2019ನೇ ಸಾಲಿನ ರಾಜ್ಯ ಪ್ರಶಸ್ತಿ | ಕಿಚ್ಚ ಸುದೀಪ್‌ & ಅನುಪಮಾ ಗೌಡಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

Date:

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಬುಧವಾರ (ಜ.22ರಂದು) ಘೋಷಣೆಯಾಗಿದೆ. ಅತ್ಯುತ್ತಮ ನಟಿ ಪ್ರಶಸ್ತಿಗೆ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಮತ್ತು ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಪಾತ್ರರಾಗಿದ್ದಾರೆ.

‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್‌ ಅವರಿಗೆ ಅತ್ಯುತ್ತಮ ನಟ ಮತ್ತು ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಇನ್ನೂ ಐದು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಣೆ ಬಾಕಿಯಿದೆ.

ಪೂರ್ಣ ಪಟ್ಟಿ ಇಲ್ಲಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್)

ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)

ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ (ನಿರ್ದೇಶಕ -ಪಿ. ಶೇಷಾದ್ರಿ)

ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೇಲ್’ (ನಿರ್ದೇಶಕ – ಡಾರ್ಲಿಂಗ್ ಕೃಷ್ಣ)

ತೃತೀಯ ಅತ್ಯುತ್ತಮ ಚಿತ್ರ : ‘ಅರ್ಧ್ಯಂ’ (ನಿರ್ದೇಶಕ – ವೈ ಶ್ರೀನಿವಾಸ್)

ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಪೋಷಕ ನಟಿ: ಅನುಷಾ ಕೃಷ್ಣ (ಬ್ರಾಹ್ಮಂ)

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ – ಮಂಜುನಾಥ್ ಎಸ್)

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ V/s ಇಂಗ್ಲೆಂಡ್ (ನಿರ್ದೇಶಕ – ನಾಗತಿಹಳ್ಳಿ ಚಂದ್ರಶೇಖರ್)

ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ – ಜಿ. ಅರುಣ್ ಕುಮಾರ್)

ಚೊಚ್ಚಲ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ (ನಿರ್ದೇಶಕ – ನಾಗೇಶ್ ಎನ್.)

ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತ್ರಿಬಲ್ ತಲಾಖ್ (ಬ್ಯಾರಿ ಭಾಷೆ) (ನಿರ್ದೇಶಕ – ಯೂಕೂಬ್ ಖಾದರ್ ಗುಲ್ವಾಡಿ)

ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ

ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್)

ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)

ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್‌

ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)

ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)

ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)

ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೇಲ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಂಗಮ ಶೆಟ್ಟಿ ( ರಾಗಭೈರವಿ ಚಿತ್ರ)

ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ

ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)

ಒಟ್ಟು 180 ಸಿನಿಮಾಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವು. ಪ್ರತಿ ವರ್ಷ ರಾಜ್ಯ ಸರ್ಕಾರ ಪ್ರಶಸ್ತಿ ನೀಡುತ್ತಾ ಬರುತ್ತಿತ್ತು. ಆದರೆ ಕೋವಿಡ್ ಬಳಿಕ ಇದಕ್ಕೆ ಹಿನ್ನೆಡೆ ಆಗಿತ್ತು. ಇದೀಗ 6 ವರ್ಷ ಬಳಿಕ ಪ್ರಶಸ್ತಿ ಘೋಷಣೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...