ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳ ಸದರಿ ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳಿಗೆ ಇದೇ ತಿಂಗಳ ನವೆಂಬರ್ 25 ರೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ವರದಿಗಾರರು, ಜೂನಿಯರ್ ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್, ಮಾಸಜರ್, ಸೇರಿದಂತೆ ವಿವಿಧ ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನವೆಂಬರ್ 25 ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು:
ಅರ್ಜಿ ಸ್ವೀಕರಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿಯನ್ನು ವರ್ಗಾವಾರು ಕೆಳಗಿನಂತೆ ತಿಳಿಸಲಾಗಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ವಯಸ್ಸು ದಾಟಿರಬಾರದು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5074,
ಮೊದಲನೇ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.

ಕರ್ನಾಟಕ ವಿಧಾನಸಭೆ ಸಚಿವಾಲಯದ ನೇಮಕಾತಿ ಹಾಗೂ ಸೇವಾ ಷರತ್ತುಗಳು, ನಿಯಮಗಳು 2003ರ ಅನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯಲಿದೆ).

ಇದನ್ನು ಓದಿದ್ದೀರಾ? ಕರ್ನಾಟಕ ಲೋಕಾಯುಕ್ತದಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಹುದ್ದೆವಾರು ವಿದ್ಯಾರ್ಹತೆ ವಿವರ ಕೆಳಗಿನಂತಿದೆ.

ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆ: ವಿದ್ಯಾರ್ಹತೆ
ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ | ಮಾಹಿತಿ ವಿಜ್ಞಾನ | ಎಲೆಕ್ಟ್ರಾನಿಕ್ಸ್ ಇಂಜಿನೀಯರಿಂಗ್ ನಲ್ಲಿ ಪದವೀಧರರಾಗಿರಬೇಕು ಅಥವಾ ಕಂಪ್ಯೂಟರ್ ಅಪ್ಲಿಕೇಶನ್ (MCA)ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದು, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳ ಜ್ಞಾನವುಳ್ಳವರಾಗಿರಬೇಕು.

ವಿಬಿ 6, VB.Net, ಒರಾಕಲ್, ಎಸ್ಕ್ಯುಎಲ್-ಸರ್ವರ್, ಎಂಎಸ್-ಆಕ್ಸೆಸ್, ಕ್ರಿಸ್ಟಲ್ ರಿಪೋರ್ಟ್ಸ್ ಮತ್ತು ನೆಟ್ವರ್ಕಿಂಗ್‌ನಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪ್ರೋಗ್ರಾಮರ್ ಆಗಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ಕನ್ನಡ ವರದಿಗಾರರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರಥಮ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತಿರ್ಣರಾಗಿರಬೇಕು. ಹಿಂದಿ ಪ್ರಥಮ ದರ್ಜೆಯ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.

ಕಂಪ್ಯೂಟರ್ ಆಪರೇಟರ್ ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕ ಪದವಿ (ಬಿ.ಸಿ.ಎ.) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ. ಪದವಿ ಹೊಂದಿರಬೇಕು.

ಕಿರಿಯ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನವುಳ್ಳವಾಗಿರಬೇಕು.
ಕರ್ನಾಟಕ ವಿಧಾನ ಸಭೆ ಸಚಿವಾಲಯದ ಗ್ರೂಪ್ ‘ಡಿ’ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ಹೊಂದಿರುವ ನೌಕರರಿಗೆ ಆದ್ಯತೆ ನೀಡಲಾಗುವುದು.

ಕಿರಿಯ ಗ್ರಂಥಾಲಯ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಹೊಂದಿದ್ದು, ಕಂಪ್ಯೂಟರ್‌ ಜ್ಞಾನವುಳ್ಳವಾಗಿರಬೇಕು.

ಮಸಾಜರ್ ಹುದ್ದೆಗೆ ವಿದ್ಯಾರ್ಹತೆ
ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಯಾವುದಾದರು ಹೆಲ್ತ್ ಕ್ಲಬ್ ನಲ್ಲಿ ಮಸಾಜರ್ ಆಗಿ ಕಾರ್ಯ- ನಿರ್ವಹಿಸಿರುವ ಬಗ್ಗೆ ಐದು ವರ್ಷಗಳ ಅನುಭವವಿರಬೇಕು

ಬಡಗಿ ಹುದ್ದೆಗೆ ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಥವಾ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಬಡಗಿ ಕೋರ್ಸ್‌ ಅಥವಾ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಿಂದ ಅಥವಾ ಕೈಗಾರಿಕಾ ಸಂಸ್ಥೆಯ (ಐ.ಟಿ.ಐ.)ಯಿಂದ ಪ್ರಮಾಣ ಪತ್ರ ಹೊಂದಿರಬೇಕು.

ದಲಾಯತ್ ಹುದ್ದೆಗೆ ವಿದ್ಯಾರ್ಹತೆ
7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಸ್ವೀಪರ್ ಹುದ್ದೆಗೆ ವಿದ್ಯಾರ್ಹತೆ
4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ ರೂ.500.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ...

ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ...

ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು...