ಚುನಾವಣಾ ರಾಜಕಾರಣಕ್ಕೆ ‘ಗುಡ್‌ಬೈ’ ಹೇಳಿದ ವೈಎಸ್‌ವಿ ದತ್ತ; ಪಶ್ಚಾತ್ತಾಪದ ಪಾದಯಾತ್ರೆ

Date:

ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಈ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಲು ಮುಂದಾಗಿದ್ದಾರೆ. ಈ ಬಗ್ಗೆ ಪತ್ರವೊಂದನ್ನು ಅವರು ಬರೆದಿದ್ದಾರೆ.

ಪತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಾದ ಬೆಳವಣಿಗೆಗಳ ಪಟ್ಟಿ ಮಾಡಿರುವ ಅವರು, “ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ. ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾದೆ ಎಂಬ ತಿಳಿದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ನಡೆದ ಚುನಾವಣೆ ನನ್ನ ಪಾಲಿಗೆ ಅವಿಸ್ಮರಣೀಯವಾಗಿರುತ್ತದೆ ಎಂದು ಭಾವಿಸಿದ್ದೆ. ಇದೇ ನನ್ನ ಕೊನೆಯ ಚುನಾವಣೆ ಎಂದೂ ಹೇಳಿದ್ದೆ. ಫಲಿತಾಂಶವು ನನಗೆ ವಾಸ್ತವಾಂಶದ ದರ್ಶನ ನೀಡಿತು” ಎಂದು ಪರಾಜಿತಗೊಂಡ ಬಗ್ಗೆ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸೋಲಿಗೆ ಪ್ರಮುಖ ಐದು ಕಾರಣಗಳಿವು

“2006ರಲ್ಲಿ ಕಡೂರು ಕ್ಷೇತ್ರಕ್ಕೆ ಕಾಲಿಟ್ಟ ದಿನದಿಂದ 2023ರವರೆಗಿನ ನನ್ನ ನಡೆವಳಿಕೆ, ನಿರ್ಧಾರಗಳು ಹಾಗೂ ಮತದಾರರೊಂದಿಗಿನ ನನ್ನ ಒಡನಾಡದ ವಿಚಾರದಲ್ಲಿ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ನನ್ನನ್ನು ಸದಾ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನೆಂದೂ ತಲೆಕಡೆಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದವನು. ಸೋಲು ಗೆಲುವು ಎರಡನ್ನೂ ಸಮಚಿತ್ತದಿಂದ ಸಮಭಾವದಿಂದ ನೋಡುವ ಮನಸ್ಥಿತಿ ನನ್ನದು. ಹಾಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟೂ ಬೇಸರವಿಲ್ಲ” ಎಂದು ತಿಳಿಸಿದ್ದಾರೆ.

“ನನ್ನನ್ನು ಬೆಂಬಲಿಸಿದ ಹಿತೈಷಿಗಳಿಗೆ ಹಾಗೂ ನನ್ನ ತಪ್ಪಿನ ಕಾರಣದಿಂದ ನನ್ನಿಂದ ದೂರವಾಗಿರುವ ಮಾನಸ್ಸುಗಳನ್ನು ಒಗ್ಗೂಡಿಸುವ ಸಲುವಾಗಿ ನನ್ನ ಜನ್ಮದಿನವಾದ ಜೂನ್ 24ರಿಂದ ‘ಪ್ರಾಯಶ್ಚಿತ್ತ ಪಾದಯಾತ್ರೆ ‘ ಎಂಬ ಹೆಸರಿನೊಂದಿಗೆ ನಿಮ್ಮ ಊರುಗಳಿಗೆ ಬರುತ್ತಿದ್ದೇನೆ. ನನ್ನ ತಪ್ಪನ್ನು ನಿಮ್ಮ ಮುಂದೆ ನಿವೇದಿಸಿಕೊಂಡು, ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...