ಚುನಾವಣಾ ಬಿಸಿಯಲ್ಲಿದ್ದ ಕಾರ್ಯಕರ್ತರಿಗೆ ಪೊಲೀಸರ ಚಾಟಿ : 22 ಕೋಟಿ ದಂಡ

Date:

  • ಪ್ರಚಾರದ ವೇಳೆ ನಿಯಮ ಉಲ್ಲಂಘಿಸಿದ ಕಾರ್ಯಕರ್ತರಿಗೆ ಬಿಸಿ
  • ಕ್ಯಾಮರಾ ಕಣ್ಗಾವಲ್ಲಿ ಸೆರೆಯಾದ ಲಕ್ಷ ಲಕ್ಷ ಟ್ರಾಫಿಕ್ ಪ್ರಕರಣಗಳು

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಚೆನ್ನಾಗಿ ಬಿಸಿ ಮುಟ್ಟಿಸಿದ್ದಾರೆ.

ರೋಡ್ ಶೋ, ಬಹಿರಂಗ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು, ಮತ್ತವರ ಬೆಂಬಲಿಗರ ಟ್ರಾಫಿಕ್ ವೈಲೇಷನ್‌ಗಳನ್ನು ದಾಖಲಿಸಿರುವ ಪೊಲೀಸರು ನಾಲ್ಕು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ, 22.89 ಕೋಟಿ ದಂಡ ಹಾಕಿದ್ದಾರೆ.

ಹೌದು ಪ್ರಚಾರದ ಭರಾಟೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೆ ಪೊಲೀಸರು ದಂಡದ ನೋಟಿಸ್ ಕಳುಹಿಸಿದ್ದಾರೆ. ನೀತಿ ಸಂಹಿತೆ ಜಾರಿ ಬಳಿಕ ನಿಯಮ ಮೀರಿ ಹೆಚ್ಚುವರಿ ವಾಹನ ಬಳಕೆ ಮಾಡಿರುವ ಪ್ರಕರಣಗಳೇ ಇವುಗಳಲ್ಲಿ ಜಾಸ್ತಿ ಇದ್ದು ಇವುಗಳೆ ಹೆಚ್ಚಿನ ದಂಡಕ್ಕೆ ಕಾರಣವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್…

ಬೆಂಗಳೂರು ನಗರದವೊಂದರಲ್ಲೇ 25 ದಿನದಲ್ಲಿ 4.12 ಲಕ್ಷ ಪ್ರಕರಣ ದಾಖಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಚುನಾವಣೆ ಪ್ರಚಾರದ ವಾಹನಗಳ ಮೇಲೆ ಬರೋಬ್ಬರಿ 22.89 ಕೋಟಿ ದಂಡ ಬಿದ್ದಿದೆ. ಇವುಗಳಲ್ಲಿ ಅತಿ ವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ಹೆಲ್ಮೆಟ್ ರಹಿತ ಚಾಲನೆ, ಚಾಲನೆ ವೇಳೆ ಮೊಬೈಲ್ ಬಳಕೆ, ತ್ರಿಬಲ್ ರೇಡಿಂಗ್ ಸೇರಿದಂತೆ ಕೇಸ್‌ಗಳು ದಾಖಲಾಗಿವೆ.

ಗಮನಾರ್ಹ ವಿಚಾರ ಏನೆಂದರೆ ನಿಯಮ ಉಲ್ಲಂಘನೆಯ ಈ ಪ್ರಕರಣಗಳು ಹೆಚಾಗಿ ದಾಖಲಾಗಿರುವುದು ಸ್ಮಾರ್ಟ್ ಟ್ರಾಫಿಕ್ ಮೇಂಟೆನೆನ್ಸ್ ನ ಕ್ಯಾಮರಾಗಳಿಂದ ಎನ್ನುವುದು.

ನಗರದಾದ್ಯಂತ ಇರುವ 250 ಐಟಿಎಂಎಸ್ ಕ್ಯಾಮರಾಗಳ ದಾಖಲೆಗಳೊಂದಿಗೆ ಈ ಫೈನ್ ಹಾಕಲಾಗಿದೆ. ಇದರ ಜೊತೆಗೆ ನಿರ್ಭಯಾ ಫಂಡ್ ಅಡಿ ಹಾಕಲಾದ ನೇತ್ರ ಕ್ಯಾಮೆರಾಗಳನ್ನು ದಂಡ ವಿಧಿಸಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಇದರ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದೆನ್ನುವುದು ಇಲಾಖೆ ಮೂಲಗಳ ಮಾಹಿತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...