ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ

Date:

  • ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗಿಲ್ಲ
  • ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು : ರಾಘವ್‌ ಚಡ್ಡಾ

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಷ್ಟೇ ಹಣ ನೀಡಿದರೂ ಕರ್ನಾಟಕದ ಜನತೆ ಈ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಮತ ಹಾಕಬೇಕು ಎಂದು ಪಕ್ಷದ ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ ಕರೆ ನೀಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಘವ್‌ ಚಡ್ಡಾ, “ಕರ್ನಾಟಕದಲ್ಲಿ ಚಿಕ್ಕಮಕ್ಕಳಿಂದ ಹಿರಿಯ ನಾಗರಿಕರ ತನಕ ಎಲ್ಲರಿಗೂ ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮವಾಗಿರುವುದು ಗಮನಕ್ಕೆ ಬರುತ್ತಿದೆ. ರಾಜ್ಯ ಅಭಿವೃದ್ಧಿಯಾಗಬೇಕು. ಇಲ್ಲಿನ ಜನರು ನೆಮ್ಮದಿಯಿಂದ ಬದುಕಬೇಕಾದರೆ ಈ 40% ಕಮಿಷನ್‌ ಸರ್ಕಾರ ಹೋಗಬೇಕು. ಇಲ್ಲಿ ೦% ಕಮಿಷನ್‌ ಪಡೆಯುವ ಹಾಗೂ 100% ಪ್ರಾಮಾಣಿಕವಾಗಿ ಕೆಲಸ ಮಾಡುವ ಆಮ್‌ ಆದ್ಮಿ ಪಾರ್ಟಿ ಸರ್ಕಾರ ರಚನೆಯಾಗಬೇಕು. ರಾಜ್ಯದ ಅಭಿವೃದ್ಧಿಗಾಗಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿಯಬೇಕು ಎಂದು ಬಿಜೆಪಿ ನಾಯಕರು ಪದೇಪದೆ ಹೇಳುತ್ತಿದ್ದಾರೆ. ಆದರೆ, ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗುವ ಬದಲು ಕಮಿಷನ್‌ ಪರ್ಸೆಂಟೇಜ್‌ ಡಬಲ್‌ ಆಗಿದೆ” ಎಂದು ಹೇಳಿದರು.

“ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ಹಲವು ಜನಪರ ಹಾಗೂ ಅಭಿವೃದ್ಧಿಪರ ಗ್ಯಾರಂಟಿಗಳನ್ನು ನೀಡಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಕೇಂದ್ರಗಳ ನಿರ್ಮಾಣ, ಉದ್ಯೋಗ ಸೃಷ್ಟಿ, ಶುದ್ಧ ಹಾಗೂ ಉಚಿತ ಕುಡಿಯುವ ನೀರು, ದಿನವಿಡೀ ವಿದ್ಯುತ್‌ ಪೂರೈಕೆ ಹಾಗೂ 200 ಯೂನಿಟ್‌ ತನಕ ಉಚಿತ ವಿದ್ಯುತ್‌, ರೈತರಿಗೆ ಸಾಲಮನ್ನಾ ಬೆಂಬಲಬೆಲೆ ಸೇರಿದಂತೆ ಮುಂತಾದ ಅನೇಕ ಯೋಜನೆಗಳನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ಸೂಕ್ತ ರೀತಿಯಲ್ಲಿ ಜಾರಿಗೆ ತರಬಲ್ಲದು” ಎಂದು ರಾಘವ್‌ ಚಡ್ಡಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಜನರಿಗೆ ಹಣ ಹಾಗೂ ನಾನಾ ಆಮಿಷಗಳನ್ನು ಒಡ್ಡುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಜನರು ಅವುಗಳನ್ನು ತೆಗೆದುಕೊಳ್ಳಬಾರದು ಎಂದು ನಾನು ಹೇಳುವುದಿಲ್ಲ. ಏಕೆಂದರೆ, ಜನರ ತೆರಿಗೆಯನ್ನು ಲೂಟಿ ಮಾಡಿದ ಹಣದಿಂದಲೇ ಅವೆಲ್ಲವನ್ನು ನೀಡಲಾಗುತ್ತಿದೆ. ಆದರೆ, ಜನರು ಯಾರಿಂದ ಏನನ್ನೇ ತೆಗದುಕೊಂಡರೂ, ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು. ದೇಶದಲ್ಲಿ ಬಿಜೆಪಿ ಮಾತ್ರ ಇರಬೇಕು ಹಾಗೂ ವಿರೋಧಪಕ್ಷಗಳು ಇರಬಾರದೆಂದು ಬಿಜೆಪಿ ನಿರ್ಧರಿಸಿದೆ. ಆದ್ದರಿಂದಲೇ ಆಮ್‌ ಆದ್ಮಿ ಪಾರ್ಟಿ ನಾಯಕರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗುತ್ತಿದೆ. ದೆಹಲಿಯ ಶಿಕ್ಷಣ ಸಚಿವರಾಗಿದ್ದ ಮನೀಷ್‌ ಸಿಸೋದಿಯಾ ನಿವಾಸದಲ್ಲಿ ಕೇವಲ ₹10,000 ನಗದು ಸಿಕ್ಕಿದ್ದರೂ ಅವರನ್ನು ವಿಚಾರಣೆ ನೆಪದಲ್ಲಿ ಬಂಧಿಸಲಾಗಿದೆ” ಎಂದು ರಾಘವ್‌ ಚಡ್ಡಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ: ಬೆಸ್ಕಾಂನಿಂದ ದೂರು ದಾಖಲು

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಾಮೋದರನ್‌, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ವಕ್ತಾರರಾದ ಉಷಾ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...