ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ

Date:

ಈ ಬಾರಿಯ ಚಿತ್ರೋತ್ಸವದಲ್ಲಿ ಕನ್ನಡದ ಚಿತ್ರಗಳಿಗೆ ಹೆಚ್ಚು ಆದ್ಯತೆ

ಪ್ರದರ್ಶನ ಕಾಣಲಿವೆ 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿಗೆ ಗುರುವಾರ (ಮಾರ್ಚ್‌ 23) ಸಂಜೆ ಅದ್ದೂರಿ ಚಾಲನೆ ದೊರೆತಿದೆ. ವಿಧಾನಸೌಧದ ಆವರಣದಲ್ಲಿ ಆಯೋಜನೆಗೊಂಡಿದ್ದ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲುಗಿನ ಖ್ಯಾತ ಚಿತ್ರ ಸಾಹಿತಿ, ರಾಜ್ಯಸಭಾ ಸದಸ್ಯ ವಿಜಯ್‌ ಪ್ರಸಾದ್‌ ಅವರು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದು, ಬಾಲಿವುಡ್‌ನ ಹಿರಿಯ ನಿರ್ದೇಶಕ ಗೋವಿಂದ್‌ ನಿಹಲಾನಿ, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮ ಹರೀಶ್‌, ಅಭಿಷೇಕ್‌ ಅಂಬರೀಶ್‌, ಸಪ್ತಮಿ ಗೌಡ, ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್‌ ಕಶ್ಯಪ್‌ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಮಾ. 23ರಿಂದ 30ರ ವರೆಗೆ 7 ದಿನಗಳ ಕಾಲ ಚಿತ್ರೋತ್ಸವ ನಡೆಯಲಿದ್ದು, ಬೆಂಗಳೂರಿನ ಒರಾಯನ್‌ ಮಾಲ್‌, ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘ ಮತ್ತು ಬನಶಂಕರಿ ಬಡಾವಣೆಯ ಬಳಿ ಇರುವ ʼಸುಚಿತ್ರಾ ಫಿಲ್ಮ್‌ ಸೊಸೈಟಿʼಯಲ್ಲಿ 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ.

ಚಿತ್ರೋತ್ಸವದ 14ನೇ ಆವೃತ್ತಿಯ ಉದ್ಘಾಟನಾ ಚಿತ್ರವಾಗಿ ರಿಷಬ್‌ ಶೆಟ್ಟಿ ಮುಖ್ಯಭೂಮಿಕೆಯ ʼಕಾಂತಾರʼ ಸಿನಿಮಾ ಕಲಾವಿದರ ಸಂಘದ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ. ಇತ್ತೀಚೆಗೆ ತೆರೆಕಂಡ ಮಂಸೋರೆ ನಿರ್ದೇಶನದ ‘19.20.21’, ಸಾಯಿ ಪಲ್ಲವಿ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಗಾರ್ಗಿʼ, ʼಗಂಧದಗುಡಿʼ, ʼಗುರು ಶಿಶ್ಯರುʼ, ʼಹೆಡ್‌ ಬುಷ್‌ʼ, ʼಆರ್ಕೆಸ್ಟ್ರಾ ಮೈಸೂರುʼ, ʼವೇದʼ, ʼಗಾಳಿಪಟ-2ʼ, ʼವಿಕ್ರಾಂತ್‌ ರೋಣʼ, ʼಹಕ್ಕಿಗಳ ಕನಸುʼ, ʼಕಾಮಧೇನುʼ, ʼದಿ ಫಿಲಂ ಮೇಕರ್‌ʼ, ʼಪದವಿ ಪೂರ್ವʼ, ʼಮಾವು ಬೇವುʼ, ʼನಲ್ಕೆʼ, ʼಮೇಡ್‌ ಇನ್‌ ಬೆಂಗಳೂರುʼ, ʼಫೋಟೋʼ, ʼನಾನು ಕುಸುಮʼ, ʼಕೋಳಿ ಎಸ್ರುʼ, ʼಕೌಡಿಕಳಿʼ, ʼಬೈ ಟು ಲವ್‌ʼ ಮಂತಾದ ಚಿತ್ರಗಳು ಈ ಬಾರಿಯ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿವೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...