ಉರಿಗೌಡ, ನಂಜೇಗೌಡರ ಸೃಷ್ಟಿ; ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆಯುವ ಹುನ್ನಾರ ಎಂದ ಕಿಶೋರ್‌

Date:

ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್‌, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು ಕಿಡಿ ಕಾರಿದ್ದಾರೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಲ್ಪಿತ ಪಾತ್ರಗಳ ಬಗೆಗಿನ ವರದಿಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಿಶೋರ್, “ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದು ರಾಜಕೀಯ ಮಾಡಲಾಗುತ್ತಿದೆ. ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಮತ್ತು ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಟಿಪ್ಪುವನ್ನು ಕೊಂದವರೆೆಂದು ಹೇಳಿ ಮುಸ್ಲಿಮರು ಮತ್ತು ಒಕ್ಕಲಿಗರನ್ನು ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ” ಎಂದು ಪ್ರಶ್ನಿಸಿದ್ದಾರೆ.

“ಮೊದಲು ಹಿಂದೂ-ಮುಸ್ಲಿಂ ಎಂದು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು. ಗಾಂಧಿ ಎಂದು ಗಾಂಧಿಯನ್ನು ಕೊಂದರು. ರೈತರನ್ನು ಭಯೋತ್ಪಾದಕರು ಎಂದರು. ಉರಿ ಹೊತ್ತಿಸಿ, ನಂಜು ಕಾರಿ, ಒಕ್ಕಲಿಗರೆಂದರು. ಟಿಪ್ಪುವೆಂದರು, ಬಿಹಾರಿಗಳೆಂದರು, ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು, ಭಾಷೆ ಎಂದರು, ದೇಶವೆಂದರು, ಇತಿಹಾಸ ತಿರುಚಿ ಸುಳ್ಳು ಸುದ್ದಿ ಹರಡಿದರು” ಎಂದು ಆಕ್ರೋಶ ವಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ʼವಸುದೇವ ಕುಟುಂಬಕಂʼನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ. ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ” ಎಂದು ರಾಜ್ಯದ ಜನರಿಗೆ ಕಿವಿ ಮಾತು ಹೇಳಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...