ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

Date:

ಬಹುನಿರೀಕ್ಷಿತ ಮಲಯಾಳಂ ಚಿತ್ರ ‘ಆಡು ಜೀವಿತಂ’ ಅಥವಾ ‘ದಿ ಗೋಟ್‌ಲೈಫ್’ ಮಾರ್ಚ್ 28ರಂದು ಬಿಡುಗಡೆಯಾಗಿದ್ದು, ಸಿನಿಪ್ರಿಯರ ಮನಸ್ಸು ಗೆಲ್ಲುವ ಮೂಲಕ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ಆಡುಜೀವಿತಂ’ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ತೆರೆ ಕಂಡಿದ್ದು, ನೈಜ ಕಥೆಯಾಧರಿಸಿದ ಈ ಸಿನಿಮಾದಲ್ಲಿ ನಟ ಪೃಥ್ವಿರಾಜ್ ಸುಕುಮಾರನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಬರೋಬ್ಬರಿ 16 ವರ್ಷಗಳ ಹಿಂದೆ ಪ್ರಾರಂಭವಾದ ಸಿನಿಮಾ ಇದು. ಈ ಸಿನಿಮಾಕ್ಕಾಗಿ ಪೃಥ್ವಿರಾಜ್ ಸುಕುಮಾರನ್, ನಿರ್ದೇಶಕ ಬ್ಲೆಸ್ಲಿ ಹಾಗೂ ಇಡೀ ಚಿತ್ರತಂಡ ಸಾಕಷ್ಟು ಕಷ್ಟಪಟ್ಟಿದೆ. ಸಿನಿಮಾ ಬಿಡುಗಡೆಗೆ ಮುನ್ನ ಸೆಲೆಬ್ರಿಟಿಗಳಿಗಾಗಿ ಆಯೋಜಿಸಲಾಗಿದ್ದ ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡಿದ ದಿಗ್ಗಜರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸೇರಿದಂತೆ ಇನ್ನೂ ಕೆಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿದ್ದ ‘ಆಡುಜೀವಿತಂ’ ಸಿನಿಮಾ ಮೊದಲ ದಿನ ಏಳು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಲಯಾಳಂ ಸಿನಿಮಾವೊಂದಕ್ಕೆ ಇದು ಉತ್ತಮ ಆರಂಭ ಎಂದು ಸಿನಿಮಾ ವಿಮರ್ಶಕರು ಅಭಿಪ್ರಾಯಿಸಿದ್ದಾರೆ.

‘ಆಡುಜೀವಿತಂ’ ಸಿನಿಮಾ ಕರ್ನಾಟಕ ಹಾಗೂ ತೆಲುಗು ರಾಜ್ಯಗಳಿಂದ ತಲಾ 40 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 55 ಲಕ್ಷ ಗಳಿಸಿದ್ದರೆ ಹಿಂದಿಯಿಂದ 10 ಲಕ್ಷ ರೂಪಾಯಿ ಗಳಿಸಿದೆ. ಸಿನಿಮಾ ಗಲ್ಫ್ ರಾಷ್ಟ್ರಗಳು ಸೇರಿದಂತೆ ಇನ್ನೂ ಕೆಲವು ಕಡೆ ಬಿಡುಗಡೆಯಾಗಿದ್ದು, ಅಲ್ಲಿಯೂ ಸಹ ಉತ್ತಮ ಗಳಿಕೆ ಮಾಡಿದೆ. ವಿಶ್ವದೆಲ್ಲೆಡೆಯ ಲೆಕ್ಕಾಚಾರದ ಪ್ರಕಾರ ಸಿನಿಮಾವು ₹16.7 ಕೋಟಿ ಕಲೆಕ್ಷನ್ ಮಾಡಿದೆ.

2008ರಲ್ಲಿಯೇ ಚಿತ್ರ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾದರೂ, ಮಾರ್ಚ್ 2018ರಿಂದ ಜುಲೈ 2022ರವರೆಗೆ ಚಿತ್ರೀಕರಣವನ್ನು ವಿವಿಧ ಹಂತಗಳಲ್ಲಿ ಪ್ರಾರಂಭಿಸಿ ಮುಗಿಸಲಾಗಿದೆ. ವಾಡಿ ರಮ್, ಜೋರ್ಡನ್ ಮತ್ತು ಅಲ್ಜೀರಿಯಾದ ಸಹಾರಾ ಮರುಭೂಮಿಗಳು ಹಾಗೂ ಹೆಚ್ಚುವರಿ ದೃಶ್ಯಗಳನ್ನು ಕೇರಳದಲ್ಲಿಯೂ ಚಿತ್ರೀಕರಿಸಲಾಗಿದೆ. ಒಟ್ಟಾರೆ ಇಡೀ ಚಿತ್ರ ತಂಡ 16 ವರ್ಷಗಳ ಕಾಲ ಚಿತ್ರಕ್ಕಾಗಿ ಶ್ರಮಿಸಿರುವುದು ವಿಶೇಷ.

‘ಆಡುಜೀವಿತಂ’ಗಾಗಿ ಪೃಥ್ವಿರಾಜ್ ಸುಕುಮಾರನ್ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಹೀಗಾಗಿಯೇ ಚಿತ್ರ ಪ್ರೇಕ್ಷಕರ ಮನಸ್ಸು ಗೆದ್ದಿದೆ. ಸ್ವತಃ ಚಿತ್ರಕ್ಕೆ ಕಥೆ ಬರೆದಿರುವ ರಾಷ್ಟ್ರೀಯ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಜೊತೆಗೆ ಸಹ-ನಿರ್ಮಾಣವನ್ನೂ ಮಾಡಿದ್ದಾರೆ. ಸಹ-ನಿರ್ಮಾಣ ಕೆಲಸ ಭಾರತ ಮತ್ತು ಅಮೆರಿಕದ ಕಂಪನಿಗಳನ್ನು ಒಳಗೊಂಡಿದೆ.

ಮಲಯಾಳಂ ಸಾಹಿತ್ಯ ಪ್ರಪಂಚದಲ್ಲಿ ಅತ್ಯಂತ ಜನಪ್ರಿಯವಾದ ಬೆಸ್ಟ್ ಸೆಲ್ಲರ್‌ಗಳಲ್ಲಿ ಒಂದಾದ, ಹೆಸರಾಂತ ಬರಹಗಾರ ಬೆನ್ಯಾಮಿನ್ ಬರೆದಿರುವ ‘ಆಡುಜೀವಿತಂ’ ಕಾದಂಬರಿ ಆಧಾರಿತ ಈ ಚಿತ್ರ, 90ರ ದಶಕದ ಆರಂಭದಲ್ಲಿ ಕೇರಳದಿಂದ ವಿದೇಶದಲ್ಲಿ ಅದೃಷ್ಟ ಅರಸುತ್ತಾ ವಲಸೆ ಹೋದ ಯುವಕ ನಜೀಬ್‌ ಎಂಬಾತನ ಜೀವನಕಥೆ ಹೇಳುತ್ತದೆ.

ಮರುಭೂಮಿಯಲ್ಲಿ ಮೇಕೆ ಮೇಯಿಸುವುದಕ್ಕೆ ಬಲವಂತದಿಂದ ಜೀತದಾಳಾಗಿ ಒಳಗಾಗುವ ಮಲಯಾಳಿ ವಲಸೆ ಕಾರ್ಮಿಕ ನಜೀಬ್ ಪಾತ್ರವನ್ನು ಪೃಥ್ವಿರಾಜ್ ಮಾಡಿದ್ದಾರೆ. ನಜೀಬ್​ ಅನುಭವಿಸುವ ಸಂಕಷ್ಟ, ನೋವು, ಹತಾಶೆ ಮತ್ತು ಬಂಧನದಿಂದ ತಪ್ಪಿಸಿಕೊಳ್ಳಲು ಮಾಡುವ ಹೋರಾಟದ ಕಥೆ ಕಣ್ಣೀಗೆ ಕಟ್ಟುವಂತೆ ಬ್ಲೆಸ್ಸಿ ಹೆಣೆದಿದ್ದಾರೆ. ಕಮಲ್ ಹಾಸನ್, ಮಣಿರತ್ನಂ ಸೇರಿದಂತೆ ಚಿತ್ರಕ್ಕೆ ಅನೇಕ ಸ್ಟಾರ್ ನಿರ್ದೆಶಕರು,  ನಟ-ನಟಿರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಸೈನು (ನಜೀಬ್ ಪತ್ನಿ) ಆಗಿ ಅಮಲಾ ಪೌಲ್, ಇಬ್ರಾಹಿಂ ಖಾದರಿಯಾಗಿ ಹಾಲಿವುಡ್​ ನಟ ಜಿಮ್ಮಿ ಜೀನ್ ಲೂಯಿಸ್, ಉಮ್ಮಾ (ನಜೀಬ್ ತಾಯಿ) ಆಗಿ ಶೋಭಾ ಮೋಹನ್, ಹಕೀಮ್ ಆಗಿ ಕೆ.ಆರ್.ಗೋಕುಲ್, ಖಫೀಲ್ ಆಗಿ ತಾಲಿಬ್ ಅಲ್ ಬಲೂಶಿ, ರಿಕ್ ಅಬಿ ನಟಿಸಿದ್ದಾರೆ. ಆಸ್ಕರ್​ ವಿಜೇತ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ ಮಾಡಿರುವುದು ಮತ್ತೊಂದು ವಿಶೇಷ. ರಸೂಲ್ ಪೂಕುಟ್ಟಿ ಮತ್ತು ಸುನಿಲ್‌ ಕೆ.ಎಸ್‌. ಚಿತ್ರದ ಅದ್ಭುತ ದೃಶ್ಯಗಳನ್ನು ಸೆರೆ ಹಿಡಿದಿದ್ದು, ಶ್ರೀಕರ್ ಪ್ರಸಾದ್ ಸಂಕಲನ ಮಾಡಿದ್ದಾರೆ. ಈ ಸಿನಿಮಾದ ನಟನೆಗಾಗಿ ಪೃಥ್ವಿರಾಜ್ ಅವರಿಗೆ ರಾಷ್ಟ್ರಪ್ರಶಸ್ತಿ ಸಿಗಲೆಂದು ಸಿನಿಮಾ ಪ್ರಿಯರು ಹಾರೈಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...