ನಾನು , ಶಾರೂಖ್, ಸಲ್ಮಾನ್ ಮಾತ್ರವೇ ‘ಅಂತಿಮ ಸ್ಟಾರ್‌ಗಳಲ್ಲ’; ಅಮಿರ್ ಖಾನ್

Date:

ಹಿಂದಿ ಚಿತ್ರರಂಗದಲ್ಲಿ ಖಾರೂಖ್ ಖಾನ್, ಸಲ್ಮಾನ್ ಖಾನ್ ಹಾಗೂ ಅಮಿರ್ ಖಾನ್ ಅವರೇ ಪ್ರಸ್ತುತ ಸಂದರ್ಭದಲ್ಲಿ ಸ್ಟಾರ್‌ ನಟರೆಂದು ಕರೆಯಲಾಗುತ್ತಿದೆ. ಮಾತ್ರವಲ್ಲದೆ, ಈ ಮೂವರೇ ‘ಅಂತಿಮ ಸ್ಟಾರ್‌‘ಗಳೂ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ‘ಇಂತಹ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರತಿ ಪೀಳಿಗೆಯೂ ತನ್ನದೇ ಆದ ಸ್ಟಾರ್‌ಗಳನ್ನು ಹೊಂದಿರುತ್ತದೆ. ಕಾಲಾನಂತರದಲ್ಲಿ ಅವರೂ ಮರೆತುಹೋಗುತ್ತಾರೆ’ ಎಂದು ಅಮಿರ್ ಖಾನ್ ಹೇಳಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಮಿರ್ ಖಾನ್, “90ರ ದಶಕದಲ್ಲಿ ಮುನ್ನೆಲೆಗೆ ಬಂದ ಕಲಾವಿದರು ‘ಸ್ಟಾರ್‌’ ಕಿರೀಟಗಳನ್ನು ಪಡೆದಿದ್ದಾರೆ. ಆದರೆ, ಆ ನಟರಂತೆ ಈಗಿನ ಪೀಳಿಗೆಯ ಕಲಾವಿದರು ‘ಸ್ಟಾರ್‌’ಗಳೆಂದು ಗುರುತಿಸಿಕೊಳ್ಳುತ್ತಿಲ್ಲ ಎನ್ನಲಾಗದು. ಪ್ರತಿ ಪೀಳಿಗೆಯು ಹಿಂದಿನ ಪೀಳಿಗೆಗಿಂತ ಉತ್ತಮವಾಗಿ ಮುಂದೆ ಬರುತ್ತದೆ. ಈ ಪೀಳಿಗೆಯಲ್ಲೂ ದೊಡ್ಡ ತಾರೆಗಳು ಹುಟ್ಟಿಕೊಳ್ಳುತ್ತಾರೆ. ‘ನಾವು ಸ್ಟಾರ್‌ಗಳಲ್ಲಿ ಕೊನೆಯವರು’ ಎಂಬುದಾಗಿ ನಾನು ಭಾವಿಸುವುದಿಲ್ಲ. ನಮ್ಮ ನಂತರವೂ ಸ್ಟಾರ್‌ಗಳು ಬರುತ್ತಾರೆ” ಎಂದು ಹೇಳಿದ್ದಾರೆ.

“ಬಹುಶಃ ಇನ್ನು ಮುಂದೆ ನಾವೂ ಬ್ರಹ್ಮ, ವಿಷ್ಣು, ಮಹೇಶ್ವರರಾಗಿ (ಅಮಿರ್, ಶಾರೂಖ್, ಸಲ್ಮಾನ್) ಲೆಕ್ಕದಲ್ಲಿರುವುದಿಲ್ಲ. ಜನರು ನಮ್ಮನ್ನು ಮರೆತುಬಿಡುತ್ತಾರೆ. ಸಮಯ ಮುಂದೆ ಸಾಗುತ್ತಲೇ ಇರುತ್ತದೆ. ನೀವು ಎಲ್ಲವನ್ನೂ ಮರೆತುಬಿಡುತ್ತೀರಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದು ಚಿತ್ರದಲ್ಲಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳುವ ಬಗ್ಗೆ ಚರ್ಚಿಸಿದ್ದೇವೆ. ಒಳ್ಳೆಯ ಕತೆಗಾಗಿ ಕಾಯುತ್ತಿದ್ದೇವೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ಅಮೀರ್ ಖಾನ್ ಅವರು ‘ಸೀತಾರೆ ಜಮೀನ್ ಪರ್’ ಸಿನಿಮಾ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸಲ್ಮಾನ್ ಅವರ ‘ಸಿಕಂದರ್’ ಚಿತ್ರ ಮಾರ್ಚ್ 30ರಂದು ಬಿಡುಗಡೆಯಾಗಲಿದೆ. ಶಾರುಖ್ ಖಾನ್ ಅವರು ತಮ್ಮ ಮಗಳು ಸುಹಾನಾ ಖಾನ್ ಜೊತೆ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...