ಗಮನ ಸೆಳೆಯುತ್ತಿದೆ ʼಹೊಯ್ಸಳʼ ಚಿತ್ರದ ಜನಪದ ಹಾಡು

Date:

  • ಒಟ್ಟು ಬಾಳೇವು ಬ್ಯಾರೇನ ಐತಿ ಎಂದ ಯೋಗರಾಜ್‌ ಭಟ್‌
  • ಜನಪದ ಹಾಡಿಗೆ ಧ್ವನಿಯಾದ ಅಜನೀಶ್‌ ಲೋಕನಾಥ್‌

ಕನ್ನಡದ ಸ್ಟಾರ್‌ ನಟ ಡಾಲಿ ಧನಂಜಯ್‌ ಅಭಿನಯದ ʼಹೊಯ್ಸಳʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ “ಬ್ಯಾರೇನ ಐತಿ..” ಲಿರಿಕಲ್‌ ಹಾಡು ಸೋಮವಾರ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

ಚಿತ್ರತಂಡ ಹೇಳಿಕೊಂಡಿರುವಂತೆ ಇಡೀ ‘ಹೊಯ್ಸಳ’ ಸಿನಿಮಾದ ಕಥೆ ಸಾಗುವುದು ಗಡಿ ಜಿಲ್ಲೆ ಬೆಳಗಾವಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ. ಉತ್ತರ ಕರ್ನಾಟಕ ಭಾಗದ ಕಥೆಯಾದ ಕಾರಣಕ್ಕೆ ಚಿತ್ರದಲ್ಲಿ ಸ್ಥಳೀಯ ಸೊಗಡಿನ ಜನಪದ ಹಾಡನ್ನು ಬಳಸಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ಸುರೇಶ್‌ ಇಂಚಗೇರಿ ಅವರ “ಅದು ಬ್ಯಾರೇನ ಐತಿ…” ಜನಪದ ಹಾಡನ್ನೇ ಹಿರಿಯ ನಿರ್ದೇಶಕ, ಚಿತ್ರ ಸಾಹಿತಿ ಯೋಗರಾಜ್‌ ಭಟ್‌ ಸಿನಿಮಾ ಶೈಲಿಗೆ ಹೊಂದುವಂತೆ ಮರು ರಚನೆ ಮಾಡಿದ್ದಾರೆ.

“ಹುಟ್ಟಿ ಸಾಯೋದಲ್ಲ ಒಟ್ಟು ಬಾಳೇವು ಬ್ಯಾರೇನ ಐತಿ… ನೀವು ಕಂಡಂಗಲ್ಲ ನಮ್ಮ ಬಾಳೇವು ಬ್ಯಾರೇನ ಐತಿ…” ಎಂಬ ಸಾಲುಗಳು ಕೇಳುಗರಿಗೆ ಮುದ ನೀಡುವಂತಿವೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ತಾವೇ ಸಂಗೀತ ನೀಡಿ, ಧ್ವನಿಯಾಗಿರುವ ಈ ಜನಪದ ಹಾಡಿನ ಲಿರಿಕಲ್‌ ವಿಡಿಯೋ ಸದ್ಯ ಯಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯ್‌ ಎನ್‌ ನಿರ್ದೇಶನದಲ್ಲಿ ಮೂಡಿಬಂದಿರುವ ʼಹೊಯ್ಸಳʼ ಚಿತ್ರದಲ್ಲಿ ಧನಂಜಯ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಅಮೃತಾ ಅಯ್ಯಂಗಾರ್‌ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನವೀನ್‌ ಶಂಕರ್‌, ಅವಿನಾಶ್‌ ಬಿಎಸ್‌, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌, ಮಯೂರಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ʼಕೆ ಆರ್ ಜಿ ಸ್ಟುಡಿಯೋಸ್ʼನ ಕಾರ್ತಿಕ್‌ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಚಿತ್ರ ಮಾರ್ಚ್‌ 30ರಂದು ತೆರೆ ಕಾಣಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...