1960ರ ದಶಕದಿಂದ ಒಂದು ಕುಟುಂಬದ ಹಿಡಿತದಲ್ಲಿರುವ ರಾಜ್ಯದ ಎರಡು ಕ್ಷೇತ್ರಗಳು

Date:

ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.

ಹೊಳೆನರಸೀಪುರ ಕ್ಷೇತ್ರ

ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ. 1962ರಿಂದ 1985ರವರೆಗೂ ಸತತ ಆರು ಚುನಾವಣೆಗಳಲ್ಲಿ ಹೆಚ್‌ ಡಿ ದೇವೇಗೌಡರು ಸ್ವತಂತ್ರ, ಕಾಂಗ್ರೆಸ್ ಹಾಗೂ ಜನತಾ ಪರಿವಾರದಿಂದ ಶಾಸಕರಾಗಿದ್ದರು. 1989ರಲ್ಲಿ ಮೊದಲ ಬಾರಿಗೆ ದೇವೇಗೌಡ ಅವರು ಸೋತ ನಂತರ ಜಿ ಪುಟ್ಟಸ್ವಾಮಿಗೌಡ ಶಾಸಕರಾಗಿದ್ದರು. ನಂತರ 1994ರಲ್ಲಿ ದೇವೇಗೌಡರ ಪುತ್ರ ಹೆಚ್‌ ಡಿ ರೇವಣ್ಣ ಗೆಲುವು ಸಾಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1999ರಲ್ಲಿ ಕಾಂಗ್ರೆಸಿನಿಂದ ಎ ದೊಡ್ಡೇಗೌಡ ಅವರು ರೇವಣ್ಣ ಅವರನ್ನು ಸೋಲಿಸಿ ಶಾಸಕರಾಗಿದ್ದರು. ನಂತರದ 2004ರ ಚುನಾವಣೆಯಿಂದ 2018ರವರೆಗೂ ನಾಲ್ಕು ಚುನಾವಣೆಗಳಲ್ಲೂ ರೇವಣ್ಣ ಅವರೇ ಆಯ್ಕೆಯಾಗುತ್ತಿದ್ದಾರೆ. ಈ ಕ್ಷೇತ್ರದಲ್ಲಿ ದೇವೇಗೌಡ ಅವರ ಕುಟುಂಬ ಒಟ್ಟು 11 ಬಾರಿ ಗೆಲುವು ಸಾಧಿಸಿದೆ. 2023ರ ಚುನಾವಣೆಯಲ್ಲಿಯೂ ಹೆಚ್‌ ಡಿ ರೇವಣ್ಣ ಸ್ಪರ್ಧಿಸಿದ್ದಾರೆ.

ಸೊರಬ ಕ್ಷೇತ್ರ

ಶಿವಮೊಗ್ಗದ ಸೊರಬ ಕ್ಷೇತ್ರ 1967ರರಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ಬಂಗಾರಪ್ಪ ಅವರ ಕುಟುಂಬದ ಹಿಡಿತದಲ್ಲಿದೆ. ಬಂಗಾರಪ್ಪನವರು 1967ರಿಂದ 1994ರವರೆಗೂ ಸತತ 7 ಚುನಾವಣೆಗಳಲ್ಲಿ ಕಾಂಗ್ರೆಸ್, ಜನತಾ ಪಕ್ಷ ಸೇರಿದಂತೆ ವಿವಿಧ ಪಕ್ಷಗಳಿಂದ ಜಯ ಗಳಿಸಿದ್ದರು. 1996ರಿಂದ 2004ರವರೆಗೆ ಬಂಗಾರಪ್ಪನವರ ಪುತ್ರ ಕುಮಾರ್‌ ಬಂಗಾರಪ್ಪ ಮೂರು ಬಾರಿ ಕಾಂಗ್ರೆಸಿನಿಂದ ಆಯ್ಕೆಯಾಗಿದ್ದರು. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹರತಾಳು ಹಾಲಪ್ಪ ಒಮ್ಮೆ ಮಾತ್ರ ಸೊರಬವನ್ನು ಕಸಿದುಕೊಂಡಿದ್ದರು. 2013ರಲ್ಲಿ ಜೆಡಿಎಸ್‌ನಿಂದ ಬಂಗಾರಪ್ಪನವರ ಮತ್ತೊಬ್ಬ ಪುತ್ರ ಮಧು ಬಂಗಾರಪ್ಪ ಶಾಸಕರಾಗಿದ್ದರು. 2018ರಲ್ಲಿ ಕುಮಾರ್‌ ಬಂಗಾರಪ್ಪ ಬಿಜೆಪಿಯಿಂದ ಆಯ್ಕೆಯಾಗಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಬಾರಿಯೂ ಬಂಗಾರಪ್ಪನವರ ಇಬ್ಬರು ಪುತ್ರರು ಸ್ಪರ್ಧಿಸಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್‌ನಿಂದ, ಕುಮಾರ್‌ ಬಂಗಾರಪ್ಪ ಬಿಜೆಪಿಯಿಂದ ಕಣದಲ್ಲಿದ್ದಾರೆ.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...