ಹಣದಾಸೆಗೆ ಸೌಂಡ್‌ ತಗ್ಗಿಸುವ ʻಮಲ್ಟಿಪ್ಲೆಕ್ಸ್‌ʼಗಳು; ಆರ್‌ ಚಂದ್ರು ಆರೋಪ

Date:

  • ಕಬ್ಜʼ ಸಿನಿಮಾ ಪ್ರದರ್ಶನದ ವೇಳೆ ‘ಸೌಂಡ್‌ʼ ತಗ್ಗಿಸಿದ ‘ಮಲ್ಟಿಪ್ಲೆಕ್ಸ್‌ʼ ಸಿಬ್ಬಂದಿ
  • ‘ಮಲ್ಟಿಪ್ಲೆಕ್ಸ್‌ʼನವರಿಗೆ ಚಿತ್ರೋದ್ಯಮದ ಬಗ್ಗೆ ಕಾಳಜಿ ಇಲ್ಲ ಎಂದ ಚಂದ್ರು

ಆರ್‌ ಚಂದ್ರು ಮತ್ತು ಉಪೇಂದ್ರ ಕಾಂಬಿನೇಶನ್‌ನಲ್ಲಿ ತೆರೆಕಂಡಿರುವ ʼಕಬ್ಜʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಚಿತ್ರಮಂದಿರಗಳಲ್ಲಿ ತಕ್ಕಮಟ್ಟಿಗೆ ಪ್ರದರ್ಶನ ಕಾಣುತ್ತಿದೆ. ‘ಕಬ್ಜʼ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂಬ ಅಭಿಪ್ರಾಯಗಳ ನಡುವೆಯೇ ʼಮಲ್ಟಿಪ್ಲೆಕ್ಸ್‌ʼಗಳಲ್ಲಿ ಚಿತ್ರ ಪ್ರದರ್ಶನದ ವೇಳೆ ಬೇಕಂತಲೇ ‘ಸೌಂಡ್‌ ಎಫೆಕ್ಟ್‌ʼ ತಗ್ಗಿಸಲಾಗುತ್ತಿದೆ ಎಂಬ ಚರ್ಚೆ ಶುರುವಾಗಿದೆ. ಪ್ರೇಕ್ಷಕರ ಈ ಮಾತಿಗೆ ನಿರ್ದೇಶಕ ಆರ್‌ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ.

‘ಕಬ್ಜʼ ಸಿನಿಮಾ ಯಶಸ್ಸನ್ನು ಚಿತ್ರತಂಡದೊಂದಿಗೆ ಸಂಭ್ರಮಿಸಿರುವ ಆರ್‌ ಚಂದ್ರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಪತ್ರಕರ್ತರೊಬ್ಬರು, “ಮಲ್ಟಿಪ್ಲೆಕ್ಸ್‌ಗಳಲ್ಲಿ ʼಕಬ್ಜʼ ಸಿನಿಮಾ ಪ್ರದರ್ಶನದ ವೇಳೆ ‘ಸೌಂಡ್‌ʼ ತಗ್ಗಿಸಲಾಗುತ್ತಿದೆ. ಕನ್ನಡದ ಚಿತ್ರಗಳಿಗೇ ಈ ರೀತಿಯ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಏನು ಹೇಳುತ್ತೀರಿ” ಎಂದು ಪ್ರಶ್ನೆ ಹಾಕಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಚಂದ್ರು, “ಖಂಡಿತವಾಗಿಯೂ ನಮ್ಮಲ್ಲಿ ಈ ಸಮಸ್ಯೆ ಇದೆ. ನಾನು ಈ ವಿಚಾರವನ್ನು ಹೇಳಿದರೆ ಕೆಲವರಿಗೆ ನೋವಾಗುತ್ತದೆ. ಹೇಳದೆ ಹೋದರೆ ತುಂಬಾ ಜನರಿಗೆ ಮೋಸ ಮಾಡಿದಂತಾಗುತ್ತದೆ. ಆದರೂ ಈ ವಿಷಯವನ್ನು ಬಹಿರಂಗಪಡಿಸುತ್ತೇನೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ‘ಸೌಂಡ್‌ ಫ್ರಿಕ್ವೆನ್ಸಿʼಯನ್ನು ಹೆಚ್ಚು ಮಾಡಿದಾಗಲೆಲ್ಲ ಹೆಚ್ಚು ವಿದ್ಯುತ್‌ ಬಳಕೆಯಾಗುತ್ತದೆ. ಮಲ್ಟಿಪ್ಲೆಕ್ಸ್‌ನವರಿಗೆ ಚಿತ್ರಗಳು ಮತ್ತು ಚಿತ್ರತಂಡಗಳ ಬಗ್ಗೆ ಯಾವುದೇ ಕಾಳಜಿ ಇರುವುದಿಲ್ಲ. ಸಿನಿಮಾ ಪ್ರದರ್ಶನದ ವೇಳೆ ಎರಡು ಸ್ಪೀಕರ್‌ಗಳನ್ನು ಬಂದ್‌ ಮಾಡಿ, ಸೌಂಡ್‌ ತಗ್ಗಿಸಿದರೆ ವಿದ್ಯುತ್‌ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುವುದರಿಂದ ಒಂದು ಪ್ರದರ್ಶನಕ್ಕೆ ಮಲ್ಟಿಪ್ಲೆಕ್ಸ್‌ನವರಿಗೆ ಕನಿಷ್ಠ 10 ಸಾವಿರ ರೂಪಾಯಿ ಉಳಿತಾಯವಾಗುತ್ತದೆ. ನಾನು ಕೂಡ ಈ ಬಗ್ಗೆ ಕೇಳಿ ತಿಳಿದುಕೊಂಡಿದ್ದೇನೆ. ಈ ರೀತಿಯ ಅನುಭವಗಳು ನನಗೂ ಆಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಜರುಗಿಸಲು ಚಲನಚಿತ್ರ ವಾಣಿಜ್ಯ ಮಂಡಳಿಯ ಜೊತೆ ಚರ್ಚಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಪ್ರಕರಣಕ್ಕೆ ಲಂಡನ್‌ ನಂಟು

ಸಿನಿಮಾ ಪ್ರದರ್ಶನದ ವೇಳೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸೌಂಡ್‌ ತಗ್ಗಿಸಲಾಗುತ್ತದೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ಹಿಂದೆ ʼಏಕ್‌ ಲವ್‌ ಯಾʼ ಸಿನಿಮಾ ತೆರೆಕಂಡಾಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೇಕಂತಲೇ ಸೌಂಡ್‌ ತಗ್ಗಿಸುತ್ತಿದ್ದಾರೆ ಎಂದು ಸ್ವತಃ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...