ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಪ್ರಕರಣಕ್ಕೆ ಲಂಡನ್‌ ನಂಟು

Date:

  • ಜೀವ ಬೆದರಿಕೆ ಸಂದೇಶದ ಬೆನ್ನಲ್ಲೇ ಸಲ್ಮಾನ್‌ ಭದ್ರತೆ ಹೆಚ್ಚಳ
  • ಲಂಡನ್‌ ಮೂಲದ ವ್ಯಕ್ತಿಯ ಇ-ಮೇಲ್‌ ಬಳಸಿ ಬೆದರಿಕೆ

ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್‌ ಖಾನ್‌ ಅವರಿಗೆ ಇತ್ತೀಚೆಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ ಬೆದರಿಕೆ ಸಂದೇಶಕ್ಕೆ ಲಂಡನ್‌ ಮೂಲದ ವ್ಯಕ್ತಿಯ ನಂಟಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಸಲ್ಮಾನ್‌ ಖಾನ್‌ ಅವರ ಆಪ್ತ ಸಹಾಯಕರಿಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಿದ್ದ ಅಪರಿಚಿತರು, ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಸಂದೇಶದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಹೆಸರು ಕೂಡ ಉಲ್ಲೇಖವಾಗಿತ್ತು.

“ಗೋಲ್ಡಿ ಬ್ರಾರ್‌ ನಿಮ್ಮ ಮಾಲೀಕನ (ಸಲ್ಮಾನ್‌ ಖಾನ್‌) ಜೊತೆಗೆ ಮಾತನಾಡಲು ಇಚ್ಛಿಸಿದ್ದಾನೆ. ನಿಮ್ಮ ಮಾಲೀಕ ಇನ್ನೂ ಲಾರೇನ್ಸ್‌ ಬಿಷ್ಣೋಯಿಯ ಸಂದರ್ಶನದ ವಿಡಿಯೋ ನೋಡಿಲ್ಲವಾದರೆ, ಮೊದಲು ಆ ವಿಡಿಯೋವನ್ನು ನೋಡಲು ಹೇಳಿ. ಆತ ಈ ವಿವಾದವನ್ನು ಇಲ್ಲಿಗೆ ಅಂತ್ಯಗೊಳಿಸಲು ಇಚ್ಛಿಸಿದ್ದರೆ ಗೋಲ್ಡಿ ಬ್ರಾರ್‌ ಜೊತೆಗೆ ನೇರಾನೇರ ಮಾತುಕತೆಗೆ ಬರುತ್ತಾನೆಯೇ ಕೇಳಿ. ಈ ಬಾರಿ ಸುಮ್ಮನೆ ಸಂದೇಶ ತಲುಪಿಸುತ್ತಿದ್ದೇವೆ. ಮುಂದಿನ ಬಾರಿ ಹೀಗಾಗುವುದಿಲ್ಲ, ನಮ್ಮ ನಡೆಯನ್ನು ಕಂಡು ನೀವೇ ಆಘಾತಕ್ಕೊಳಗಾಗುತ್ತೀರಿ” ಎಂದು ಬೆದರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬೆನ್ನಲ್ಲೇ ಸಲ್ಮಾನ್‌ ಖಾನ್‌ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಹತ್ಯೆಗೆ ಯತ್ನಿಸಿದ್ದ, ಅನ್ಯ ಪ್ರಕರಣದಲ್ಲಿ ಈಗಾಗಲೇ ಸೆರೆವಾರ ಅನುಭವಿಸುತ್ತಿರುವ ಲಾರೇನ್ಸ್‌ ಬಿಷ್ಣೋಯಿ, ಗೋಲ್ಡಿ ಬ್ರಾರ್‌ ಮತ್ತು ರೋಹಿತ್‌ ಗರ್ಗಿ ಅವರ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ತನಿಖೆಯ ವೇಳೆ ಸಲ್ಮಾನ್‌ ಖಾನ್‌ ಆಪ್ತ ಸಹಾಯಕರಿಗೆ ಬಂದಿರುವ ಇ-ಮೇಲ್‌ ವಿಳಾಸದ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಇ-ಮೇಲ್‌ ಖಾತೆಗೆ ಬಳಸಲಾಗಿರುವ ಮೊಬೈಲ್‌ ಸಂಖ್ಯೆ ಲಭ್ಯವಾಗಿದ್ದು, ಆ ಮೊಬೈಲ್‌ ನಂಬರ್‌ ಬಳಸುತ್ತಿರುವ ವ್ಯಕ್ತಿ ಲಂಡನ್‌ ಮೂಲದವನು. ಆತನನ್ನು ಸಂಪರ್ಕಿಸುವ ಪ್ರಯತ್ನಗಳು ಕೂಡ ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್‌ ನಿವಾಸದ ಬಳಿ ನಟನ ತಂದೆ ಸಲೀಂ ಖಾನ್‌ ವಾಯು ವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರ ಕೈಗೆ ಅನಾಮದೇಯ ಜೀವ ಬೆದರಿಕೆಯ ಪತ್ರ ಸಿಕ್ಕಿತ್ತು. ಸಲೀಂ ಖಾನ್‌ ಮತ್ತು ಸಲ್ಮಾನ್‌ ಖಾನ್‌ ಇಬ್ಬರನ್ನು ಹತ್ಯೆ ಮಾಡುವುದಾಗಿ ಪತ್ರದಲ್ಲಿ ಬರೆಯಲಾಗಿತ್ತು. ಘಟನೆಯ ಬೆನ್ನಲ್ಲೇ ಮುಂಬೈ ಪೊಲೀಸರು ಸಲ್ಮಾನ್‌ ಖಾನ್‌ ಅವರಿಗೆ ʼವೈ+ʼ ಶ್ರೇಣಿಯ ಬಿಗಿ ಭದ್ರತೆ ಒದಗಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...