ಉದ್ಯೋಗ ಮಾಹಿತಿ | SSC CHSL ನೇಮಕಾತಿ; ಪಿಯುಸಿ ಪಾಸ್ ಆದವರು ಅರ್ಜಿ ಹಾಕಬಹುದು

Date:

ಕೇಂದ್ರ ಸರ್ಕಾರದ ಉದ್ಯೋಗಗಳಿಗಾಗಿ 3,131 ಖಾಲಿ ಸ್ಥಾನಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ತನ್ನ ವರ್ಷಾವಳಿ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ 2025ನೇ ಸಾಲಿನ CHSL(Combined Higher Secondary Level) ನೇಮಕಾತಿಯನ್ನು ಘೋಷಿಸಿದೆ. ಭಾರತದೆಲ್ಲೆಡೆ ಇರುವ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳ ಗ್ರೂಪ್-ಸಿ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಅಂಶಗಳು:
ಹುದ್ದೆಯ ಹೆಸರು: ಲೋವರ್ ಡಿವಿಷನ್ ಕ್ಲರ್ಕ್(LDC)
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್(JSA)
ಡೇಟಾ ಎಂಟ್ರಿ ಆಪರೇಟರ್(DEO) ಸೇರಿದಂತೆ ಒಟ್ಟು 3131 ಹುದ್ದೆಗಳು ಖಾಲಿ ಇವೆ.

ಭಾರತದೆಲ್ಲೆಡೆ ಕೆಲಸ ಮಾಡಬಹುದಾಗಿದ್ದು, ಮಾನ್ಯತೆ ಪಡೆದ ಸಂಸ್ಥೆಯಿಂದ 12ನೇ ತರಗತಿ ಅಥವಾ ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಯೋಮಿತಿ ವಿವರಗಳು

ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 27 ವರ್ಷ(01/01/2026ಕ್ಕೆ ಅನ್ವಯಿಸುತ್ತದೆ)

ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಸಡಿಲಿಕೆ:

ಎಸ್‌ಸಿ/ಎಸ್‌ಟಿ: 5 ವರ್ಷ
ಒಬಿಸಿ: 3 ವರ್ಷ
ಅಂಗವಿಕಲರಿಗೆ: 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿಗಳು: ಹುದ್ದೆ ವೇತನ ಶ್ರೇಣಿ (ರೂ)

LDC/JSA ₹19,900ದಿಂದ ₹63,200
DEO ₹25,500 ದಿಂದ ₹81,100

ಆಯ್ಕೆ ಪ್ರಕ್ರಿಯೆ ಹಂತಗಳು:

ಕಂಪ್ಯೂಟರ್ ಆಧಾರಿತ ಪರೀಕ್ಷೆ – ಟಿಯರ್ 1
ಟಿಯರ್ 2 ಪರೀಕ್ಷೆ(ವಿಶ್ಲೇಷಣಾತ್ಮಕ)
DEO ಹುದ್ದೆಗಾಗಿ ಸ್ಕಿಲ್ ಟೆಸ್ಟ್ ಮತ್ತು LDC ಹುದ್ದೆಗಾಗಿ ಟೈಪಿಂಗ್ ಟೆಸ್ಟ್ ಇರುತ್ತದೆ.

ದಾಖಲೆ ಪರಿಶೀಲನೆ ಮತ್ತು ಅಂತಿಮ ನೇಮಕಾತಿ

ಪರೀಕ್ಷಾ ಕೇಂದ್ರಗಳು (ಕರ್ನಾಟಕದಲ್ಲಿ): ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ.

ಅರ್ಜಿ ಶುಲ್ಕ:
ಅಭ್ಯರ್ಥಿ ವರ್ಗ ಶುಲ್ಕ (ರೂ)
ಸಾಮಾನ್ಯ / ಒಬಿಸಿ ₹100
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್‌ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಜೂನ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 18ರಂದು ಕೊನೆಯದಿನವಾಗಿದೆ. ಶುಲ್ಕ ಪಾವತಿಸಲು ಜುಲೈ 19 ಕೊನೆಯ ದಿನವಾಗಿದೆ.

ಟಿಯರ್-1 ಪರೀಕ್ಷೆ: 2025ರ ಸೆಪ್ಟೆಂಬರ್ 08 ರಿಂದ 18ರವರೆಗೆ ಟಿಯರ್‌ 1 ಪರೀಕ್ಷೆ ನಡೆಯಲಿದ್ದು, 2026ರ ಫೆಬ್ರವರಿಯಿಂದ ಮಾರ್ಚ್‌ವರೆಗೆ ಟಿಯರ್-2 ಪರೀಕ್ಷೆಗಳು ನಡೆಯಲಿವೆ.

ssc CHSLn ಅಧಿಕೃತ ಅಧಿಸೂಚನೆ ಪರಿಶೀಲಿಸಲು ಲಿಂಕ್‌ ಕ್ಲಿಕ್‌ ಮಾಡಿ, https://images.shiksha.com/mediadata/pdf/1750697875phpiHED7d.pdf

SSC CHSL 2025 ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಕೆಳಗೆ ಹಂಚಿಕೊಂಡಿರುವ ಹಂತಗಳನ್ನು ಬಳಸಿಕೊಂಡು SSC CHSL ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು:

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ- ssc.gov.in.
ಪರೀಕ್ಷೆಯ ಹೆಸರಿನ ಕೆಳಗಿರುವ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನೀವು ಹೊಸ ಬಳಕೆದಾರರಾಗಿದ್ದರೆ, ‘ಈಗಲೇ ನೋಂದಾಯಿಸಿ’ ಮೇಲೆ ಕ್ಲಿಕ್ ಮಾಡಿ.
ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ SSC OTR ನೋಂದಣಿಯನ್ನು ಕೈಗೊಳ್ಳಿ.
ನೋಂದಣಿ ಸಂಖ್ಯೆ ಅಥವಾ ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ.
‘CHSL 2025’ ಟ್ಯಾಬ್‌ಗೆ ಹೋಗಿ ಮತ್ತು ‘ಈಗಲೇ ಅನ್ವಯಿಸು’ ಲಿಂಕ್ ಕ್ಲಿಕ್ ಮಾಡಿ.
ಅಗತ್ಯವಿರುವ ವಿವರಗಳನ್ನು ನಮೂದಿಸಿ.
ಲೈವ್ ಫೋಟೋ ಸೆರೆಹಿಡಿಯಿರಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ.
ದೃಢೀಕರಣ ಪುಟವನ್ನು ಸಲ್ಲಿಸಿ ಮತ್ತು ಉಳಿಸಿ.
ನೇರ SSC CHSL ಅರ್ಜಿ ನಮೂನೆ 2025 ಲಿಂಕ್ – https://ssc.gov.in/

ಇದನ್ನೂ ಓದಿದ್ದೀರಾ? ಉದ್ಯೋಗ ಮಾಹಿತಿ | ಭಾರತೀಯ ಅಂಚೆ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜು.2 ಕೊನೆಯ ದಿನ

SSC CHSL ಅರ್ಜಿ ಶುಲ್ಕ 2025
ಎಸ್‌ಎಸ್‌ಸಿ ಸಿಎಚ್‌ಎಸ್‌ಎಲ್ ಪರೀಕ್ಷೆಗೆ ಅರ್ಜಿ ಶುಲ್ಕ 100 ರೂಪಾಯಿ. ಆದಾಗ್ಯೂ, ಮೀಸಲಾತಿ ವರ್ಗದ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ...

ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ...

ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು...