“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

Date:

  • ಮೈಸೂರಿನಲ್ಲಿ ಅಹಂಕಾರದ ಹೇಳಿಕೆ ಕೊಟ್ಟ ಬಿ ಎಲ್ ಸಂತೋಷ್
  • ಮಾತನಾಡಿ ಪ್ರತಿಸ್ಪರ್ಧಿಯಾಗಲಾರೆ ಎಂದ ಆರ್‌ಎಸ್‌ಎಸ್‌ ನಾಯಕ

ನಮ್ಮ ಪಕ್ಷದಲ್ಲಿ ಮಾತನಾಡುವುದಕ್ಕಾಗಿಯೇ ಪ್ರತಾಪ್ ಸಿಂಹನಂತಹ ನಾಯಕರುಗಳಿದ್ದಾರೆ. ಹಾಗಾಗಿ ನಾನೇನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ಡಿಜಿಟಲ್ ಮಾಧ್ಯಮ ಪ್ರಕೋಷ್ಠ ಆಯೋಜಿಸಿದ್ದ ‘ಡಿಜಿಟಲ್ ಕಾರ್ಯಕರ್ತರ ಸಮ್ಮೇಳನʼದಲ್ಲಿ ಮಾತನಾಡಿದ ಸಂತೋಷ್ “ನಮ್ಮಲ್ಲಿ ಸಿಕ್ಕಾಪಟ್ಟೆ ಲೀಡರ್ ಗಳಿದ್ದಾರೆ, ಹಾಗಾಗಿ ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ” ಎಂದರು.

“ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹನಂತಹವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಂತೋಷ್ ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಬಿಜೆಪಿ ಮೀಸಲಾತಿ ಕಿತ್ತು ಹಾಕುತ್ತೇವೆ ಎಂದಿದ್ದಾರೆ. ಆಗ ಅವರು ಯಾರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವುದನ್ನು ಸ್ಪಷ್ಟಪಡಿಸಲಿʼ ಎಂದರು.

ಮೀಸಲಾತಿಯ ಚಕ್ರವನ್ನು ನಾವು ಮುಂದಕ್ಕೆ ತೆಗೆದುಕೊಂಡು ಹೋಗಿದ್ದೇವೆ. ʼನಾವು ಮುಸ್ಲಿಮರಿಗಿದ್ದ ಶೇ 4ರಷ್ಟು ಮೀಸಲಾತಿಯನ್ನು ತೆಗೆದು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿದ್ದೇವೆ. ಪರಿಶಿಷ್ಟರಿಗೂ ಮೀಸಲಾತಿ ಹೆಚ್ಚಿಸಿದ್ದೇವೆ ಎಂದು ಹೇಳಿದರು.

ಮೀಸಲಾತಿ ಕಿತ್ತುಕೊಡುವುದಾಗಿ ಹೇಳುವ ಕಾಂಗ್ರೆಸ್‌ಗೆ ಅದು ಸಾಧ್ಯವಾಗುವುದಿಲ್ಲ ಏಕೆಂದರೆ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಲೇವಡಿ ಮಾಡಿದರು.ಸಂತೋಷ್‌

ಕಾಂಗ್ರೆಸ್‌ನವರು ಅಭಿವೃದ್ಧಿಯ ಚಕ್ರಕ್ಕೂ ಕಲ್ಲು ಹಾಕುತ್ತಿದ್ದಾರೆ. ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಟೀಕಿಸಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸಾರ್ಹ ಸಮೀಕ್ಷೆಗಳು ಹೇಳಿವೆ. ಆದರೆ ಹೆಸರೇ ಗೊತ್ತಿಲ್ಲದ ಕಂಪನಿಗಳ ಸರ್ವೇಗಳನ್ನು ಕಾಂಗ್ರೆಸ್‌ನವರು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ?:ವರುಣದಲ್ಲಿ ಕಣಕ್ಕಿಳಿದ ಬಿಎಸ್‌ಪಿ : ಸಿದ್ದರಾಮಯ್ಯ ಎದುರು ದಲಿತ ದಾಳ ಉರುಳಿಸಿತೇ ಬಿಜೆಪಿ?

ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ ಸಂತೋಷ್ ನಾವು 40 ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿದ್ದೇವೆ. ವರಿಷ್ಠರು ಮಾಡಿರುವ ಬದಲಾವಣೆಗಳನ್ನು ಕಾರ್ಯಕರ್ತರು ಬೆಂಬಲಿಸಬೇಕು ಎಂದು ತಿಳಿಸಿದರು.

ನಮ್ಮ ಲೀಡರ್ ಇನ್ನೂ ಚುನಾವಣಾ ಅಖಾಡಕ್ಕೆ ಇಳಿದೇ ಇಲ್ಲ. ಬಣ್ಣದ ವೇಷ ಕಾರ್ಯಕ್ರಮ ಏಪ್ರಿಲ್ 29ರಂದು ಆರಂಭವಾಗಲಿದೆ. ನಾವು 133 ಸ್ಥಾನಗಳನ್ನು ಗೆಲ್ಲಲು ಟೊಂಕ ಕಟ್ಟಿ ಹೊರಟಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...