಿಕೆ ಕಳೆದುಕೊಂಡಿವೆ ಎಂದು ಆರೋಪಿದರು.

ಮತ್ತೇ ಚುನಾವಣೆ ಬಂದಿದೆ. ಕಾಂಗ್ರೆಸ್ ,ಬಿಜೆಪಿ, ಜೆಡಿಎಸ್ ಭರವಸೆಗಳ ಹೊಳೆಯನ್ನೇ ಹರಿಸುತ್ತಿವೆ. ಎಷ್ಟು ಸಲ ಈ ಹುಸಿ ಭರವಸೆಗಳನ್ನು ನಂಬುವುದು? ಜನ ಪ್ರಜ್ಞಾವಂತರಾಗುತ್ತಿದ್ದಾರೆ. ಬೀದಿಗಿಳಿದು ಪ್ರಶ್ನೆ ಕೇಳುತ್ತಿದ್ದಾರೆ. ಜಗತ್ತಿನ ಬೇರೆ ಬೇರೆ ದೇಶಗಳಲ್ಲೂ ಜನ ಹೋರಾಟಗಳು ಬೆಳೆಯುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಎಂದರು.

ಈ ಸುದ್ದಿ ಓದಿದ್ದೀರಾ? ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ಕೋವಿಡ್ ಸಾಂಕ್ರಾಮಿಕ ಬಂದಾಗ ಏಕಾಏಕಿ ಲಾಕ್‌ಡೌನ್ ಘೋಷಣೆ ಮಾಡಿ ಜನರ ಹೊಟ್ಟೆಯ ಮೇಲೆ ಬರೆ ಎಳೆಯಲಾಯಿತು. ನಗರಗಳಲ್ಲಿರುವ ಕೋಟ್ಯಾಂತರ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ನಡೆದೇ ಸಾಗಿದರು. ಹಾಗೆ ಪ್ರಯಾಣಿಸುವಾಗ ಸಾವಿರಾರು ಜನ ಮೃತಪಟ್ಟರು. ಅದೇ ವಿದೇಶಗಳಲ್ಲಿರುವ ಶ್ರೀಮಂತರನ್ನು ಕರೆತರಲು ವಿಮಾನಗಳನ್ನು ಕಳಿಸಲಾಯಿತು. ಬಡವರು ಮನುಷ್ಯರಲ್ಲವಾ ಎಂದು ಪ್ರಶ್ನಿಸಿದರು.

ಕೋವಿಡ್ ಎರಡನೇ ಅಲೆಯಲ್ಲಿ ಲಕ್ಷಾಂತರ ಜನ ಸೂಕ್ತ ಚಿಕಿತ್ಸೆ ಇಲ್ಲದೇ, ಆಮ್ಲಜನಕದ ಕೊರತೆಯಿಂದ  ಮರಣಕ್ಕೆ ತುತ್ತಾದರು. ಎಷ್ಟೋ ಶವಗಳಿಗೆ ಗೌರವದ ಅಂತ್ಯಸಂಸ್ಕಾರ ಕೂಡ ದೊರೆಯಲಿಲ್ಲ. ಕೋವಿಡ್ ಸಾಂಕ್ರಾಮಿಕದ ನಿರ್ವಹಣೆಯನ್ನು ಸರಿಯಾಗಿ ಮಾಡಲಾರದೇ ಗಂಟೆ ಬಾರಿಸಿ, ಚಪ್ಪಾಳೆ ಬಾರಿಸಿ ಎಂದು ಯಾಮಾರಿಸಲಾಯಿತು ಎಂದು ಆರೋಪಿಸಿದರು.

ಬಂಡವಾಳಗಾರರ ಪರವಾಗಿರುವ ಈ ಪಕ್ಷಗಳಿಂದ ಜನರ ಯಾವುದೇ ಸಮಸ್ಯೆಗಳ ಪರಿಹಾರ ಸಾಧ್ಯವಿಲ್ಲ.  ಅದಕ್ಕಾಗಿ ಜನ ಹೋರಾಟಗಳು ಬೆಳೆದು ದೇಶದಲ್ಲಿ ಕ್ರಾಂತಿಯ ಮೂಲಕ ಸಮಾಜವಾದಿ ವ್ಯವಸ್ಥೆ ಬಂದಾಗ ಜನ ನೆಮ್ಮದಿಯಾಗಿ ಬದುಕಲು ಸಾಧ್ಯ. ಅದಕ್ಕಾಗಿ ತಮ್ಮ ಜನರ ಸಮಸ್ಯೆಗಳ ವಿರುದ್ಧ ನಿರಂತರವಾಗಿ ಚಳವಳಿಗಳನ್ನು ರೂಪಿಸುತ್ತಿದೆ. ಈ ಚಳವಳಿಗಳನ್ನು ಬಲಪಡಿಸಿ, ವಿಧಾನಸಭೆಯಲ್ಲಿ ಜನರ ದನಿಯಾಗಿ ಕೆಲಸ ಮಾಡಲು ನಮ್ಮ ಪಕ್ಷದ ಅಭ್ಯರ್ಥಿ ಮಧುಲತಾ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಸೆಕ್ರೆಟಿಯೇಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ, ಅಭ್ಯರ್ಥಿ ಮಧುಲತಾ ಗೌಡರ, ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ ಕಾರ್ಯಕ್ರಮದ ಅಧ್ಯಕ್ಷತ ವಹಿಸಿದ್ದರು. ವೇದಿಕೆಯ ಮೇಲೆ ಗಂಗಾಧರ ಬಡಿಗೇರ, ಗೋವಿಂದ ಕೃಷ್ಣಪ್ಪನವರ, ದೀಪಾ ಧಾರವಾಡ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...