ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

Date:

ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆಂದು ಹಲವು ಮಂದಿ ಬೆಟ್ಟಿಂಗ್‌ ಭರಾಟೆಯಲ್ಲಿ ಮುಳುಗಿರುವುದು ಕಂಡುಬಂದಿದೆ.

ಈ ಬಾರಿಯ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆಂದು ಕೆಲವರು ಬೆಟ್ಟಿಂಗ್‌ ಮಾಡಿದ್ದರೆ, ಇನ್ನೂ ಕೆಲವರು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುರಿತೂ ಬೆಟ್ಟಿಂಗ್‌ ಮಾಡಿದ್ದಾರೆ. ಬೆಟ್ಟಿಂಗ್‌ ಅಖಾಡದಲ್ಲಿ ಹಣ, ಕುರಿ, ಕೋಳಿ, ತೋಟಗಳನ್ನೂ ಪಣಕ್ಕಿಟ್ಟಿರುವುದು ತಿಳಿದುಬಂದಿದೆ.

ಮೈಸೂರು, ಚಾಮರಾಜನಗರ, ತುಮಕೂರು, ಹುಬ್ಬಳ್ಳಿ, ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಬೆಟ್ಟಿಂಗ್‌ ಜೋರಾಗಿದೆ. ಹಲವರು ಹಣವನ್ನು ಪಣಕ್ಕಿಟ್ಟಿದ್ದರೆ, ಮತ್ತಷ್ಟು ಮಂದಿ ತಮ್ಮ ಬಳಿಯಿರುವ ವಸ್ತುಗಳನ್ನು ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಕೈ ಕಾರ್ಯಕರ್ತರೊಬ್ಬರು ತಮ್ಮ ಎರಡು ಎಕರೆ ಭೂಮಿಯನ್ನೇ ಪಣಕ್ಕೆ ಇಟ್ಟಿದ್ದಾರೆ ಎನ್ನಲಾಗಿದೆ. ದೇವದುರ್ಗದಲ್ಲಿ ಜೆಡಿಎಸ್‌ ಅಭ್ಯರ್ಥಿ ಕರೆಮ್ಮ ಗೆಲ್ಲುತ್ತಾರೆಂದು ಅಲ್ಲಿನ ರೈತನೊಬ್ಬ ತನ್ನ ಮೂರು ಎಕರೆ ಜಮೀನನನ್ನು ಪಣಕ್ಕಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಈ ಸುದ್ದಿ ಓದಿದ್ದೀರಾ?: ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಇನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆಲ್ಲುತ್ತಾರೆಂದು ಬಸವರಾಜ ಬೆಂಡಿಗೇರಿ ಎಂಬಾತ ತನ್ನ ಮಗನಿಗೆ ‘ವಿನಯ’ ಎಂದು ಹೆಸರಿಟ್ಟಿದ್ದಾರೆ. ವಿನಯ್ ಸೋತರೆ, ತನ್ನ ಮಗನ ಹೆಸರನ್ನು ಬದಲಿಸುವುದಾಗಿ ಹೇಳಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆಂದು ಕಾರ್ಯಕರ್ತನೊಬ್ಬ 10 ಲಕ್ಷ ರೂ. ಬೆಟ್ಟಿಂಗ್ ಮಾಡಿದ್ದಾನೆ. ಆದರೆ, ಜೆಡಿಎಸ್‌ ಪರವಾಗಿ ಅಷ್ಟು ಮೊತ್ತದ ಬೆಟ್ಟಿಂಗ್ ಮಾಡಲು ಯಾರು ಮುಂದೆ ಬಂದಿಲ್ಲವೆಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...