ಕೂಲಿ ಮಾಡುತ್ತಲೇ ‘ಸೋಬಾನೆ’ ತಂಡ ಕಟ್ಟಿದ ಸಿದ್ಧಗಂಗಮ್ಮ!

Date:

‘ನಾನು ಹಾಡುವುದೇ ನನ್ನ ಹಾಗೂ ನಮ್ಮೂರ ಜನರ ಖುಷಿಗಾಗಿ. ಹೀಗಾಗಿ ಪದ ಹಾಡಿದಾಗ ಏನನ್ನೂ ಬಯಸುವುದಿಲ್ಲ’ – ಹೀಗಂತ ಹೇಳಿದ್ದು 65 ವರ್ಷದ ಹಿರಿಯ ಜೀವ ಸಿದ್ಧಗಂಗಮ್ಮ. ಅವರ ಮುಗ್ಧ ಮಾತುಗಳು ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರ ‘ಎದೆ ತುಂಬಿ ಹಾಡುವೆನು’ ಗೀತೆಯ ‘ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ’ ಸಾಲನ್ನು ನೆನಪಿಸಿದವು.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸೋಮಲಾಪುರ ಎಂಬ ಪುಟ್ಟ ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ಸೋಬಾನೆ ಪದ ಹಾಡುತ್ತ ಬಂದಿರುವ ಸಿದ್ಧಗಂಗಮ್ಮ, ಅಳಿವಿನಂಚಿನಲ್ಲಿರುವ ಈ ಜಾನಪದ ಕಲೆಯ ರಾಯಭಾರಿಯೂ ಹೌದು. ಇಂದಿಗೂ ದಣಿವರಿಯದೆ ಗಂಟೆಗಟ್ಟಲೆ ಸೋಬಾನೆ ಪದಗಳನ್ನು ಹಾಡುತ್ತಾರೆ.

ಜನಪದ ಸಂಸ್ಕೃತಿಯಲ್ಲಿ ಸೋಬಾನೆ ಪದಕ್ಕೆ ವಿಶಿಷ್ಟ ಸ್ಥಾನವಿದೆ. ಅದು ಮೌಖಿಕವಾಗಿ ಒಬ್ಬರಿಂದ ಒಬ್ಬರಿಗೆ ದಾಟಿಬಂದಂತಹ ಕಲೆ. ಇಂತಹ ಕಲೆ ಈಗ ಟಿವಿ, ಸಾಮಾಜಿಕ ಜಾಲತಾಣಗಳ ಅಬ್ಬರದಿಂದಾಗಿ ಕಣ್ಮರೆಯಾಗುತ್ತಿದೆ ಎಂಬುದು ವಿಷಾದದ ಸಂಗತಿ. ಹಳ್ಳಿಗಳಲ್ಲಿ ಸೋಬಾನೆ ಪದ ಹಾಡುವವರ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ. ಹೊಸ ತಲೆಮಾರಿನ ಮಕ್ಕಳಲ್ಲಿ ಕಲಿಯುವ ಉತ್ಸಾಹವೂ ಕ್ಷೀಣಿಸಿದೆ. ಇವೆಲ್ಲದರ ನಡುವೆಯೂ ಸಿದ್ಧಗಂಗಮ್ಮ ಅವರ ಹಾಡುವ ಉತ್ಸಾಹ ಕುಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
6212849659328709861

5ನೇ ತರಗತಿಯವರೆಗೂ ಓದಿರುವ ಸಿದ್ಧಗಂಗಮ್ಮ, ಈಗಲೂ ಕೂಲಿ ಮಾಡಿಯೇ ಬದುಕು ನಡೆಸುತ್ತಿದ್ದಾರೆ. ತಮ್ಮ ತಾಯಿ ಹಾಗೂ ಅಜ್ಜಿಯಿಂದ ಕಲಿತಿರುವ ಸೋಬಾನೆ ಪದಗಳನ್ನು ಗ್ರಾಮದ ಇತರ ಹೆಣ್ಣು ಮಕ್ಕಳಿಗೂ ಕಲಿಸಿದ್ದಾರೆ. ಈ ಮೂಲಕ ಕಲೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸ ಮಾಡಿದ್ದಾರೆ.

ಸೋಮಲಾಪುರದಲ್ಲಿ ತಮ್ಮದೇ ತಂಡ ಕಟ್ಟಿಕೊಂಡಿರುವ ಸಿದ್ಧಗಂಗಮ್ಮ, ಗ್ರಾಮದಲ್ಲಿ ಯಾವುದೇ ಕಾರ್ಯಕ್ರಮವಿದ್ದರೂ ಅಲ್ಲಿಗೆ ಹೋಗಿ ಪದ ಹಾಡುತ್ತಾರೆ. ಅವರ ತಂಡದಲ್ಲಿ ರೇಣುಕಮ್ಮ (55), ಕರಿಯಮ್ಮ (48), ನರಸಮ್ಮ (80), ತಿಮ್ಮಕ್ಕ (55) ಹಾಗೂ ಲಕ್ಷ್ಮಮ್ಮ (50) ಇದ್ದಾರೆ.

ಸಿದ್ಧಗಂಗಮ್ಮ ಮತ್ತು ತಂಡದಿಂದ ಸೋಬಾನೆ ಪದ

ಊರಿನ ಜಾತ್ರೆ, ಮದುವೆ, ಪೂಜೆ ಸೇರಿದಂತೆ ಗ್ರಾಮದಲ್ಲಿ ಯಾವುದೇ ಸಮಾರಂಭ ಇರಲಿ, ಅಲ್ಲಿ ಸಿದ್ಧಗಂಗಮ್ಮ ತಂಡ ಇರಲೇಬೇಕು. ಆದರೆ ಇಂತಹ ಅಪರೂಪದ ಕಲಾವಿದೆಯನ್ನು ಗುರುತಿಸುವಲ್ಲಿ ಸರ್ಕಾರ ಗುರುತಿಸುವಲ್ಲಿ ವಿಫಲವಾಗಿದೆ.

‘ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ನೆರವಾಗಬೇಕು’ ಎಂದು ಗ್ರಾಮದ ಅಂಜಲಿ ಮನವಿ ಮಾಡಿದರು.

‘ಸರ್ಕಾರದಿಂದ ಆಯೋಜಿಸುವ ಜಾನಪದ ಕಾರ್ಯಕ್ರಮಗಳಲ್ಲಿ ನಮ್ಮೂರಿನ ಹೆಮ್ಮೆ ಆಗಿರುವ ಸಿದ್ಧಗಂಗಮ್ಮ ಅವರಿಗೆ ಅವಕಾಶ ಕೊಡಬೇಕು. ಅವರ ಸಾಧನೆ ಗುರುತಿಸಿ ಪ್ರಶಸ್ತಿ ನೀಡಬೇಕು’ ಎಂಬುದು ಗ್ರಾಮದ ಮುಖಂಡರ ಒತ್ತಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...