ಅಭಿ-ಅವಿ ಮದುವೆ | ನೂತನ ವಧು-ವರರಿಗೆ ಆಶೀರ್ವದಿಸಿದ ಗಣ್ಯರು

Date:

  • ಕಳೆದ ವರ್ಷ ಡಿ.11ರಂದು ನಿಶ್ವಿತಾರ್ಥ ಮಾಡಿಕೊಂಡಿದ್ದ ಅವಿ-ಅಭಿ
  • ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ ಅಂಬರೀಶ ಸೋಮವಾರ ಮಾಡೆಲ್ ಅವಿವಾ ಬಿದ್ದಪ್ಪ ಅವರನ್ನು ವರಿಸಿದ್ದಾರೆ.

ಅವಿವಾ ಬಿದ್ದಪ್ಪ ಅವರು ಖ್ಯಾತ ಫ್ಯಾಷನ್ ಗುರು ಪ್ರಸಾದ್ ಬಿದ್ದಪ್ಪ ಹಾಗೂ ಜುಡಿತಾ ಬಿದ್ದಪ್ಪ ಪುತ್ರಿ. ಜೂನ್ 5ರಂದು ಒಕ್ಕಲಿಗ ಸಂಪ್ರದಾಯದ ಪ್ರಕಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹ ನೆರವೇರಿದೆ.

ಜೂನ್ 5ರ ಬೆಳಗ್ಗೆ 9:30-10:30ರ ನಡುವೆ ಕರ್ಕಾಟಕ ಲಗ್ನ ಮುಹೂರ್ತದಲ್ಲಿ ವಧು-ವರರು ಹಸೆಮಣೆ ಏರಿದ್ದಾರೆ. ಅಭಿಷೇಕ್ ಅವರು ಅವಿವಾಗೆ ಮಾಂಗಲ್ಯ ಧಾರಣೆ ಮಾಡಿದರು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ನೆರವೇರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದುವೆಗೆ ಗಣ್ಯರ ಆಗಮನ

ಎರಡು ಕುಟುಂಬಗಳು ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದರಿಂದ ಸ್ಯಾಂಡಲ್‌ವುಡ್ ಮಾತ್ರವಲ್ಲದೇ, ಟಾಲಿವುಡ್ ಕಾಲಿವುಡ್ ಸೇರಿದಂತೆ ಇನ್ನಿತರ ಸಿನಿಮಾ ಇಂಡಸ್ಟ್ರಿಯಿಂದಲೂ ಅನೇಕ ಸೆಲೆಬ್ರಟಿಗಳು ವಿವಾಹ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ವಧು-ವರರಿಗೆ ಆಶೀರ್ವದಿಸುತ್ತಿದ್ದಾರೆ.

ಜತೆಗೆ, ಅಂಬರೀಶ ರಾಜಕೀಯ ಹಿನ್ನೆಲೆಯುಳ್ಳವರು ಅವರ ಪತ್ನಿ ಸುಮಲತಾ ಅವರು ಕೂಡಾ ಪ್ರಸ್ತುತ ಸಂಸದೆಯಾಗಿರುವ ಕಾರಣ ಮೋದಿ ಸೇರಿದಂತೆ ಅನೇಕ ರಾಜಕಾರಣಿಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದರು. ಅದರಂತೆ, ರಾಜಕೀಯ ನಾಯಕರು, ಗಣ್ಯರು ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್, ಸುಹಾಸಿನಿ ಮಣಿರತ್ನಂ, ಅನಿಲ್ ಕುಂಬ್ಳೆ, ನರೇಶ್-ಪವಿತ್ರಾ ಲೋಕೇಶ್, ರಾಕಿಂಗ್ ಸ್ಟಾರ್ ಯಶ್ ದಂಪತಿ, ಮೋಹನ್ ಬಾಬು, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಪೀಪಲ್ಸ್‌ ಮ್ಯಾನ್‌’ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ನಿಧನ

ಜೂನ್ 7 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿ ಹಾಲ್‌ನಲ್ಲಿ ಅಭಿಷೇಕ್ ಹಾಗೂ ಅವಿವಾ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಂಬರೀಶ್ ಹುಟ್ಟೂರು ಮಂಡ್ಯದಲ್ಲಿ ಜೂನ್ 16 ರಂದು ಬೀಗರ ಔತಣ ಕಾರ್ಯಕ್ರಮ ಇದ್ದು, ಈ ಕಾರ್ಯಕ್ರಮಕ್ಕೆ ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಕಳೆದ ವರ್ಷ ಡಿಸೆಂಬರ್ 11ರಂದು ಈ ಜೋಡಿ ನಿಶ್ವಿತಾರ್ಥ ಮಾಡಿಕೊಂಡಿದ್ದರು. ಆಗಲೂ ಕೂಡಾ ಅನೇಕ ಗಣ್ಯರು ಹಾಜರಾಗಿದ್ದರು.

ಮದುವೆ ಕ್ಷಣದ ಕೆಲವು ಫೋಟೋಗಳು ಇಲ್ಲಿವೆ

ಅಭಿ-ಅವಿ

ಅಭಿ-ಅವಿ

ಅಭಿ-ಅವಿ

ಯಶ್

abhi

abhi

abhi

abhi

ಅಭಿ

abhi

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...

ʼಧುರಂಧರ್ʼ ಸೀಕ್ವೆಲ್‌ಗೆ ʼAʼ ಸರ್ಟಿಫಿಕೇಟ್; 21 ಕಡೆ ಕತ್ತರಿ, ರನ್‌ಟೈಮ್ ಎಷ್ಟು ಗೊತ್ತೇ?

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ʼಧುರಂಧರ್‌ʼನ ಮುಂದುವರೆದ ಭಾಗ 'ಧುರಂಧರ್: ದಿ...

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...