ಈದಿನ ವಿಶೇಷ : ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ವಾಹನ ಕೊಡುಗೆ ನೀಡಿದ ಆಂಧ್ರ ಅಭಿಮಾನಿ!

Date:

  • ಹೈದರಾಬಾದ್ ಅಭಿಮಾನಿಯಿಂದ ಪ್ರಚಾರ ವಾಹನ ಕೊಡುಗೆ
  • ನಾಳೆ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕಾಗಿ ಅಭಿಮಾನಿಯೊಬ್ಬರು ವಿಶೇಷ ಪ್ರಚಾರ ವಾಹನ ಕೊಡುಗೆಯಾಗಿ ನೀಡಿದ್ದಾರೆ.

ಹೌದು.. ದೇಶಾದ್ಯಂತ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿರುವ ಬೆರಳೆಣಿಕೆ ನಾಯಕರ ಸಾಲಿನಲ್ಲಿ ನಿಲ್ಲುವವರು ರಾಜ್ಯದ ವಿಪಕ್ಷ ನಾಯಕ ಮಾಸ್ ಲೀಡರ್ ಸಿದ್ದರಾಮಯ್ಯ.

ಸಾಮಾನ್ಯ ಕಾರ್ಯಕ್ರಮಗಳಿಂದ ಹಿಡಿದು ಪಕ್ಷದ ಬೃಹತ್ ಸಮಾವೇಶಗಳವರೆಗೆ ಜನರನ್ನು ತಮ್ಮ ಮಾತಿನಿಂದ ಸೆಳೆಯುವ ನಾಯಕ ಸಿದ್ದರಾಮಯ್ಯ. ಹೀಗಾಗಿ ಸಿದ್ದರಾಮಯ್ಯಗೆ ಸಾಲು ಸಾಲು ಅಭಿಮಾನಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭಕ್ಕೆ ಹೋದಾಗಲೆಲ್ಲ ಹಾರ ತುರಾಯಿಗಳ ಜೊತೆ ಕುರಿ, ಜೋಡೆತ್ತುಗಳನ್ನು ಕೊಟ್ಟ ಅಭಿಮಾನಿ ವರ್ಗ ಒಂದಾದರೆ, ನಾಯಕತ್ವಕ್ಕೆ ಒಲಿದು ಪ್ರಚಾರಕ್ಕಾಗಿ ಬಸ್, ಕ್ಷೇತ್ರದಲ್ಲಿ ಉಳಿದುಕೊಳ್ಳಲು ಮನೆ, ಚುನಾವಣೆ ಖರ್ಚಿಗೆ ಹೊಲ, ಮನೆ ಮಾರಿ ಹಣ ನೀಡುವ, ಓಡಾಟಕ್ಕೆ ಹೆಲಿಕಾಪ್ಟರ್ ಕೊಡಲು ನಿಂತ ಗ್ರಾಮಸ್ಥರು ಹೀಗೆ ಮತ್ತೊಂದು ವರ್ಗದ ಅಭಿಮಾನಿಗಳನ್ನು ಸಿದ್ದರಾಮಯ್ಯ ಹೊಂದಿದ್ದಾರೆ.ವಾಹನ

ಈಗ ಇಂತಹ ಅಭಿಮಾನಿಗಳ ಸಾಲಿಗೆ ಹೊಸ ಸೇರ್ಪಡೆ ಆಂಧ್ರಪ್ರದೇಶದ ಶ್ರೀಧರ್ ರಾವ್. ಸಿದ್ದರಾಮಯ್ಯ ಫ್ಯಾನ್ ಆಗಿರುವ ಶ್ರೀಧರ್, ಈ ಬಾರಿ ವಿಪಕ್ಷ ನಾಯಕರ ಚುನಾವಣಾ ಪ್ರಚಾರಕ್ಕೆ ಮಹೀಂದ್ರಾ ಕಂಪನಿಯ ಬುಲೆರೋ ಓಪನ್‌ ಜೀಪನ್ನು ಕೊಡುಗೆ ನೀಡಿದ್ದಾರೆ.

ಪ್ರಚಾರ ಕಾರ್ಯದ ಸಲುವಾಗಿಯೇ ವಿಶೇಷ ವಿನ್ಯಾಸ ಮಾಡಿಸಿ ಆಂಧ್ರದಿಂದಲೇ ಆ ವಾಹನವನ್ನು ತಂದು ಸಿದ್ದರಾಮಯ್ಯನವರಿಗೆ ಕೊಟ್ಟಿದ್ದಾರೆ.

ಪ್ರಚಾರಕ್ಕೆ ಅನುವಾಗುವಂತೆ ವಾಹನಕ್ಕೆ ಮೈಕ್‌ಸೆಟ್‌, ಕತ್ತಲ ಪ್ರಚಾರಕ್ಕೆ ಎಲ್‌ಇಡಿ ಲೈಟ್ಸ್‌, ಹತ್ತು ಮಂದಿ ಒಟ್ಟಿಗೆ ಪ್ರಯಾಣ ಮಾಡಲು ಅನುವಾಗುವಂತೆ ವಿಸ್ತಾರ ಪ್ಲಾಟ್‌ ಫಾರಂ, ಸುಲಭವಾಗಿ ಹತ್ತಿ ಇಳಿಯುವ ಮೆಟ್ಟಿಲನ್ನು ಈ ವಾಹನ ಹೊಂದಿದೆ.

ಈ ಸುದ್ದಿ ಓದಿದ್ದೀರಾ? :ಇಡೀ ಬಿಜೆಪಿ ಬಿ ಎಲ್ ಸಂತೋಷ್ ಕಪಿಮುಷ್ಠಿಯಲ್ಲಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾಳೆ(ಏಪ್ರಿಲ್ 19) ನಂಜನಗೂಡಿನಲ್ಲಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಳಿಕ ವರುಣಾ ಕ್ಷೇತ್ರದ ಪ್ರಚಾರ ಕಾರ್ಯದಲ್ಲಿ ಈ ವಾಹನದ ಬಳಕೆ ಮಾಡಲಿದ್ದಾರೆ.

ಇತ್ತ ನೆಚ್ಚಿನ ನಾಯಕನ ಚುನಾವಣಾ ಸೇವೆಗೆ ಪುಟ್ಟ ಕಾಣಿಕೆ ಕೊಟ್ಟ ಶ್ರೀಧರ್‌ರಾವ್ ಸಂತೋಷದಿಂದಿದ್ದಾರೆ. ತಮ್ಮ ವಾಹನವೇರಿ ಗೆಲುವಿನ ಗುರಿ ತಲುಪಲಿದ್ದಾರೆನ್ನುವ ವಿಶ್ವಾಸವನ್ನು ಅವರು ಇದೇ ವೇಳೆ ವ್ಯಕ್ತಪಡಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...