ಬಾಲಿವುಡ್‌ನ ಹಿರಿಯ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ಇನ್ನಿಲ್ಲ

Date:

ಬಾಲಿವುಡ್‌ನ ಹಿರಿಯ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. 66 ವರ್ಷದ ಹಿರಿಯ ನಿರ್ದೇಶಕ ದೀರ್ಘ ಕಾಲದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಗುರುವಾರ ತಡರಾತ್ರಿ ಪ್ರದೀಪ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲೇ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕೊಲ್ಕತ್ತಾ ಮೂಲದ ಪ್ರದೀಪ್‌ ಸರ್ಕಾರ್‌, 2003ರಲ್ಲಿ ಸಂಜಯ್‌ ದತ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಮುನ್ನಾ ಭಾಯ್‌ ಎಂಬಿಬಿಎಸ್‌ʼ ಚಿತ್ರದಲ್ಲಿ ಸಂಕಲನಕಾರರಾಗಿ ಕೆಲಸ ಮಾಡುವ ಮೂಲಕ ಬಾಲಿವುಡ್‌ ಪ್ರವೇಶಿಸಿದರು. ನಂತರ 2005ರಲ್ಲಿ ಸೈಫ್‌ ಅಲಿಖಾನ್‌ ಮತ್ತು ವಿದ್ಯಾಬಾಲನ್‌ ಮುಖ್ಯಭೂಮಿಕೆಯಲ್ಲಿ ಬಿಡುಗಡೆಯಾದ ʼಪರಿಣೀತಾʼ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳುವ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದರು. ʼಲಗಾ ಚುನರಿ ಮೇ ದಾಗ್‌ʼ , ʼಲಫಂಗೆ ಪರಿಂದೆʼ, ʼಮರ್ದಾನಿʼ, ʼಹೆಲಿಕಾಪ್ಟರ್‌ ಈಲಾʼ ಮುಂತಾದ ಚಿತ್ರಗಳು ಹಾಗೂ ಕೆಲವು ವೆಬ್‌ ಸರಣಿಗಳನ್ನು ನಿರ್ದೇಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಷೇಕ್‌ ಬಚ್ಚನ್‌, ಮನೋಜ್‌ ಬಾಜಪೇಯಿ, ಅಜಯ್‌ ದೇವಗನ್‌, ನೀಲ್‌ ನಿತಿನ್‌ ಮುಕೇಶ್‌ ಸೇರಿದಂತೆ ಬಾಲಿವುಡ್‌ನ ಹಲವು ಗಣ್ಯರು ಪ್ರದೀಪ್‌ ಅವರ ದಿಢೀರ್‌ ಅಗಲಿಕೆ ಕಂಬನಿ ಮಿಡಿದು, ಅವರೊಂದಿಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಮುಂಬೈನ ಶಾಸ್ತ್ರಿ ನಗರದಲ್ಲಿರುವ ಸಾಂತಾಕ್ರೂಸ್‌ ಹಿಂದೂ ರುದ್ರಭೂಮಿಯಲ್ಲಿ ಪ್ರದೀಪ್‌ ಅವರ ಅಂತ್ಯಕ್ರಿಯೆ ನೆರವೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...