ತೇರದಾಳ ಕ್ಷೇತ್ರ | ನೇಕಾರ ಸಮುದಾಯ ಯಾರ ಪರ ನಿಲ್ಲುತ್ತೋ ಅವರೇ ಶಾಸಕರು

Date:

ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಫೈಟ್‌ ಇರಲಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ ಗೆಲುವಿಗೆ ಕಾರಣವಾಗುತ್ತಾರೆ ಎಂಬುದು ಕೂಡ ಕುತೂಹಲ ಸೃಷ್ಟಿಸಿದೆ.

‌ಜೈನರ ಪ್ರಮುಖ ಕೇಂದ್ರವಾಗಿರುವ ತೇರದಾಳ, ರಾಜ್ಯದಲ್ಲಿ ಅತಿಹೆಚ್ಚು ನೇಕಾರರನ್ನು ಹೊಂದಿರುವ ವಿಧಾನಸಭಾ ಕ್ಷೇತ್ರ. ನಾಲ್ಕನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ತೇರದಾಳ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ.

2008ರಲ್ಲಿ ನಡೆದ ಕ್ಷೇತ್ರ ಮರುವಿಂಗಡನೆಯಲ್ಲಿ ಗುಳೇದಗುಡ್ಡ ಮತ್ತು ಜಮಖಂಡಿಯ ಹಳ್ಳಿಗಳನ್ನು ಸೇರಿಸಿ, ತೇರದಾಳ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ರಬಕವಿ, ಬನಹಟ್ಟಿ, ಮಹಾಲಿಂಗಪುರ ಈ ಕ್ಷೇತ್ರದ ಪ್ರಮುಖ ಪಟ್ಟಣಗಳಾಗಿವೆ.

ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ 2018ರಲ್ಲಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಬಾಗಲಕೋಟ ಜಿಲ್ಲೆಯ ತೇರದಾಳವನ್ನು ಹೊಸ ತಾಲೂಕನ್ನಾಗಿ ಘೋಷಣೆ ಮಾಡಿದರು. ರಾಜಕೀಯವಾಗಿ ಇಲ್ಲಿ ಮೇಲಿಂದ ಮೇಲೆ ನೇಕಾರರಿಗೆ ಮನ್ನಣೆ ನೀಡಿ ಅನ್ನುವ ಕೂಗು ಸದಾ ಕೇಳುತ್ತಲೇ ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ನೇಕಾರ ಪ್ರಾತಿನಿಧ್ಯ ವಿಚಾರದಲ್ಲಿ ಕಾಂಗ್ರೆಸ್​ ನೇಕಾರ ಸಮುದಾಯದ ಉಮಾಶ್ರೀ ಅವರಿಗೆ ಮಣೆ ಹಾಕಿ ಒಮ್ಮೆ ಗೆಲುವು ಕಂಡು ಇನ್ನೊಮ್ಮೆ ಸೋಲು ಅನುಭವಿಸಿದೆ. ಆದರೆ ಬಿಜೆಪಿ ಮಾತ್ರ ಈ ವಿಚಾರದಲ್ಲಿ ಭಿನ್ನವಾಗಿ ನಡೆದುಕೊಂಡಿದೆ. ಪ್ರತಿ ಬಾರಿ ನೇಕಾರರಿಗೆ ಸ್ಪರ್ಧೆಗೆ ಅವಕಾಶ ಕೊಡಿ ಎಂಬ ಕೂಗು ಇದ್ದರೂ ಇದೂವರೆಗೂ ಬಿಜೆಪಿ ನೇಕಾರರಿಗೆ ಮನ್ನಣೆ ನೀಡಿಲ್ಲ. ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿ, ನೇಕಾರ ಸಮುದಾಯ ಅಲ್ಲದ ಲಿಂಗಾಯತ ಸಮುದಾಯದ ಸಿದ್ದು ಸವದಿಗೆ ಟಿಕೆಟ್‌ ನೀಡಿದೆ.

2008ರಿಂದ ಕಾಂಗ್ರೆಸ್‌ನಿಂದ ತೇರದಾಳ ಕ್ಷೇತ್ರವನ್ನು ಪ್ರತಿನಿಧಿಸುತ್ತ ಬಂದ ನಟಿ ಉಮಾಶ್ರೀಗೆ ಈ ಬಾರಿ ಟಿಕೆಟ್‌ ತಪ್ಪಿದೆ. ಹೊಸ ಮುಖ ಸಿದ್ದು ಕೊಣ್ಣೂರು ಅವರಿಗೆ ಕಾಂಗ್ರೆಸ್‌ ಮಣೆ ಹಾಕಿದೆ. 2013ರಲ್ಲಿ ನಟಿ ಉಮಾಶ್ರೀ ಶಾಸಕಿಯಾಗಿ ಆಯ್ಕೆಯಾಗಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವೆಯೂ ಆದರು. ಅವರು ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ನೊಣವಿನಕೆರೆ ಗ್ರಾಮದವರು. ಸದಾ ಬೆಂಗಳೂರಿನಲ್ಲೇ ಕಾಲ ಕಳೆಯುತ್ತಾರೆ ಎನ್ನುವ ದೂರು ಇವರ ಮೇಲಿತ್ತು. ಕೊನೆ ಕ್ಷಣದವರೆಗೂ ತಮಗೇ ಟಿಕೆಟ್‌ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ, ತೇರದಾಳದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ಕೂಗು ಬಲವಾಗಿ ಕೇಳಿ ಬಂದಿದ್ದರಿಂದ ಸಿದ್ದು ಕೊಣ್ಣೂರು ಅವರಿಗೆ ಟಿಕೆಟ್‌ ಲಭಿಸಿದೆ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಬಿಜೆಪಿಯಲ್ಲಿ ಈ ಬಾರಿ ಜಿಲ್ಲೆಯ ನೇಕಾರ ಮುಖಂಡ ಮನೋಹರ ಶಿರೋಳ ಪ್ರಬಲ ಆಕಾಂಕ್ಷಿಯಾಗಿದ್ದರು. ಇವುಗಳ ಮಧ್ಯೆ ಮೂರನೇ ವ್ಯಕ್ತಿ ಪಿಕೆಪಿಎಸ್​ ಮಾಜಿ ನಿರ್ದೆಶಕ ಭೀಮಶಿ ಮಗದುಮ್​ ಸಹ ಬಿಜೆಪಿ ಟಿಕೆಟ್​ ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಬಿಜೆಪಿ ಅಂತಿಮವಾಗಿ ಸಿದ್ದು ಸವದಿಗೆ ಮುದ್ರೆ ಒತ್ತಿದೆ.

ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪೈಪೋಟಿ ನೀಡಲು ಮತ್ತೊಬ್ಬ ಅಭ್ಯರ್ಥಿ ಸಜ್ಜಾಗಿದ್ದಾರೆ. ಅದು ಕಾಂಗ್ರೆಸ್‌ನಿಂದ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಡಾ. ಪದ್ಮಜೀತ್ ನಾಡಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ.

ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಫೈಟ್‌ ಇರಲಿದೆ. ಮತ್ತೊಂದು ಅವಧಿಗೆ ಗೆಲ್ಲಲು ಸಿದ್ದು ಸವದಿ ಪ್ರಯತ್ನಿಸುತ್ತಿದ್ದು, ಸವದಿಗೆ ಕಾಂಗ್ರೆಸ್‌ನ ಹೊಸ ಮುಖ ಸಿದ್ದು ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ ಗೆಲುವಿಗೆ ಕಾರಣವಾಗುತ್ತಾರೆ ಎಂಬುದು ಕೂಡ ಕುತೂಹಲ ಸೃಷ್ಟಿಸಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...