ʼಉಡಾಳʼನ ಹಾಡಿಗೆ ಸೈ ಎಂದ ಮಂದಿ; ಸದ್ದು ಮಾಡ್ತಿದೆ ʼಹೊಡಿ ಶ್ಯಾವಿಗ್ಯಾಗ ಮಜಿಗಿʼ

Date:

ಕೆಲ ದಿನಗಳಿಂದ ಸೋಷಿಯಲ್‌ ಮೀಡಿಯಾ ತುಂಬೆಲ್ಲಾ ʼಉಡಾಳʼನ ಹಾಡಿನದ್ದೇ ಸದ್ದು. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ʼಉಡಾಳʼ ಚಿತ್ರದ ʼಹೊಡಿ ಶ್ಯಾವಿಗ್ಯಾಗ ಮಜಿಗಿʼ ಹಾಡು ಸದ್ಯ ಟ್ರೆಂಡಿಂಗ್‌ನಲ್ಲಿದ್ದು, ನೆಟ್ಟಿಗರ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚೆಗಷ್ಟೇ ಸರಿಗಮ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿರುವ ಉಡಾಳ ಚಿತ್ರದ ಈ ಮೊದಲ ಹಾಡು ನಾಲ್ಕೇ ದಿನಕ್ಕೆ 6 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ. ಯೋಗರಾಜ್ ಭಟ್ಟರು ಬರೆದಿರುವ ಸಾಹಿತ್ಯಕ್ಕೆ ಚೇತನ್ ಡ್ಯಾವಿ ಸಂಗೀತ ಸಂಯೋಜನೆ ನೀಡಿದ್ದಾರೆ. ಉತ್ತರ ಕನ್ನಡದ ಗೀತೆಗಳಿಂದಲೇ ಹೆಸರು ಮಾಡಿರುವ ಸದ್ಯ ʼಬಿಗ್‌ ಬಾಸ್‌ʼನಲ್ಲಿರುವ ಗಾಯಕ ಮಾಳು ನಿಪ್ನಾಳ್ ಮತ್ತು ಸೃಷ್ಟಿ ಶಾಮನೂರು ಅವರ ಧ್ವನಿಯಲ್ಲಿ ಹಾಡು ಮತ್ತಷ್ಟು ಕ್ಯಾಚಿಯಾಗಿ ಮೂಡಿಬಂದಿದೆ.

ʼಉಡಾಳʼ ಚಿತ್ರದ ನಿರ್ದೇಶನ ಅಮೋಲ್ ಪಾಟೀಲ್ ಅವರದ್ದು. ʼಪದವಿಪೂರ್ವʼ ಚಿತ್ರದಿಂದ ಗಮನಸೆಳೆದ ಪೃಥ್ವಿ ಶಾಮನೂರು ಈ ಸಿನಿಮಾದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟಿಯಾಗಿ ರಿತಿಕಾ ಶ್ರೀನಿವಾಸ್‌ ಬಣ್ಣ ಹಚ್ಚಿದ್ದಾರೆ. ಈ ಹಾಡು ಯೂಟ್ಯೂಬ್‌ನಲ್ಲಿ ಮಾತ್ರವಲ್ಲದೇ ಜಿಯೋ ಸಾವನ್ ಚಾನಲ್‌ನಲ್ಲಿ ಈಗ ಭಾರತದಲ್ಲಿ ಎರಡನೇ ಸ್ಥಾನಕ್ಕೇರಿದೆ. ಹಾಡಿನ ವಿಶಿಷ್ಟ ರಾಗ ಮತ್ತು ನೃತ್ಯ ಶೈಲಿಯು ವಿಶಿಷ್ಟವಾಗಿದ್ದು, ಇನ್ಸ್ಟಾಗ್ರಾಂ ನಲ್ಲಿ ರೀಲ್ಸ್‌ ಮೇಕರ್ಸ್‌ಗಳ ಮನಗೆದ್ದಿದೆ. ʼಉಡಾಳʼ ಚಿತ್ರದ ಮೊದಲ ಹಾಡು ಮತ್ತು ಟೀಸರ್ ಈಗಾಗಲೇ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದ್ದು, ಚಿತ್ರದ ಎರಡನೇ ಹಾಡು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ನವೆಂಬರ್ 14 ರಂದು ಚಿತ್ರ ತೆರೆಗೆ ಬರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...